AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರ ತಂದೆಗೆ ಮಹಾ ಮೋಸ: ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳನ್ನು ಮಾರುತ್ತಿದ್ದ ಮೈಸೂರಿನ ಕಾಂಗ್ರೆಸ್ ಮುಖಂಡ ಸೇರಿ ಐವರು ಅರೆಸ್ಟ್

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳನ್ನು ಮಾರಾಟ ಮಾಡುತ್ತಿದ್ದ ಮೈಸೂರು ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾಂ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ..

ಶಾಸಕರ ತಂದೆಗೆ ಮಹಾ ಮೋಸ: ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳನ್ನು ಮಾರುತ್ತಿದ್ದ ಮೈಸೂರಿನ ಕಾಂಗ್ರೆಸ್ ಮುಖಂಡ ಸೇರಿ ಐವರು ಅರೆಸ್ಟ್
ನಕಲಿ ದಾಖಲೆ ಸೃಷ್ಟಿಸಿ ಆಸ್ತಿಗಳನ್ನು ಮಾರುತ್ತಿದ್ದ ಮೈಸೂರಿನ ಕಾಂಗ್ರೆಸ್ ಮುಖಂಡ ಸೇರಿ ಐವರು ಅರೆಸ್ಟ್
TV9 Web
| Edited By: Rakesh Nayak Manchi|

Updated on:Sep 17, 2022 | 8:29 AM

Share

ಮೈಸೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಹಾಗೂ ಖಾಸಗಿ ಆಸ್ತಿಗಳನ್ನು ಮಾರಾಟ ಮಾಡುತ್ತಿದ್ದ ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾಂ ಸೇರಿದಂತೆ ಐವರು ಆರೋಪಿಗಳನ್ನು ಕುವೆಂಪು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಹಲವು ನಿವೇಶನ ನಕಲಿ ಸೃಷ್ಟಿಸಿ ಮಾರಾಟ ಮಾಡಿದ್ದು, ಪೊಲೀಸರು ಕೈಗೊಂಡ ಕಾರ್ಯಾಚರಣೆ ವೇಳೆ ಖತರ್ನಾಕ್ ತಂಡದ ಕೈವಾಡ ತಿಳಿದುಬಂದಿದೆ. ಅದರಂತೆ ಪೊಲೀಸರು ಐವರನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

ಶಾಸಕ ರಿಜ್ವಾನ್ ಅರ್ಷದ್ ಅವರ ತಂದೆಗೇ ಖತರ್ನಾಕ್ ತಂಡ ಮೋಸ ಮಾಡಿದೆ. ನಗರದ ಉದಯಗಿರಿಯಲ್ಲಿರುವ 80*100 ಅಡಿ ವಿಸ್ತೀರ್ಣದ ನಿವೇಶನದ ನಕಲಿ ದಾಖಲೆ ಸೃಷ್ಟಿ ಮುಡಾಗೆ ಸೇರಿದ ನಿವೇಶದ ದಾಖಲೆ ಪೋರ್ಜರಿ ಮಾಡಿರುವ ರಾಜಾರಾಂ ಮತ್ತು ತಂಡ ನಿವೇಶನದ ಮೇಲೆ‌ ಬ್ಯಾಂಕ್​ನಲ್ಲಿ ಸಾಲ ಪಡೆಯಲು ಯತ್ನಿಸಿದೆ. ನಕಲಿ ದಾಖಲೆ ಸೃಷ್ಟಿಸಲು ವಿವಿಧ ಇಲಾಖೆಗೆ ಸಂಬಂಧಿಸಿದ ಸೀಲ್​ಗಳನ್ನು ಕೂಡ ಪೋರ್ಜರಿ ಮಾಡಲಾಗಿದೆ.

ನಗರದ ರಾಮಕೃಷ್ಟನಗರದ ಐ ಬ್ಲಾಕ್​ನಲ್ಲಿರುವ ಗೋಲ್ಡನ್ ಬೆಲ್ಸ್ ಸರ್ವೀಸ್ ಅಪಾರ್ಟ್ ಮೆಂಟ್ ನಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದ ಸೀಲ್​ಗಳು ಹಾಗೂ ಇ-ಸ್ಟಾಂಪ್ ಪೇಪರ್, ಸ್ಕ್ಯಾನರ್, ಪ್ರಿಂಟರ್​ಗಳು ಪತ್ತೆಯಾಗಿವೆ. ಪ್ರಕರಣ ಸಂಬಂಧ ನಗರ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾ, ಬೆಂಗಳೂರಿನ ಕಟ್ಟಿಗೇನಹಳ್ಳಿ ನಿವಾಸಿ ಮಹಮ್ಮದ್ ನಯೀಮ್, ಮೊಹಮ್ಮದ್ ಶಹಭಾಜ್ ಮಲ್ಲಿಕ್, ಭಾಸ್ಕರ್ ಸೇರಿದಂತೆ ಒಟ್ಟು ಐವರನ್ನು ಬಂಧಿಸಿ ತನಿಖೆ ನಡೆಸಲಾಗಿದೆ. ಪೊಲೀಸರ ತೀವ್ರ ವಿಚಾರಣೆ ನಡುವೆ ಆರೋಪಿಗಳು ಈ ಹಿಂದೆ ನಕಲಿ ದಾಖಲೆ ಸೃಷ್ಟಿಸಿ ಅನೇಕ ನಿವೇಶನಗಳನ್ನು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:21 am, Sat, 17 September 22

Follow Us
Web contact
Web contact

TV9 Kannada

Read More
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?