AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಖ್ರಿ ಸರ್ಕಲ್‌ ಅಪಘಾತಕ್ಕೆ ಟ್ವಿಸ್ಟ್: ಲ್ಯಾಂಬೋರ್ಗಿನಿ ಕಾರು ಓಡಿಸಿದವರು ಯಾರು ಗೊತ್ತಾ?

ಬೆಂಗಳೂರು: ಫೆಬ್ರವರಿ 9ರಂದು ನಗರದ ಮೇಖ್ರಿ ಸರ್ಕಲ್‌ ಬಳಿ ಲ್ಯಾಂಬೋರ್ಗಿನಿ ಕಾರು ಸರಣಿ ಅಪಘಾತ ಸಂಬಂಧ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್​ಗೆ ಸದಾಶಿವನಗರ ಸಂಚಾರಿ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಫೆ.9ರಂದು ಲ್ಯಾಂಬೋರ್ಗಿನಿ ಕಾರಿನಿಂದ ಸರಣಿ ಅಪಘಾತವಾಗಿತ್ತು. ಘಟನೆಯಲ್ಲಿ ಬೈಕ್ ಸವಾರ ಪ್ರಫುಲ್ ಎಂಬಾತನ ಕಾಲು ಮೂಳೆ ಮುರಿದಿತ್ತು. ಅಪಘಾತದ ಬಳಿಕ ದುಬಾರಿ ಕಾರನ್ನ ಬಿಟ್ಟು ಚಾಲಕ ಮತ್ತೊಂದು ಕಾರಿನಲ್ಲಿ ಪರಾರಿಯಾಗಿದ್ದ. ಘಟನೆ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಘಟನಾ ಸ್ಥಳಕ್ಕೆ […]

ಮೇಖ್ರಿ ಸರ್ಕಲ್‌ ಅಪಘಾತಕ್ಕೆ ಟ್ವಿಸ್ಟ್: ಲ್ಯಾಂಬೋರ್ಗಿನಿ ಕಾರು ಓಡಿಸಿದವರು ಯಾರು ಗೊತ್ತಾ?
ಸಾಧು ಶ್ರೀನಾಥ್​
|

Updated on:Feb 12, 2020 | 1:02 PM

Share

ಬೆಂಗಳೂರು: ಫೆಬ್ರವರಿ 9ರಂದು ನಗರದ ಮೇಖ್ರಿ ಸರ್ಕಲ್‌ ಬಳಿ ಲ್ಯಾಂಬೋರ್ಗಿನಿ ಕಾರು ಸರಣಿ ಅಪಘಾತ ಸಂಬಂಧ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್​ಗೆ ಸದಾಶಿವನಗರ ಸಂಚಾರಿ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಫೆ.9ರಂದು ಲ್ಯಾಂಬೋರ್ಗಿನಿ ಕಾರಿನಿಂದ ಸರಣಿ ಅಪಘಾತವಾಗಿತ್ತು. ಘಟನೆಯಲ್ಲಿ ಬೈಕ್ ಸವಾರ ಪ್ರಫುಲ್ ಎಂಬಾತನ ಕಾಲು ಮೂಳೆ ಮುರಿದಿತ್ತು. ಅಪಘಾತದ ಬಳಿಕ ದುಬಾರಿ ಕಾರನ್ನ ಬಿಟ್ಟು ಚಾಲಕ ಮತ್ತೊಂದು ಕಾರಿನಲ್ಲಿ ಪರಾರಿಯಾಗಿದ್ದ. ಘಟನೆ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸದಾಶಿವನಗರ ಪೊಲೀಸರು ಕಾರನ್ನು ಜಪ್ತಿ ಮಾಡಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಪ್ರಕರಣ ಬೆನ್ನು ಹತ್ತಿದ ಪೊಲೀಸರು, ಪ್ರತ್ಯಕ್ಷದರ್ಶಿಗಳ ಹೇಳಿಕೆ ಹಾಗೂ ಟೆಕ್ನಿಕಲ್ ಸಾಕ್ಷ್ಯಗಳನ್ನ ಆಧರಿಸಿ ತನಿಖೆ ನಡೆಸಿದ್ದಾರೆ.

ಈ ನಡುವೆ ಅಪಘಾತ ಮಾಡಿದ್ದು ತಾನೇ ಎಂದು ಓರ್ವ ವ್ಯಕ್ತಿ ಮುಂದೆ ಬಂದಿದ್ದ. ಆದ್ರೆ ಸಾಕ್ಷ್ಯಾಧಾರಗಳಿಂದ ಕಾರು ಚಲಾಯಿಸುತ್ತಿದ್ದದ್ದು ಮಹಮ್ಮದ್ ನಲಪಾಡ್ ಎಂದು ಸಾಬೀತಾದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸದಾಶಿವನಗರ ಸಂಚಾರಿ ಠಾಣೆ ಪೊಲೀಸರಿಂದ ನಲಪಾಡ್​ಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ಕಾರು ಚಾಲನೆ ಮಾಡಿದ್ದು ನಲಪಾಡ್ ಅಪಘಾತ ನಡೆದ ದಿನ ವಾಹನ ಚಾಲನೆ ಮಾಡುತ್ತಿದ್ದವರು ಬೇರೆ ವಾಹನದಲ್ಲಿ ಪರಾರಿಯಾಗಿದ್ದಾರೆ. ಈ ಸಂಬಂಧ ನಿನ್ನೆ ಪೊಲೀಸ್ ಠಾಣೆಗೆ ಸೆರೆಂಡರ್ ಆಗಲು ಒಬ್ಬ ಬಂದಿದ್ದ. ವಿಚಾರಣೆ ವೇಳೆ ಅಪಘಾತ ಮಾಡಿದವನು ಈತನಲ್ಲ ಎಂದು ತಿಳಿದು ಬಂದಿದೆ.

ಖಚಿತವಾದ ಸಾಕ್ಷ್ಯ, ಆಧಾರಗಳ ಮೇಲೆ ಮೊಹಮದ್ ನಲಪಾಡ್ ಕಾರು ಚಾಲನೆ ಮಾಡುತ್ತಿದ್ದ ಎಂಬುದು ಖಚಿತವಾಗಿ ತಿಳಿದುಬಂದಿದೆ. ಹಾಗಾಗಿ ನಲಪಾಡ್​ಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲು ಮುಂದಾಗಿದ್ದೇವೆ. ವಿಚಾರಣೆಗೆ ಹಾಜರಾದ ನಂತರ ಪ್ರಕರಣ ಸಂಬಂಧ ಮುಂದಿನ ತನಿಖೆ ಕೈಗೊಳ್ಳುತ್ತೇವೆ ಎಂದು ಸಂಚಾರಿ ವಿಭಾಗದ ಜಂಟಿ ಆಯುಕ್ತ ರವಿಕಾಂತೇ ಗೌಡ ಹೇಳಿದ್ದಾರೆ.

ಇದು ಸಣ್ಣ ಆಕ್ಸಿಡೆಂಟ್ ಅಷ್ಟೆ: ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್, ಅಪಘಾತ ಸಂಬಂಧ ನನಗೆ ಸಂಪೂರ್ಣ ಮಾಹಿತಿ ಇಲ್ಲ. ಶಾಸಕರ ಮಗ ಇರಬಹುದು ಅಥವಾ ಶಾಸಕರೇ ಆಗಿರಬಹುದು ಕಾನೂನುಬಾಹಿರವಾಗಿ ವರ್ತನೆ ಮಾಡಿದರೆ ಕ್ರಮ ಕೈಗೊಳ್ಳಬೇಕು. ಇದು ಸಣ್ಣ ಆಕ್ಸಿಡೆಂಟ್ ಅಷ್ಟೇ, ದೊಡ್ಡ ಆಕ್ಸಿಡೆಂಟ್ ಅಲ್ಲ ಎಂದಿದ್ದಾರೆ.

ಮಾಧ್ಯಮಗಳಿಗೆ ಸೆಲ್ಯೂಟ್​ ಹೊಡೆದ ಶಾಸಕ ಹ್ಯಾರಿಸ್: ಮೇಖ್ರಿ ಸರ್ಕಲ್ ಬಳಿ ಐಷಾರಾಮಿ ಕಾರು ಅಪಘಾತ ಪ್ರಕರಣದಲ್ಲಿ ಪುತ್ರ ನಲಪಾಡ್ ಕಾರು ಚಾಲನೆ ಬಗ್ಗೆ ಪ್ರತಿಕ್ರಿಯೆಗೆ ಶಾಸಕ ಹ್ಯಾರಿಸ್ ನಿರಾಕರಿಸಿದ್ದಾರೆ.  ಮಾಧ್ಯಮಗಳಿಗೆ ನಮಸ್ಕಾರ ಹೊಡೆದು ಹೊರಟ ಶಾಸಕ ಹ್ಯಾರಿಸ್, ಕೆಪಿಸಿಸಿ ಕಚೇರಿಯಲ್ಲಿ ಸಭೆ ಬಳಿಕ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

Published On - 4:27 pm, Tue, 11 February 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ