AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರ ತಂದೆಗೆ ಮಹಾ ಮೋಸ: ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳನ್ನು ಮಾರುತ್ತಿದ್ದ ಮೈಸೂರಿನ ಕಾಂಗ್ರೆಸ್ ಮುಖಂಡ ಸೇರಿ ಐವರು ಅರೆಸ್ಟ್

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳನ್ನು ಮಾರಾಟ ಮಾಡುತ್ತಿದ್ದ ಮೈಸೂರು ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾಂ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ..

ಶಾಸಕರ ತಂದೆಗೆ ಮಹಾ ಮೋಸ: ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳನ್ನು ಮಾರುತ್ತಿದ್ದ ಮೈಸೂರಿನ ಕಾಂಗ್ರೆಸ್ ಮುಖಂಡ ಸೇರಿ ಐವರು ಅರೆಸ್ಟ್
ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳನ್ನು ಮಾರುತ್ತಿದ್ದ ಮೈಸೂರಿನ ಕಾಂಗ್ರೆಸ್ ಮುಖಂಡ ಸೇರಿ ಐವರು ಅರೆಸ್ಟ್
TV9 Web
| Updated By: Rakesh Nayak Manchi|

Updated on:Sep 17, 2022 | 8:29 AM

Share

ಮೈಸೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳನ್ನು ಮಾರಾಟ ಮಾಡುತ್ತಿದ್ದ ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾಂ ಸೇರಿದಂತೆ ಐವರು ಆರೋಪಿಗಳನ್ನು ಕುವೆಂಪು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಹಲವು ನಿವೇಶನ ನಕಲಿ ಸೃಷ್ಟಿಸಿ ಮಾರಾಟ ಮಾಡಿದ್ದು, ಪೊಲೀಸರು ಕೈಗೊಂಡ ಕಾರ್ಯಾಚರಣೆ ವೇಳೆ ಖತರ್ನಾಕ್ ತಂಡದ ಕೈವಾಡ ತಿಳಿದುಬಂದಿದೆ. ಅದರಂತೆ ಪೊಲೀಸರು ಐವರನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

ಶಾಸಕ ರಿಜ್ವಾನ್ ಅರ್ಷದ್ ಅವರ ತಂದೆಗೇ ಖತರ್ನಾಕ್ ತಂಡ ಮೋಸ ಮಾಡಿದೆ. ನಗರದ ಉದಯಗಿರಿಯಲ್ಲಿರುವ 80*100 ಅಡಿ ವಿಸ್ತೀರ್ಣದ ನಿವೇಶನದ ನಕಲಿ ದಾಖಲೆ ಸೃಷ್ಟಿ ಮುಡಾಗೆ ಸೇರಿದ ನಿವೇಶದ ದಾಖಲೆ ಪೋರ್ಜರಿ ಮಾಡಿರುವ ರಾಜಾರಾಂ ಮತ್ತು ತಂಡ ನಿವೇಶನದ ಮೇಲೆ‌ ಬ್ಯಾಂಕ್​ನಲ್ಲಿ ಸಾಲ ಪಡೆಯಲು ಯತ್ನಿಸಿದೆ. ನಕಲಿ ದಾಖಲೆ ಸೃಷ್ಟಿಸಲು ವಿವಿಧ ಇಲಾಖೆಗೆ ಸಂಬಂಧಿಸಿದ ಸೀಲ್​ಗಳನ್ನು ಕೂಡ ಪೋರ್ಜರಿ ಮಾಡಲಾಗಿದೆ.

ನಗರದ ರಾಮಕೃಷ್ಟನಗರದ ಐ ಬ್ಲಾಕ್​ನಲ್ಲಿರುವ ಗೋಲ್ಡನ್ ಬೆಲ್ಸ್ ಸರ್ವೀಸ್ ಅಪಾರ್ಟ್ ಮೆಂಟ್ ನಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದ ಸೀಲ್​ಗಳು ಹಾಗೂ ಇ-ಸ್ಟಾಂಪ್ ಪೇಪರ್, ಸ್ಕ್ಯಾನರ್, ಪ್ರಿಂಟರ್​ಗಳು ಪತ್ತೆಯಾಗಿವೆ. ಪ್ರಕರಣ ಸಂಬಂಧ ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾ, ಬೆಂಗಳೂರಿನ ಕಟ್ಟಿಗೇನಹಳ್ಳಿ ನಿವಾಸಿ ಮಹಮ್ಮದ್ ನಯೀಮ್, ಮೊಹಮ್ಮದ್ ಶಹಭಾಜ್ ಮಲ್ಲಿಕ್, ಭಾಸ್ಕರ್ ಸೇರಿದಂತೆ ಒಟ್ಟು ಐವರನ್ನು ಬಂಧಿಸಿ ತನಿಖೆ ನಡೆಸಲಾಗಿದೆ. ಪೊಲೀಸರ ತೀವ್ರ ವಿಚಾರಣೆ ನಡುವೆ ಆರೋಪಿಗಳು ಈ ಹಿಂದೆ ನಕಲಿ ದಾಖಲೆ ಸೃಷ್ಟಿಸಿ ಅನೇಕ ನಿವೇಶನಗಳನ್ನು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:21 am, Sat, 17 September 22

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು