ಸ‘ಮೋಸ’ ಮರ್ಡರ್! ಮಾರಕಾಸ್ತ್ರದಿಂದ ಹಲ್ಲೆ, ಹತ್ಯೆ! ಆರೋಪಿ ಅರೆಸ್ಟ್

ಸಾಧು ಶ್ರೀನಾಥ್​

|

Updated on:May 16, 2020 | 10:52 AM

ಬೆಂಗಳೂರು: ಸಮೋಸ ತಿನ್ನುವ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಬೆಂಗಳೂರಿನ ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುಕೃತ್ಯ ನಡೆದಿದೆ. ಮುಜುಡಾ @ ಮುಜಾಹಿದ್ ಎಂಬುವನನ್ನು ಜಾಫರ್ ಎಂಬಾತ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸಮೋಸ ತಿನ್ನುವ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಜಾಫರ್ ಮಾರಕಾಸ್ತ್ರದಿಂದ ಹಲ್ಲೆಗೈದಿದ್ದಕ್ಕೆ ಮುಜುಡಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಡಿ ಜೆ ಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಜಾಫರ್​ನನ್ನು ಬಂಧಿಸಿದ್ದಾರೆ.

ಸ‘ಮೋಸ’ ಮರ್ಡರ್! ಮಾರಕಾಸ್ತ್ರದಿಂದ ಹಲ್ಲೆ, ಹತ್ಯೆ! ಆರೋಪಿ ಅರೆಸ್ಟ್

ಬೆಂಗಳೂರು: ಸಮೋಸ ತಿನ್ನುವ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಬೆಂಗಳೂರಿನ ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುಕೃತ್ಯ ನಡೆದಿದೆ.

ಮುಜುಡಾ @ ಮುಜಾಹಿದ್ ಎಂಬುವನನ್ನು ಜಾಫರ್ ಎಂಬಾತ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸಮೋಸ ತಿನ್ನುವ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಜಾಫರ್ ಮಾರಕಾಸ್ತ್ರದಿಂದ ಹಲ್ಲೆಗೈದಿದ್ದಕ್ಕೆ ಮುಜುಡಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಡಿ ಜೆ ಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಜಾಫರ್​ನನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada