Santro Ravi: ಕುಖ್ಯಾತ ಕ್ರಿಮಿನಲ್ ಸ್ಯಾಂಟ್ರೋ ರವಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಜೆಎಂಎಫ್​ಸಿ ಕೋರ್ಟ್​

ಕುಖ್ಯಾತಿ ಕ್ರಿಮಿನಲ್ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜನವರಿ 13ರಂದು ಗುಜರಾತ್​ನಲ್ಲಿ ಬಂಧಿಸಿದ ಪೊಲೀಸರು ಇಂದು ರಾಜ್ಯಕ್ಕೆ ಕರೆತಂದಿದ್ದರು.

Santro Ravi: ಕುಖ್ಯಾತ ಕ್ರಿಮಿನಲ್ ಸ್ಯಾಂಟ್ರೋ ರವಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಜೆಎಂಎಫ್​ಸಿ ಕೋರ್ಟ್​
ಸ್ಯಾಂಟ್ರೋ ರವಿ
Follow us
| Updated By: Rakesh Nayak Manchi

Updated on:Jan 14, 2023 | 7:58 PM

ಮೈಸೂರು: ಕುಖ್ಯಾತ ಕ್ರಿಮಿನಲ್ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿಯನ್ನು (Santro Ravi) 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮೈಸೂರಿನ ಜೆಎಂಎಫ್​ಸಿ ಕೋರ್ಟ್ (JMFC Court Mysore) ಆದೇಶ ಹೊರಡಿಸಿದೆ. ಇಂದು (ಜ.14) ಎರಡನೇ ಶನಿವಾರ ಆಗಿದ್ದರಿಂದ ನ್ಯಾಯಾಲಕ್ಕೆ ರಜೆ ಇದೆ. ಈ ಹಿನ್ನಲೆಯಲ್ಲಿ ಪೊಲೀಸರು ರವಿಯ್ನನ್ನು ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಬಿಗಿ ಭದ್ರತೆ ಮೂಲಕ ಮೈಸೂರಿನ ವಿಜಯನಗರ ಠಾಣೆಯಿಂದ ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ಜಡ್ಜ್​ ನಿವಾಸಕ್ಕೆ ಕರೆದೊಯ್ದು ನ್ಯಾಯಾಧೀಶರಾದ ಗುರುರಾಜ್‌ ಸೋಮಕ್ಕಲವರ್ ಅವರ ಮುಂದೆ ಸ್ಯಾಂಟ್ರೋ ರವಿಯನ್ನು ಹಾಜರುಪಡಿಸಲಾಯಿತು. ನ್ಯಾಯಾಧೀಶರ ಮನೆ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಇಬ್ಬರು ಇನ್ಸ್​ಪೆಕ್ಟರ್, ಇಬ್ಬರು PSI ಸೇರಿ 15 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ವೇಶ್ಯಾವಾಟಿಕೆ, ಅಕ್ರಮ ವರ್ಗಾವಣೆ, ಅತ್ಯಾಚಾರ ಸೇರಿದಂತೆ ಹಲವು ಆರೋಪಗಳನ್ನು ಎದುರಿಸುತ್ತಿರುವ ಸ್ಯಾಂಟ್ರೋ ರವಿಯನ್ನು ಕರ್ನಾಟಕ ಪೊಲೀಸರು ಗುಜರಾತ್​ನಲ್ಲಿ ನಿನ್ನೆ (ಜ.13) ಬಂಧಿಸಿ ಇಂದು (ಜ.14) ಕರ್ನಾಟಕಕ್ಕೆ ಕರೆತಂದಿದ್ದರು. ರಾಯಚೂರು, ಮಂಡ್ಯ ಹಾಗೂ ಮೈಸೂರು ಪೊಲೀಸರು ಸಂಘಟಿತ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಗುಜರಾತ್​ನಲ್ಲಿ ಸ್ಯಾಂಟ್ರೋ ರವಿ ಇದ್ದುದನ್ನು ಪತ್ತೆ ಮಾಡಿದ್ದರು. ನಂತರ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ರಾತ್ರಿ 11.30ಕ್ಕೆ ‘ಆಕಾಶ್ ಏರ್’ ವಿಮಾನದಲ್ಲಿ ರವಿಯನ್ನು ಬೆಂಗಳೂರಿಗೆ ಕರೆತರಲಾಯಿತು. ನಂತರ ರಸ್ತೆ ಮಾರ್ಗದ ಮೂಲಕ ಮೈಸೂರಿಗೆ ಕರೆದೊಯ್ಯಲಾಯ್ತು ಎಂದು ಮೂಲಗಳು ತಿಳಿಸಿದ್ದವು.

ಇದನ್ನೂ ಓದಿ: ಹರಕೆ ಹೊತ್ತ 22 ಗಂಟೆಗಳಲ್ಲಿ ಸ್ಯಾಂಟ್ರೋ ರವಿ ಬಂಧನ: ದೇವಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ ಅಲೋಕ್ ಕುಮಾರ್

ಸ್ಯಾಂಟ್ರೋ ರವಿ ಗುಜರಾತ್​ನಲ್ಲಿ ಇರಬಹುದು ಎಂಬ ಅನುಮಾನದ ಮೇಲೆ ಕರ್ನಾಟಕ ಪೊಲೀಸರ ತಂಡವನ್ನು ತರಾತುರಿಯಲ್ಲಿ ಅಹಮದಾಬಾದ್​ಗೆ ಕಳಿಸಲಾಗಿತ್ತು. ಈ ಪೈಕಿ ಮೈಸೂರು ಪೊಲೀಸರ ಬಳಿ ಸ್ಯಾಂಟ್ರೋ ರವಿಯ ಹಳೆಯ ಮೂರು ಫೋಟೊಗಳಿದ್ದವು. ಅವನ ತಲೆಯಲ್ಲಿ ಕೂದಲು ಇಲ್ಲ. ಹೀಗಾಗಿ ಟೋಪನ್ ಧರಿಸುತ್ತಾನೆ ಎಂಬ ಮಾಹಿತಿಯಿದ್ದ ಪೊಲೀಸರು ಬೋಳುತಲೆ, ಗಡ್ಡಮೀಸೆ ಇಲ್ಲದ ರೇಖಾಚಿತ್ರಗಳನ್ನು ಬರೆಸಿಕೊಂಡು ತಮ್ಮೊಂದಿಗೆ ತೆಗೆದುಕೊಂಡು ಹೋಗಿದ್ದರು. ಪೊಲೀಸರ ಲೆಕ್ಕಾಚಾರದಂತೆ ಅವನೂ ಗುರುತು ಬದಲಿಸಿಕೊಂಡಿದ್ದ. ಆದರೆ ಸಿದ್ಧತೆ ಮಾಡಿಕೊಂಡಿದ್ದ ಪೊಲೀಸರು ಅವನನ್ನು ಗುರುತಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಮಂತ್ರಾಲಯಕ್ಕೆ ಬಂದಿದ್ದ ಸ್ಯಾಂಟ್ರೋ ರವಿ ಆಪ್ತ ಲಷ್ಮಿತ್ ಅಲಿಯಾಸ್ ಚೇತನ್​ ಎಂಬಾತನನ್ನು ರಾಯಚೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಈ ವೇಳೆ ಸ್ಯಾಂಟ್ರೋ ರವಿ ಗುಜರಾತ್​ನಲ್ಲಿ ತಲೆಮರೆಸಿಕೊಂಡಿರುವು ತಿಳಿದುಬಂದಿದೆ. ಅದರಂತೆ ಕಾರ್ಯಾಚರಣೆ ನಡೆಸಿ ಸ್ಯಾಂಟ್ರೋ ರವಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:07 pm, Sat, 14 January 23

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್