AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರ ತಂದೆಗೆ ಮಹಾ ಮೋಸ: ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳನ್ನು ಮಾರುತ್ತಿದ್ದ ಮೈಸೂರಿನ ಕಾಂಗ್ರೆಸ್ ಮುಖಂಡ ಸೇರಿ ಐವರು ಅರೆಸ್ಟ್

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳನ್ನು ಮಾರಾಟ ಮಾಡುತ್ತಿದ್ದ ಮೈಸೂರು ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾಂ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ..

ಶಾಸಕರ ತಂದೆಗೆ ಮಹಾ ಮೋಸ: ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳನ್ನು ಮಾರುತ್ತಿದ್ದ ಮೈಸೂರಿನ ಕಾಂಗ್ರೆಸ್ ಮುಖಂಡ ಸೇರಿ ಐವರು ಅರೆಸ್ಟ್
ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳನ್ನು ಮಾರುತ್ತಿದ್ದ ಮೈಸೂರಿನ ಕಾಂಗ್ರೆಸ್ ಮುಖಂಡ ಸೇರಿ ಐವರು ಅರೆಸ್ಟ್
TV9 Web
| Edited By: |

Updated on:Sep 17, 2022 | 8:29 AM

Share

ಮೈಸೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳನ್ನು ಮಾರಾಟ ಮಾಡುತ್ತಿದ್ದ ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾಂ ಸೇರಿದಂತೆ ಐವರು ಆರೋಪಿಗಳನ್ನು ಕುವೆಂಪು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಹಲವು ನಿವೇಶನ ನಕಲಿ ಸೃಷ್ಟಿಸಿ ಮಾರಾಟ ಮಾಡಿದ್ದು, ಪೊಲೀಸರು ಕೈಗೊಂಡ ಕಾರ್ಯಾಚರಣೆ ವೇಳೆ ಖತರ್ನಾಕ್ ತಂಡದ ಕೈವಾಡ ತಿಳಿದುಬಂದಿದೆ. ಅದರಂತೆ ಪೊಲೀಸರು ಐವರನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

ಶಾಸಕ ರಿಜ್ವಾನ್ ಅರ್ಷದ್ ಅವರ ತಂದೆಗೇ ಖತರ್ನಾಕ್ ತಂಡ ಮೋಸ ಮಾಡಿದೆ. ನಗರದ ಉದಯಗಿರಿಯಲ್ಲಿರುವ 80*100 ಅಡಿ ವಿಸ್ತೀರ್ಣದ ನಿವೇಶನದ ನಕಲಿ ದಾಖಲೆ ಸೃಷ್ಟಿ ಮುಡಾಗೆ ಸೇರಿದ ನಿವೇಶದ ದಾಖಲೆ ಪೋರ್ಜರಿ ಮಾಡಿರುವ ರಾಜಾರಾಂ ಮತ್ತು ತಂಡ ನಿವೇಶನದ ಮೇಲೆ‌ ಬ್ಯಾಂಕ್​ನಲ್ಲಿ ಸಾಲ ಪಡೆಯಲು ಯತ್ನಿಸಿದೆ. ನಕಲಿ ದಾಖಲೆ ಸೃಷ್ಟಿಸಲು ವಿವಿಧ ಇಲಾಖೆಗೆ ಸಂಬಂಧಿಸಿದ ಸೀಲ್​ಗಳನ್ನು ಕೂಡ ಪೋರ್ಜರಿ ಮಾಡಲಾಗಿದೆ.

ನಗರದ ರಾಮಕೃಷ್ಟನಗರದ ಐ ಬ್ಲಾಕ್​ನಲ್ಲಿರುವ ಗೋಲ್ಡನ್ ಬೆಲ್ಸ್ ಸರ್ವೀಸ್ ಅಪಾರ್ಟ್ ಮೆಂಟ್ ನಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದ ಸೀಲ್​ಗಳು ಹಾಗೂ ಇ-ಸ್ಟಾಂಪ್ ಪೇಪರ್, ಸ್ಕ್ಯಾನರ್, ಪ್ರಿಂಟರ್​ಗಳು ಪತ್ತೆಯಾಗಿವೆ. ಪ್ರಕರಣ ಸಂಬಂಧ ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾ, ಬೆಂಗಳೂರಿನ ಕಟ್ಟಿಗೇನಹಳ್ಳಿ ನಿವಾಸಿ ಮಹಮ್ಮದ್ ನಯೀಮ್, ಮೊಹಮ್ಮದ್ ಶಹಭಾಜ್ ಮಲ್ಲಿಕ್, ಭಾಸ್ಕರ್ ಸೇರಿದಂತೆ ಒಟ್ಟು ಐವರನ್ನು ಬಂಧಿಸಿ ತನಿಖೆ ನಡೆಸಲಾಗಿದೆ. ಪೊಲೀಸರ ತೀವ್ರ ವಿಚಾರಣೆ ನಡುವೆ ಆರೋಪಿಗಳು ಈ ಹಿಂದೆ ನಕಲಿ ದಾಖಲೆ ಸೃಷ್ಟಿಸಿ ಅನೇಕ ನಿವೇಶನಗಳನ್ನು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:21 am, Sat, 17 September 22

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?