AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ತಮ್ಮನ ಸಾವಿನ ಸೇಡಿಗೆ ಅಣ್ಣನ ಕೊಲೆ; ಇಬ್ಬರು ಅಂದರ್

ಯಾರು ಹೇಗೆ ಯಾವಾಗ ಏನು ಬೇಕಾದ್ರೂ ಮಾಡಬಹುದು ಎಂಬುದಕ್ಕೆ ಈ ಸ್ಟೋರಿ ಕನ್ನಡಿಯಂತಿದೆ. ಸ್ವಂತ ತಮ್ಮನನ್ನೇ ಕೊಲೆ ಮಾಡಿ ಜೈಲಿಂದ ಬೇಲ್​ ಮೇಲೆ ಹೊರಗಡೆ ಬಂದಿದ್ದವನನ್ನು ಎರಡನೇ ತಮ್ಮ ಜೊತೆಗೆ ಸಂಬಂಧಿಯೊಬ್ಬ ಸೇರಿ ಶಿವಮೊಗ್ಗ ಸಾಗರ ಹೈವೇಯಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಒಂದೂವರೆ ವರ್ಷದ ಹಿಂದಿನ ತಮ್ಮನ ಕೊಲೆಗೆ ಪ್ರತಿಕಾರ ತೀರಿಸಿಕೊಂಡಿದ್ದಾರೆ.

ಶಿವಮೊಗ್ಗ: ತಮ್ಮನ ಸಾವಿನ ಸೇಡಿಗೆ ಅಣ್ಣನ ಕೊಲೆ; ಇಬ್ಬರು ಅಂದರ್
ಮೃತ ರಫೀಕ್​
Basavaraj Yaraganavi
| Edited By: ಕಿರಣ್ ಹನುಮಂತ್​ ಮಾದಾರ್|

Updated on:Mar 01, 2024 | 7:06 PM

Share

ಶಿವಮೊಗ್ಗ, ಮಾ.01: ನಿನ್ನೆ(ಫೆ.01) ಸಂಜೆ ಸಾಗರ(Sagara) ತಾಲೂಕಿನ ಆನಂದಪುರ ಸಮೀಪದಲ್ಲಿ ಓರ್ವ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಹೆದ್ದಾರಿ ಪಕ್ಕದಲ್ಲಿ ಕೊಲೆ(Murder)  ನೋಡಿದ ಜನರು ಗಾಬರಿಯಾಗಿದ್ದರು. ಇನ್ನು ವಿಷಯ ತಿಳಿಯುತ್ತಿದ್ದಂತೆ ಆನಂದಪುರ ಮತ್ತು ಸಾಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕೊಲೆ ಆಗಿದ್ದವರು ಸೊರಬ ತಾಲೂಕಿನ ಉಡಿನೀರು ಗ್ರಾಮದ ರಫಿಕ್ (39) ಎನ್ನುವುದು ಪೊಲೀಸರಿಗೆ ತನಿಖೆ ವೇಳೆ ತಿಳಿದುಬಂದಿದೆ.

ತಮ್ಮನ ಕೊಲೆಯ ಸೇಡಿಗೆ ಅಣ್ಣನ ಕೊಲೆ

ಒಂದೂವರೆ ವರ್ಷದ ಹಿಂದೆ ರಫೀಕ್ ತನ್ನ ಸ್ವಂತ ತಮ್ಮ ಸಲೀಂನನ್ನು  ಕೊಲೆ ಮಾಡಿದ್ದನು. ಈ ಪ್ರಕರಣದಲ್ಲಿ ಜೈಲು ಸೇರಿದ್ದನು. ಕೆಲವು ತಿಂಗಳ ಹಿಂದೆ ಬೇಲ್ ಮೇಲೆ ರಫಿಕ್ ಹೊರಗೆ ಬಂದಿದ್ದನು. ಸಲೀಂ ಕೊಲೆ ಪ್ರಕರಣದಲ್ಲಿ ರಫಿಕ್ ತಮ್ಮ ಹಾಗೂ ಕೊಲೆಯಾದ ಸಲೀಂನ ಅಣ್ಣ ಇನಾಯತ್ ದೂರುದಾರನಾಗಿದ್ದನು. ತಮ್ಮ ಕೊಲೆಯ ಪ್ರಕರಣದಲ್ಲಿ ಸಾಕ್ಷಿ ಹೇಳದಂತೆ ತಮ್ಮನಿಗೆ ಜೀವ ಬೆದರಿಕೆ ಹಾಕಿದ್ದನು. ಇದಕ್ಕೆ ನಾವೇ ನಿನ್ನೆ ಜೀವ ತೆಗೆಯುತ್ತೇವೆ. ಇದಕ್ಕಾಗಿ ಎಲ್ಲ ಮೊದಲೇ ಇನಾಯತ್ ಎಲ್ಲ ಪ್ಲ್ಯಾನ್ ಮಾಡಿಕೊಂಡೇ ಬಂದಿದ್ದನು. ಪ್ಲ್ಯಾನ್ ನಂತೆ ರಫಿಕ್​ನನ್ನು ನಂಬಿಸಿ ಶಿವಮೊಗ್ಗಕ್ಕೆ ಶಾಪಿಂಗ್ ನೆಪದಲ್ಲಿ ಕರೆತಂದಿದ್ದರು. ಊರಿಗೆ ವಾಪಸ್ ಹೋಗುವಾಗ ತಮ್ಮ ಸಲೀಂ ಕೊಲೆ ಪ್ರಕರಣದ ಸೇಡಿಗಾಗಿ ಅಣ್ಣ ರಫಿಕ್​ನನ್ನು ತಮ್ಮ ಇನಾಯತ್ ಮತ್ತು ಅಕ್ಕನ ಮಗ ಸಮೀರ್ ಇಬ್ಬರು ಸೇರಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಮುಖ ಜಜ್ಜಿ ಅಪರಿಚಿತ ಮಹಿಳೆಯನ್ನ ಕೊಲೆಗೈದ ದುಷ್ಕರ್ಮಿಗಳು

ಮೊದಲು ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಬಳಿಕ ತಂತಿಯಿಂದ ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಾರೆ. ಕೊನೆಗೆ ಹೋಗುವಾಗ ಆತನ ಮೇಲೆ ಕಾರ್ ಕೂಡ ಹತ್ತಿಸಿದ್ದಾರೆ. ಆತ ಮೃತಪಟ್ಟಿರುವುದು ಖಚಿತವಾದ ಬಳಿಕ ಇಬ್ಬರು ಕಾರ್​ನಲ್ಲಿ ಅಲ್ಲಿಂದ ಎಸ್ಕೇಪ್ ಆಗಿದ್ದರು. ಮಗನ ಸಾವಿನ ಸುದ್ದಿ ತಿಳಿದ ತಂದೆ ಕಂಗಾಲಾಗಿದ್ದರು. ಒಂದೂವರೆ ವರ್ಷದ ಹಿಂದೆ ಕಿರಿ ಮಗ ಸಲೀಂ ಕೊಲೆ ಆಗಿತ್ತು. ಅಣ್ಣ ರಫಿಕ್ ಕೊಲೆ ಮಾಡಿ, ಬೇಲ್ ಮೇಲೆ ಬಂದ ಬಳಿಕ ಎಲ್ಲವೂ ಸರಿಯಾಗಿತ್ತು. ಆದ್ರೆ, ಆಸ್ತಿಯಾಗಿ ರಫಿಕ್ ತಮ್ಮ ಇನಾಯತ್ ಮತ್ತು ಮಗಳ ಮಗ ಸಮೀರ್ ಸೇರಿ ನಿನ್ನೆ ದೊಡ್ಡ ಮಗ ರಫಿಕ್​ನನ್ನು ಹತ್ಯೆ ಮಾಡಿದ್ದಾರೆ. ಇವರಿಗೆ ತಕ್ಕ ಶಿಕ್ಷೆಯಾಗಬೇಕೆಂದು ಮೃತನ ತಂದೆ ಮಹ್ಮದ್ ಗೌಸ್ ಆಕ್ರೋಶ ಹೊರಹಾಕಿದ್ದಾರೆ.

ಹೀಗೆ ಒಂದೂವರೆ ವರ್ಷದ ಹಿಂದೆ ಆಸ್ತಿ ಮತ್ತು ವೈಯಕ್ತಿಕ ವಿಚಾರಕ್ಕೆ ಒಡಹುಟ್ಟಿದ ತಮ್ಮನನ್ನೇ ಅಣ್ಣ ರಫಿಕ್ ಮರ್ಡರ್ ಮಾಡಿದ್ದನು. ಈ ಕೊಲೆ ಪ್ರಕರಣದಲ್ಲಿ ಜೈಲಿಗೆ ಸೇರಿದ್ದ ಅಣ್ಣ ರಫಿಕ್ ಕೆಲವು ತಿಂಗಳ ಹಿಂದೆ ಬೇಲ್ ಮೇಲೆ ಹೊರಗೆ ಬಂದಿದ್ದನು. ಈ ನಡುವೆ ಕುಟುಂಬದಲ್ಲಿ ದ್ವೇಷದ ಹೊಗೆ ಹಾಗೆ ಇತ್ತು. ಇನಾಯತ್, ತಮ್ಮನನ್ನು ಕೊಲೆ ಮಾಡಿದ ರಫಿಕ್​ಗೆ ಆಸ್ತಿಯಲ್ಲಿ ಯಾವುದೇ ಪಾಲು ನೀಡದಂತೆ ತಂದೆಗೆ ಖಡಕ್ ಆಗಿ ಹೇಳಿದ್ದನು. ಸಲೀಂಗೆ ಬರುವ ಎರಡು ಎಕರೆ ಪಾಲು ಇನಾಯತ್​ಗೆ ಕೊಡುವುದಾಗಿ ತಂದೆ ಹೇಳಿದ್ದನು. ಆದ್ರೆ, ಇನಾಯತ್ ಮಾತ್ರ ರಫಿಕ್​ಗೆ ಆಸ್ತಿ ಹಂಚಿಕೆಗೆ ವಿರೋಧ ಮಾಡಿದ್ದನು.

ಇದನ್ನೂ ಓದಿ:ಬಾಗಲಕೋಟೆ: ಮದುವೆ ಮನೆಯಲ್ಲಿ ರಕ್ತದೋಕುಳಿ; ರಾಡ್​ನಿಂದ ‌ಹೊಡೆದು ಯುವಕನ ಭೀಕರ ಕೊಲೆ‌

ಈ ನಡುವೆ ಇನಾಯತ್ ಮೇಲ್ನೋಟಕ್ಕೆ ತಮ್ಮನ ಕೊಲೆ ಮಾಡಿದ ಅಣ್ಣನ ಜೊತೆ ಚೆನ್ನಾಗಿಯೇ ಇದ್ದಂತೆ ಡ್ರಾಮಾ ಮಾಡುತ್ತಿದ್ದನು. ಆದ್ರೆ, ಒಳಗೆ ಮಾತ್ರ ಆತನ ರಕ್ತ ಕುದಿಯುತ್ತಿತ್ತು. ತಮ್ಮನ ಕೊಲೆ ಮಾಡಿದ ಕಿರಾತಕ ಅಣ್ಣನನ್ನು ಸುಮ್ಮನೆ ಬಿಡಬಾರದು ಎನ್ನುವ ತೀರ್ಮಾನಕ್ಕೆ ಬಂದಿದ್ದನು. ನಿನ್ನೆ ಇನಾಯತ್ ಪ್ಲ್ಯಾನ್ ಮಾಡಿ ತನ್ನ ಒಡಹುಟ್ಟಿದ ಅಣ್ಣನ ಬರ್ಬರ ಹತ್ಯೆ ಮಾಡಿದ್ದಾನೆ. ಕೊಲೆಯ ಬಳಿಕ ಇನಾಯತ್ ಮತ್ತು ಕೊಲೆಯಾದ ರಫಿಕ್ ಅಕ್ಕನ ಮಗ ಸಮೀರ್ ಇಬ್ಬರನ್ನು ಬಂಧಿಸಲಾಗಿದೆ. ಇಬ್ಬರ ಮೇಲೂ ಆನಂದಪುರ ಪೊಲೀಸ್ ಠಾಣೆಯಲ್ಲಿ ಮರ್ಡರ್ ಕೇಸ್ ದಾಖಲು ಆಗಿದೆ. ಕುಟುಂಬದಲ್ಲಿ ಶುರುವಾದ ಆಸ್ತಿ ವಿವಾದವು ಅಣ್ಣ ಮತ್ತು ತಮ್ಮ ಇಬ್ಬರನ್ನು ಬಲಿ ಪಡೆದಿದೆ. ಅಣ್ಣನ ಕೊಲೆ ಕೇಸ್​ನಲ್ಲಿ ಈಗ ತಮ್ಮನು ಜೈಲು ಸೇರಿದ್ದಾನೆ. ಮೂವರು ಗಂಡು ಮಕ್ಕಳಲ್ಲಿ ಇಬ್ಬರು ಕೊಲೆಯಾಗಿದ್ದಾರೆ. ಈ ಎಲ್ಲ ಬೆಳವಣಿಗೆ ನೋಡಿದ ಹೆತ್ತವರಿಗೆ ದೊಡ್ಡ ಆಘಾತವಾಗಿದೆ.

ರಾಜ್ಯ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

Published On - 7:05 pm, Fri, 1 March 24

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ