AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Santro Ravi Arrested: ಮಂತ್ರಾಲಯ ರಾಯರ ದರ್ಶನಕ್ಕೆ ಬಂದಿದ್ದ ಆಪ್ತನಿಂದಲೇ ಗುಜರಾತ್​ನಲ್ಲಿ ಸಿಕ್ಕ ಸ್ಯಾಂಟ್ರೋ ರವಿ!

ಮಂತ್ರಾಲಯದ ರಾಯರ ದರ್ಶನಕ್ಕೆ ಬಂದಿದ್ದವನಿಂದಲೇ ಸ್ಯಾಂಟ್ರೋ ರವಿ ಗುಜರಾತ್​ನಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಅರೇ ಅದು ಹೇಗೆ ಅಂತೀರಾ? ಈ ಕೆಳಗಿನಂತಿದೆ ನೋಡಿ ಸ್ಯಾಂಟ್ರೋ ಸಿಕ್ಕಿದ್ದೇಗೆ ಎಂದು.

Santro Ravi Arrested: ಮಂತ್ರಾಲಯ ರಾಯರ ದರ್ಶನಕ್ಕೆ ಬಂದಿದ್ದ ಆಪ್ತನಿಂದಲೇ ಗುಜರಾತ್​ನಲ್ಲಿ ಸಿಕ್ಕ ಸ್ಯಾಂಟ್ರೋ ರವಿ!
ಸ್ಯಾಂಟ್ರೋ ರವಿ
TV9 Web
| Edited By: |

Updated on:Jan 13, 2023 | 9:47 PM

Share

ಬೆಂಗಳೂರು:  ಕುಖ್ಯಾತ ಕ್ರಿಮಿನಲ್‌ ಹಾಗೂ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಜೊತೆ ಉತ್ತಮ ಸಂಪರ್ಕ ಹೊಂದಿದ್ದ ಮೈಸೂರಿನ ಕೆ.ಎಸ್.ಮಂಜುನಾಥ ಅಲಿಯಾಸ್​ ಸ್ಯಾಂಟ್ರೋ ರವಿಯನ್ನು (Santro Ravi) ಕರ್ನಾಟಕ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರಿಗೆ ಚಳ್ಳೆ ಹಣ್ಣು ತಿನಿಸಿ ಓಡಾಡುತ್ತಿದ್ದ ಸ್ಯಾಂಟ್ರೋ  11 ದಿನಗಳ ಬಳಿಕ ಇಂದು(ಜನವರಿ 13) ಗುಜರಾತ್​ನ ಅಹಮದಾಬಾದ್​ನಲ್ಲಿ(Ahmedabad)  ಸಿಕ್ಕಿಬಿದ್ದಿದ್ದಾನೆ.  ಸ್ಯಾಂಟ್ರೋ ರವಿ ಪೊಲೀಸರ ಖೆಡ್ಡಾಕ್ಕೆ ಬಿದ್ದಿದ್ದು ಮಂತ್ರಾಲಯದ(Mantralaya) ರಾಯರ ದರ್ಶನಕ್ಕೆ ಬಂದಿದ್ದವನಿಂದಲೇ ಎನ್ನುವುದು ವಿಶೇಷ.

ಇದನ್ನೂ ಓದಿ: Santro Ravi Arrested: ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಕೊನೆಗೂ ಬಂಧನ, ಗುಜರಾತ್​ನಲ್ಲಿ ಪೊಲೀಸ್ ಬಲೆಗೆ

ಹೌದು..ಸ್ಯಾಂಟ್ರೋ ರವಿ ಜಾಮೀನು ಅರ್ಜಿಯನ್ನು ಆಪ್ತ ಲಷ್ಮಿತ್ ಅಲಿಯಾಸ್ ಚೇತನ್ ಎನ್ನುವಾತ ಹಾಕಿದ್ದ. ಈತ ನಿನ್ನೆ(ಜ.12) ಮಂತ್ರಾಲಯದ ರಾಯರ ದರ್ಶನಕ್ಕೆ ಬಂದಿದ್ದ. ಈ ವೇಳೆ ರಾಯಚೂರು ಪೊಲೀಸರು ಸ್ಯಾಂಟ್ರೋ ರವಿ ಆಪ್ತ ಲಷ್ಮಿತ್ ಅಲಿಯಾಸ್ ಚೇತನ್​ನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಆ ವೇಳೆ ಸ್ಯಾಂಟ್ರೋ ರವಿ ಬಗ್ಗೆ ಅಸಲಿ ಸತ್ಯ ಬಾಯ್ಬಿಟ್ಟಿದ್ದಾನೆ.

ಕೂಡಲೇ ಎಸ್​​ಪಿ ನಿಖಿಲ್ ಅವರು ಚೇತನ್​ನನ್ನು ಮೈಸೂರಿಗೆ ಕರೆದೊಯ್ದಿದ್ದು, ಅಲ್ಲಿ ಇತರೆ ಪೊಲೀಸ್ ಅಧಿಕಾರಿಗಳೊಂದಿಗೆ ಇನ್ನಷ್ಟು ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಬಳಿಕ ಚೇತನ್ ನೀಡಿದ ಮಾಹಿತಿಯಿಂದ ಸ್ಯಾಂಟ್ರೋ ರವಿ ಗುಜರಾತ್​ನಲ್ಲಿ ಇರುವುದನ್ನು ಖಚಿತಪಡಿಸಿಕೊಂಡು ಬಲೆ ಬೀಸಿದ್ದಾರೆ. ಅಂತಿಮವಾಗಿ ಸ್ಯಾಂಟ್ರೋ ರವಿ ಕರ್ನಾಟಕ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಇನ್ನು ಈ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯಿಸಿದ್ದು, ರಾಯಚೂರು ಎಸ್ಪಿ, ಮಂಡ್ಯ ಎಸ್ಪಿ, ರಾಮನಗರ ಎಸ್ಪಿ ಅತ್ಯುತ್ತಮ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಅಕ್ರಮ ವರ್ಗಾವಣೆ, ವಂಚನೆ, ಲೈಂಗಿಕ ದೌರ್ಜನ್ಯ, ಕೌಂಟುಬಿಕ ದೌರ್ಜನ್ಯ, ಲೇವಾದೇವಿ ಪ್ರಕರಣ ಹೀಗೆ ಹತ್ತಾರು ಕೇಸ್​ಗಳ ಕರ್ಮಕಾಂಡ ಹೊರ ಬರುತ್ತಿದ್ದಂತೆಯೇ ಸ್ಯಾಂಟ್ರೋ ರವಿ ಪೊಲೀಸರಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ. ಹೀಗಾಗಿ ಈತನ ಬಂಧನಕ್ಕಾಗಿ ಹಿರಿಯ ಪೊಲೀಸ್​ ಅಧಿಕಾರಿಗಳ ನೇತೃತ್ವದಲ್ಲಿ ತನಿಖಾ ತಂಡಗಳನ್ನು ರಚಿಸಿ ಎಡಿಜಿಪಿ ಅಲೋಕ್‌ ಕುಮಾರ್ ಆದೇಶಿಸಿದ್ದರು. ಕೊನೆಗೂ ಪೊಲೀಸ್​​ ವಿಶೇಷ ತನಿಖಾ ತಂಡ ಸ್ಯಾಂಟ್ರೋ ರವಿಯನ್ನು ಬಂಧಿಸಿದೆ.

ಒಟ್ಟಿನಲ್ಲಿ ರಾಯರ ದರ್ಶನಕ್ಕೆ ಬಂದಿದ್ದ ಆಪ್ತನಿಂದಲೇ ಸ್ಯಾಂಟ್ರೋ ರವಿ ಸಿಕ್ಕಿಬಿದ್ದಿದ್ದಾನೆ.

Published On - 6:24 pm, Fri, 13 January 23

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ