AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಇನ್ನೂ 3 ದಿನ ಸಿಸಿಬಿ ಪೊಲೀಸರ ವಶಕ್ಕೆ

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್​ ಬಳಕೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ, ನಟಿ ಸಂಜನಾ ಗಲ್ರಾನಿರನ್ನು ಇನ್ನೂ 3 ದಿನ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ನಟಿ ಸಂಜನಾರನ್ನು 3 ದಿನ ಸಿಸಿಬಿ ಪೊಲೀಸರ ವಶಕ್ಕೆ ಒಪ್ಪಿಸಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಜಡ್ಜ್​ ಆದೇಶ ಹೊರಡಿಸಿದ್ದಾರೆ. ರಾಗಿಣಿಗೆ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಇಂದು ಶಿಫ್ಟ್​ ಸೆಪ್ಟೆಂಬರ್ 16ರವರೆಗೆ ಸಂಜನಾ ಗಲ್ರಾನಿ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಪ್ರಮುಖವಾಗಿ ಮೂರು ಕಾರಣಗಳನ್ನು ಮುಂದಿಟ್ಟು ಸಿಸಿಬಿ ಪೊಲೀಸರು ಸಂಜನಾರನ್ನು ತಮ್ಮ ಕಸ್ಟಡಿಗೆ […]

ಸಂಜನಾ ಇನ್ನೂ 3 ದಿನ ಸಿಸಿಬಿ ಪೊಲೀಸರ ವಶಕ್ಕೆ
ಸಾಧು ಶ್ರೀನಾಥ್​
|

Updated on:Sep 14, 2020 | 6:58 PM

Share

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್​ ಬಳಕೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ, ನಟಿ ಸಂಜನಾ ಗಲ್ರಾನಿರನ್ನು ಇನ್ನೂ 3 ದಿನ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ನಟಿ ಸಂಜನಾರನ್ನು 3 ದಿನ ಸಿಸಿಬಿ ಪೊಲೀಸರ ವಶಕ್ಕೆ ಒಪ್ಪಿಸಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಜಡ್ಜ್​ ಆದೇಶ ಹೊರಡಿಸಿದ್ದಾರೆ.

ರಾಗಿಣಿಗೆ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಇಂದು ಶಿಫ್ಟ್​

ಸೆಪ್ಟೆಂಬರ್ 16ರವರೆಗೆ ಸಂಜನಾ ಗಲ್ರಾನಿ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಪ್ರಮುಖವಾಗಿ ಮೂರು ಕಾರಣಗಳನ್ನು ಮುಂದಿಟ್ಟು ಸಿಸಿಬಿ ಪೊಲೀಸರು ಸಂಜನಾರನ್ನು ತಮ್ಮ ಕಸ್ಟಡಿಗೆ ಕೇಳಿದ್ದರು. ಆ ಕಾರಣಗಳು ಹೀಗಿವೆ: ಸಂಜನಾ ವಿಚಾರದಲ್ಲಿ 1. ಡ್ರಗ್ಸ್ ಮೂಲದ ಬಗ್ಗೆ ವಿಚಾರಣೆ ಮಾಡಬೇಕಾಗಿದೆ. 2. ಸಿಮ್ ಇಲ್ಲದ ಮೊಬೈಲ್‌ಗಳನ್ನು ಬಳಕೆ ಮಾಡಲಾಗಿದೆ. ಮತ್ತು 3. ಡ್ರಗ್ಸ್ ಸರಬರಾಜಿಗೆ ಹಣ ಎಲ್ಲಿಂದ ಬಂತೆಂಬ ಬಗ್ಗೆ ಮಾಹಿತಿ ಸಂಗ್ರಹಿಸಿಬೇಕಿದೆ.ಜೊತೆಗೆ 4. ಸಂಜನಾ ಈವರೆಗೂ ತನಿಖೆಗೆ ಸಂಪೂರ್ಣ ಸಹಕರಿಸಿಲ್ಲ. ಹೀಗಾಗಿ 5 ದಿನಗಳ ಕಸ್ಟಡಿಗೆ ಮನವಿ ಮಾಡಲಾಗಿತ್ತು.ಈ ಕಾರಣಗಳನ್ನು ನೀಡಿ ಆರೋಪಿ ಸಂಜನಾರನ್ನು ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಸಿಸಿಬಿ ಕೋರ್ಟ್​ಗೆ ಮನವಿ ಮಾಡಿತ್ತು.

ಎಸ್​ಪಿಪಿ ವಾದಕ್ಕೆ ಸಂಜನಾ ಪರ ವಕೀಲ ಶ್ರೀನಿವಾಸ್ ರಾವ್ ಆಕ್ಷೇಪಣೆ ಹೀಗಿತ್ತು.. 1. ಸಂಜನಾ ಆ ಮೂರು ಮೊಬೈಲ್​ಗಳಲ್ಲಿ ಸಿಮ್ ಬಳಕೆ ಮಾಡಿಲ್ಲ. ಸಾಮಾಜಿಕ ಜಾಲತಾಣಕ್ಕಾಗಿ ವೈಫೈ ಬಳಕೆ ಮಾಡಿದ್ದರು. ಅನುಮಾನವಿದ್ದರೆ ತಾಂತ್ರಿಕ ತಜ್ಞರನ್ನು ಕೇಳಲಿ. ಅದಕ್ಕಾಗಿ ಕಸ್ಟಡಿ ಬೇಡ. 2. ಸಂಜನಾರಿಂದ ಡ್ರಗ್ಸ್ ರಿಕವರಿ ಆಗಿಲ್ಲ. ಹೀಗಿರುವಾಗ ಡ್ರಗ್ಸ್ ಮೂಲ ಪತ್ತೆ ಹಚ್ಚಲಿಕ್ಕಾಗಿ ಸಂಜನಾ ಕಸ್ಟಡಿ ಅನವಶ್ಯಕ. 3. ಡ್ರಗ್ಸ್ ಪಡೆದಿರುವುದೇ ಸಾಬೀತಾಗಿಲ್ಲ. ಹೀಗಿರುವಾಗ ಹಣದ ಹೂಡಿಕೆ ಪತ್ತೆಗಾಗಿ ಸಂಜನಾರನ್ನು ಕಸ್ಟಡಿಗೆ ನೀಡಬಾರದು. 4. ಸಂಜನಾ ತನಿಖೆಗೆ ಸಹಕರಿಸಿದ್ದಾರೆ. ಕಸ್ಟಡಿಯಿಂದ ಗೊತ್ತಿಲ್ಲದ ಉತ್ತರ ಹೇಳಿಸಲು ಸಾಧ್ಯವಿಲ್ಲ.

Published On - 5:03 pm, Mon, 14 September 20

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ