AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drugs ಜಾಲ: ವಿರೇನ್​ ಆಪ್ತ ಆದಿತ್ಯ ಅರೆಸ್ಟ್, A15 ಶೆಟ್ಟಿ ಪೊಲೀಸ್​ ಕಸ್ಟಡಿಗೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಆರೋಪಿ ವಿರೇನ್​ ಖನ್ನಾ ಆಪ್ತ ಆದಿತ್ಯ ಅಗರ್​​ವಾಲ್​ನ ಬಂಧನವಾಗಿದೆ. ಹರಿಯಾಣ ಮೂಲದ ಆದಿತ್ಯ ಅಗರ್​​ವಾಲ್​ನ CCB ಅಧಿಕಾರಿಗಳು ಬಂಧಿಸಿದ್ದಾರೆ. ಆದಿತ್ಯ ಡ್ರಗ್ಸ್​ ದಂಧೆಯಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹಾಗಾಗಿ, ಸದ್ಯಕ್ಕೆ ಬೆಂಗಳೂರಿನಲ್ಲಿ ನೆಲೆಸಿದ್ದ ಆದಿತ್ಯ ಅಗರ್​​ವಾಲ್​ನ CCB ತಂಡವೊಂದು ಬಂಧಿಸಿದೆ. ಪ್ರಕರಣದ A3 ಆರೋಪಿ ವಿರೇನ್ ಖನ್ನಾ ಸಹಚರನಂತೆ ಕೆಲಸ ಮಾಡುತ್ತಿದ್ದ ಆದಿತ್ಯ ಡ್ರಗ್ ಪೆಡ್ಲರ್​ಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ. ಹಾಗಾಗಿ, CCB […]

Drugs ಜಾಲ: ವಿರೇನ್​ ಆಪ್ತ ಆದಿತ್ಯ ಅರೆಸ್ಟ್, A15 ಶೆಟ್ಟಿ ಪೊಲೀಸ್​ ಕಸ್ಟಡಿಗೆ
KUSHAL V
|

Updated on:Sep 11, 2020 | 5:39 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಆರೋಪಿ ವಿರೇನ್​ ಖನ್ನಾ ಆಪ್ತ ಆದಿತ್ಯ ಅಗರ್​​ವಾಲ್​ನ ಬಂಧನವಾಗಿದೆ. ಹರಿಯಾಣ ಮೂಲದ ಆದಿತ್ಯ ಅಗರ್​​ವಾಲ್​ನ CCB ಅಧಿಕಾರಿಗಳು ಬಂಧಿಸಿದ್ದಾರೆ.

ಆದಿತ್ಯ ಡ್ರಗ್ಸ್​ ದಂಧೆಯಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹಾಗಾಗಿ, ಸದ್ಯಕ್ಕೆ ಬೆಂಗಳೂರಿನಲ್ಲಿ ನೆಲೆಸಿದ್ದ ಆದಿತ್ಯ ಅಗರ್​​ವಾಲ್​ನ CCB ತಂಡವೊಂದು ಬಂಧಿಸಿದೆ. ಪ್ರಕರಣದ A3 ಆರೋಪಿ ವಿರೇನ್ ಖನ್ನಾ ಸಹಚರನಂತೆ ಕೆಲಸ ಮಾಡುತ್ತಿದ್ದ ಆದಿತ್ಯ ಡ್ರಗ್ ಪೆಡ್ಲರ್​ಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ. ಹಾಗಾಗಿ, CCB ಅಧಿಕಾರಿಗಳು ಸರ್ಚ್ ವಾರಂಟ್ ಪಡೆದು ಅಗರ್​​ವಾಲ್​​ ಮನೆಯನ್ನ ತಡರಾತ್ರಿ ಪರಿಶೀಲಿಸಿದ್ದರು.

A15 ಆರೋಪಿ ಪ್ರತೀಕ್ ಶೆಟ್ಟಿ ಪೊಲೀಸ್​ ಕಸ್ಟಡಿಗೆ ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಆರೋಪಿ ಪ್ರತೀಕ್ ಶೆಟ್ಟಿನ ಸೆಪ್ಟೆಂಬರ್​​ 15ರವರೆಗೆ CCB ವಶಕ್ಕೆ ನೀಡಲಾಗಿದೆ. ಪ್ರತೀಕ್ ಶೆಟ್ಟಿನ ಸಿಸಿಬಿ ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಈತನನ್ನ ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ಹಾಜರುಪಡಿಸಲಾಗಿತ್ತು.

ಇದನ್ನೂ ಓದಿ: ರಾಗಿಣಿ, ರವಿಶಂಕರ್​ ಹೆಸರು ಬಾಯಿಬಿಟ್ಟಿದ್ದ ಟೆಕ್ಕಿ A15 ಅರೆಸ್ಟ್

Published On - 5:09 pm, Fri, 11 September 20

Follow Us
ಭಾರತ ಮತ್ತು ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಶೇಖ್ ಹಸೀನಾ
ಭಾರತ ಮತ್ತು ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಶೇಖ್ ಹಸೀನಾ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗುತ್ತಿದೆ; ಶೇಖ್ ಹಸೀನಾ ಮಗ ಎಚ್ಚರಿಕೆ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹೃದಯಾಘಾತ, ಜೀವ ಉಳಿಸಿದ ಚಾಲಕ
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಅಸಮಾಧಾನಿತ ಹಿರಿಯ ಶಾಸಕನ ಮನವೊಲಿಕೆಗೆ ಅಖಾಡಕ್ಕಿಳಿದ ಹೈಕಮಾಂಡ್
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ BJP ಟೀಕೆಗೆ ಹರಿಪ್ರಸಾದ್ ಕೌಂಟರ್​​
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕ ಸುಬ್ಬಾರೆಡ್ಡಿ
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ರಾಜೀನಾಮೆ ವಾಪಸ್ ಪಡೆದ ಯಶವಂತರಾಯಗೌಡ ಪಾಟೀಲ್
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಮೇಕೆದಾಟು ಯೋಜನೆ ತಡೆಯಲು ತಮಿಳುನಾಡಿಗೆ ಅಧಿಕಾರವಿಲ್ಲ
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು
ಎರಡು ವರ್ಷಗಳ ಬಳಿಕ ಹಾಸನದಲ್ಲಿ ರಾರಾಜಿಸಿದ ಪ್ರಜ್ವಲ್ ರೇವಣ್ಣ ಫ್ಲೆಕ್ಸ್ ಗಳು