ಚಿತ್ರನಟರ ಪುತ್ರಿಯರ ಕಾರು ಅಪಘಾತ, ಮೂವರಿಗೆ ಗಾಯ

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರನಟ, ನಿರ್ದೇಶಕರ ಮಕ್ಕಳಿದ್ದ ಕಾರು ಅಪಘಾತವಾಗಿದೆ. ಯಲಹಂಕ ಸಂಚಾರಿ ಠಾಣಾ ವ್ಯಾಪ್ತಿಯ ಮಾವಳ್ಳಿ ಬಳಿ ತಡರಾತ್ರಿ ಘಟನೆ ನಡೆದಿದ್ದು, ಎರಡು ದಿನದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಜುಲೈ 28 ರ ತಡರಾತ್ರಿ ರಾಜಾನುಕುಂಟೆಯಿಂದ ಯಲಹಂಕ ಮಾರ್ಗವಾಗಿ ಬರ್ತಿದ್ದ ಬಿಳಿ ಬಣ್ಣದ ಫಾರ್ಚೂನರ್ ಕಾರು ನಿಯಂತ್ರಣ ತಪ್ಪಿ ಮರವೊಂದಕ್ಕೆ ಗುದ್ದಿತ್ತು. ಈ ಪರಿಣಾಮ ಕಾರಿನಲ್ಲಿದ್ದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಪುತ್ರಿ ರೋಹಿಣಿ ಸಿಂಗ್, ನಟ ಜೈ ಜಗದೀಶ್ ಪುತ್ರಿ ಅರ್ಪಿತಾ, ಸ್ನೇಹಿತನಿಗೆ […]

ಚಿತ್ರನಟರ ಪುತ್ರಿಯರ ಕಾರು ಅಪಘಾತ, ಮೂವರಿಗೆ ಗಾಯ
ಆಯೇಷಾ ಬಾನು

Updated on: Jul 30, 2020 | 3:56 PM

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರನಟ, ನಿರ್ದೇಶಕರ ಮಕ್ಕಳಿದ್ದ ಕಾರು ಅಪಘಾತವಾಗಿದೆ. ಯಲಹಂಕ ಸಂಚಾರಿ ಠಾಣಾ ವ್ಯಾಪ್ತಿಯ ಮಾವಳ್ಳಿ ಬಳಿ ತಡರಾತ್ರಿ ಘಟನೆ ನಡೆದಿದ್ದು, ಎರಡು ದಿನದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಜುಲೈ 28 ರ ತಡರಾತ್ರಿ ರಾಜಾನುಕುಂಟೆಯಿಂದ ಯಲಹಂಕ ಮಾರ್ಗವಾಗಿ ಬರ್ತಿದ್ದ ಬಿಳಿ ಬಣ್ಣದ ಫಾರ್ಚೂನರ್ ಕಾರು ನಿಯಂತ್ರಣ ತಪ್ಪಿ ಮರವೊಂದಕ್ಕೆ ಗುದ್ದಿತ್ತು. ಈ ಪರಿಣಾಮ ಕಾರಿನಲ್ಲಿದ್ದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಪುತ್ರಿ ರೋಹಿಣಿ ಸಿಂಗ್, ನಟ ಜೈ ಜಗದೀಶ್ ಪುತ್ರಿ ಅರ್ಪಿತಾ, ಸ್ನೇಹಿತನಿಗೆ ಗಾಯಗಳಾಗಿವೆ. ಅವರನ್ನ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ 2 ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us