AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರ ತಂದೆಗೆ ಮಹಾ ಮೋಸ: ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳನ್ನು ಮಾರುತ್ತಿದ್ದ ಮೈಸೂರಿನ ಕಾಂಗ್ರೆಸ್ ಮುಖಂಡ ಸೇರಿ ಐವರು ಅರೆಸ್ಟ್

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳನ್ನು ಮಾರಾಟ ಮಾಡುತ್ತಿದ್ದ ಮೈಸೂರು ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾಂ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ..

ಶಾಸಕರ ತಂದೆಗೆ ಮಹಾ ಮೋಸ: ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳನ್ನು ಮಾರುತ್ತಿದ್ದ ಮೈಸೂರಿನ ಕಾಂಗ್ರೆಸ್ ಮುಖಂಡ ಸೇರಿ ಐವರು ಅರೆಸ್ಟ್
ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳನ್ನು ಮಾರುತ್ತಿದ್ದ ಮೈಸೂರಿನ ಕಾಂಗ್ರೆಸ್ ಮುಖಂಡ ಸೇರಿ ಐವರು ಅರೆಸ್ಟ್
TV9 Web
| Edited By: Rakesh Nayak Manchi|

Updated on:Sep 17, 2022 | 8:29 AM

Share

ಮೈಸೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳನ್ನು ಮಾರಾಟ ಮಾಡುತ್ತಿದ್ದ ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾಂ ಸೇರಿದಂತೆ ಐವರು ಆರೋಪಿಗಳನ್ನು ಕುವೆಂಪು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಹಲವು ನಿವೇಶನ ನಕಲಿ ಸೃಷ್ಟಿಸಿ ಮಾರಾಟ ಮಾಡಿದ್ದು, ಪೊಲೀಸರು ಕೈಗೊಂಡ ಕಾರ್ಯಾಚರಣೆ ವೇಳೆ ಖತರ್ನಾಕ್ ತಂಡದ ಕೈವಾಡ ತಿಳಿದುಬಂದಿದೆ. ಅದರಂತೆ ಪೊಲೀಸರು ಐವರನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

ಶಾಸಕ ರಿಜ್ವಾನ್ ಅರ್ಷದ್ ಅವರ ತಂದೆಗೇ ಖತರ್ನಾಕ್ ತಂಡ ಮೋಸ ಮಾಡಿದೆ. ನಗರದ ಉದಯಗಿರಿಯಲ್ಲಿರುವ 80*100 ಅಡಿ ವಿಸ್ತೀರ್ಣದ ನಿವೇಶನದ ನಕಲಿ ದಾಖಲೆ ಸೃಷ್ಟಿ ಮುಡಾಗೆ ಸೇರಿದ ನಿವೇಶದ ದಾಖಲೆ ಪೋರ್ಜರಿ ಮಾಡಿರುವ ರಾಜಾರಾಂ ಮತ್ತು ತಂಡ ನಿವೇಶನದ ಮೇಲೆ‌ ಬ್ಯಾಂಕ್​ನಲ್ಲಿ ಸಾಲ ಪಡೆಯಲು ಯತ್ನಿಸಿದೆ. ನಕಲಿ ದಾಖಲೆ ಸೃಷ್ಟಿಸಲು ವಿವಿಧ ಇಲಾಖೆಗೆ ಸಂಬಂಧಿಸಿದ ಸೀಲ್​ಗಳನ್ನು ಕೂಡ ಪೋರ್ಜರಿ ಮಾಡಲಾಗಿದೆ.

ನಗರದ ರಾಮಕೃಷ್ಟನಗರದ ಐ ಬ್ಲಾಕ್​ನಲ್ಲಿರುವ ಗೋಲ್ಡನ್ ಬೆಲ್ಸ್ ಸರ್ವೀಸ್ ಅಪಾರ್ಟ್ ಮೆಂಟ್ ನಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದ ಸೀಲ್​ಗಳು ಹಾಗೂ ಇ-ಸ್ಟಾಂಪ್ ಪೇಪರ್, ಸ್ಕ್ಯಾನರ್, ಪ್ರಿಂಟರ್​ಗಳು ಪತ್ತೆಯಾಗಿವೆ. ಪ್ರಕರಣ ಸಂಬಂಧ ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾ, ಬೆಂಗಳೂರಿನ ಕಟ್ಟಿಗೇನಹಳ್ಳಿ ನಿವಾಸಿ ಮಹಮ್ಮದ್ ನಯೀಮ್, ಮೊಹಮ್ಮದ್ ಶಹಭಾಜ್ ಮಲ್ಲಿಕ್, ಭಾಸ್ಕರ್ ಸೇರಿದಂತೆ ಒಟ್ಟು ಐವರನ್ನು ಬಂಧಿಸಿ ತನಿಖೆ ನಡೆಸಲಾಗಿದೆ. ಪೊಲೀಸರ ತೀವ್ರ ವಿಚಾರಣೆ ನಡುವೆ ಆರೋಪಿಗಳು ಈ ಹಿಂದೆ ನಕಲಿ ದಾಖಲೆ ಸೃಷ್ಟಿಸಿ ಅನೇಕ ನಿವೇಶನಗಳನ್ನು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:21 am, Sat, 17 September 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ