ಪೂಜೆ ನೆಪದಲ್ಲಿ ಬಂದು ಕನ್ನ ಹಾಕುತ್ತಿದ್ದ ಖದೀಮರ ಬಂಧನ

ಬೆಂಗಳೂರು: ಪೂಜೆ ಮಾಡುವ ನೆಪದಲ್ಲಿ ಮನೆಗೆ ಬಂದು ಕನ್ನ ಹಾಕುತ್ತಿದ್ದ ಖದೀಮರನ್ನು ನಗರದ ಸಂಪಿಗೆಹಳ್ಳಿ ಪೊಲೀಸರು ಬಂಧಸಿದ್ದಾರೆ. ನಾಗರಾಜ್ ಹಾಗೂ ಲಕ್ಷ್ಮಣ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 180 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಇವರಿಬ್ಬರು ಮೊದಲು ಸ್ವಾಮೀಜಿ ವೇಷ ಧರಿಸಿ ದೊಡ್ಡ ದೊಡ್ಡ ಮನೆಗಳಿಗೆ ಎಂಟ್ರಿ ಕೊಟ್ಟು, ನಿಮ್ಮ ಮನೆಯಲ್ಲಿ ದೋಷವಿದೆ. ದೋಷ ನಿವಾರಣೆಗೆ ಮಹಾ ಪೂಜೆ ಮಾಡಬೇಕು ಎಂದು ನಂಬಿಸಿ ಪೂಜೆ ಮಾಡುವಂತೆ ಮಾಡುತ್ತಿದ್ದರು. ಪೂಜೆ ವೇಳೆ ಮನೆಯಲ್ಲಿದ್ದ ಚಿನ್ನವನ್ನು ಒಂದೆಡೆ ಇಡುವಂತೆ ಹೇಳುತ್ತಿದ್ದರು. […]

ಪೂಜೆ ನೆಪದಲ್ಲಿ ಬಂದು ಕನ್ನ ಹಾಕುತ್ತಿದ್ದ ಖದೀಮರ ಬಂಧನ
ಸಾಧು ಶ್ರೀನಾಥ್​

Updated on: Feb 20, 2020 | 2:10 PM

ಬೆಂಗಳೂರು: ಪೂಜೆ ಮಾಡುವ ನೆಪದಲ್ಲಿ ಮನೆಗೆ ಬಂದು ಕನ್ನ ಹಾಕುತ್ತಿದ್ದ ಖದೀಮರನ್ನು ನಗರದ ಸಂಪಿಗೆಹಳ್ಳಿ ಪೊಲೀಸರು ಬಂಧಸಿದ್ದಾರೆ. ನಾಗರಾಜ್ ಹಾಗೂ ಲಕ್ಷ್ಮಣ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 180 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಇವರಿಬ್ಬರು ಮೊದಲು ಸ್ವಾಮೀಜಿ ವೇಷ ಧರಿಸಿ ದೊಡ್ಡ ದೊಡ್ಡ ಮನೆಗಳಿಗೆ ಎಂಟ್ರಿ ಕೊಟ್ಟು, ನಿಮ್ಮ ಮನೆಯಲ್ಲಿ ದೋಷವಿದೆ. ದೋಷ ನಿವಾರಣೆಗೆ ಮಹಾ ಪೂಜೆ ಮಾಡಬೇಕು ಎಂದು ನಂಬಿಸಿ ಪೂಜೆ ಮಾಡುವಂತೆ ಮಾಡುತ್ತಿದ್ದರು. ಪೂಜೆ ವೇಳೆ ಮನೆಯಲ್ಲಿದ್ದ ಚಿನ್ನವನ್ನು ಒಂದೆಡೆ ಇಡುವಂತೆ ಹೇಳುತ್ತಿದ್ದರು. ನಂತರ ಮನೆಯ ಸಂಪೂರ್ಣ ಮಾಹಿತಿ ಕಲೆ ಹಾಕಿ ಸರಿಯಾದ ಸಮಯ ನೋಡಿ ರಾತ್ರಿ ವೇಳೆ ಮನೆಗೆ ಎಂಟ್ರಿ ಕೊಟ್ಟು ಚಿನ್ನಾಭರಣ ಲೂಟಿ ಮಾಡುತ್ತಿದ್ದರು. ಸದ್ಯ ಸಂಪಿಂಗೆಹಳ್ಳಿ ಪೊಲೀಸರ ಕಾರ್ಯಾಚರಣೆಯಿಂದ ಆರೋಪಿಗಳನ್ನು ಬಂಧಿಸಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us