AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Santro Ravi: ಹೈಟೆಕ್ ವೇಶ್ಯಾವಾಟಿಕೆ ಆರೋಪಿ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ವೈದ್ಯರು ಸ್ಯಾಂಟ್ರೋ ರವಿಯನ್ನು ಅಬ್ಸರ್​ವೇಶನ್​ನಲ್ಲಿ ಇಟ್ಟಿದ್ದಾರೆ ಎಂದು ಸಿಐಡಿ ಅಧಿಕಾರಿಗಳು ಹೇಳಿದ್ದಾರೆ.

Santro Ravi: ಹೈಟೆಕ್ ವೇಶ್ಯಾವಾಟಿಕೆ ಆರೋಪಿ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಸ್ಯಾಂಟ್ರೋ ರವಿ
TV9 Web
| Edited By: |

Updated on:Jan 27, 2023 | 12:51 PM

Share

ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆ ಪ್ರಕರಣದ ಮುಖ್ಯ ಆರೋಪಿ ಸ್ಯಾಂಟ್ರೋ ರವಿ (Santro Ravi) ಆರೋಗ್ಯದಲ್ಲಿ ಏರುಪೇರಾಗಿದ್ದು ಸಿಐಡಿ ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ದಾಖಲಿಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸ್ಯಾಂಟ್ರೋ ರವಿಗೆ ಚಿಕಿತ್ಸೆ ಮುಂದುವರಿದಿದೆ. ಶುಗರ್​ ಪ್ರಮಾಣ ವ್ಯತ್ಯಯವಾದ ಹಿನ್ನೆಲೆಯಲ್ಲಿ ಸ್ಯಾಂಟ್ರೋ ರವಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಅವನನ್ನು ಅಬ್ಸರ್​ವೇಶನ್​ನಲ್ಲಿ ಇಟ್ಟಿದ್ದಾರೆ.

ವಿಚಾರಣೆ ಎದುರಿಸಲು ಇಷ್ಟವಿಲ್ಲದ ಸ್ಯಾಂಟ್ರೋ ರವಿ ಊಟ ಬಿಟ್ಟು ನಾಟಕವಾಡಿದ್ದಾನೆ. ಪ್ರತಿದಿನ 12 ರಿಂದ 14 ಮಾತ್ರೆ, ಎರಡು ಶಾಟ್ ಇನ್ಸುಲಿನ್ ತೆಗದುಕೊಳ್ಳುತ್ತಾನೆ. ಶುಗರ್, ಕಿಡ್ನಿ ಸಮಸ್ಯೆ ಸೇರಿದಂತೆ ಹಲವು ಕಾಯಿಲೆಗಳಿಗೆ ಸಂಬಂಧಿಸಿದ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದಾನೆ. ಊಟ ಮಾಡದೇ ಮಾತ್ರೆ ತೆಗೆದುಕೊಳ್ಳುತ್ತಿರುವುದರಿಂದ ಲೋ ಬಿಪಿ, ಸುಸ್ತಿನಿಂದ ಕೆಳಗೆ ಬಿದ್ದ. ತಕ್ಷಣ ಪೊಲೀಸರು ಅವನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದರು ಎಂದು ಮೂಲಗಳು ತಿಳಿಸಿವೆ.

ಮೈಸೂರು ಮೂಲದ ಸ್ಯಾಂಟ್ರೋ ರವಿ ಮೇಲೆ 2ನೇ ಪತ್ನಿ ಎಂದು ಹೇಳಿಕೊಂಡಿರುವ ಮಹಿಳೆಯೊಬ್ಬರು ಅತ್ಯಾಚಾರದ ಆರೋಪ ಹೊರಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬೇರೆಯವರೊಂದಿಗೆ ದೇಹ ಸಂಪರ್ಕ ಬೆಳೆಸುವಂತೆ ರವಿ ಒತ್ತಾಯಿಸುತ್ತಿದ್ದಾನೆ ಎಂದು ಆರೋಪಿಸಿದ್ದರು.

ಪೊಲೀಸರು ತನಿಖೆ ಆರಂಭಿಸಿದಾಗ ಹಲವು ಪ್ರಕರಣಗಳು ಬೆಳಕಿಗೆ ಬಂದವು. ವೇಶ್ಯಾವಾಟಿಕೆಯಲ್ಲಿ ತೊಡಗಿಸಿದ್ದ ರವಿ ಹಲವು ಹೆಣ್ಣುಮಕ್ಕಳನ್ನು ದಂಧೆಗೆ ನೂಕಿದ್ದ, ಈ ಹಿಂದೆ ಜೈಲುವಾಸ ಅನುಭವಿಸಿದ್ದ ಅಂಶಗಳೂ ಬೆಳಕಿಗೆ ಬಂದಿತ್ತು. ಪೊಲೀಸ್ ವರ್ಗಾವಣೆಯಲ್ಲಿ ಸ್ಯಾಂಟ್ರೋ ರವಿ ಸಕ್ರಿಯ ಪಾತ್ರ ನಿರ್ವಹಿಸಿದ್ದ ಸಂಗತಿ ರಾಜಕೀಯದ ದಾಳವಾಗಿತ್ತು. ಹಲವು ಸಚಿವರು ಹಾಗೂ ಶಾಸಕರೊಂದಿಗೆ ಸ್ಯಾಂಟ್ರೋ ರವಿ ಇರುವ ಚಿತ್ರಗಳು ವೈರಲ್ ಆಗಿದ್ದವು.

ವೇಶ್ಯಾವಾಟಿಕೆಗಾಗಿ ರಷ್ಯಾ, ಇರಾನ್, ಮುಂಬೈ, ಕೊಲ್ಕೊತ್ತಾ ಗಳಿಂದ ಯುವತಿಯರನ್ನು ಕರೆಸುತ್ತಿದ್ದ. ಸ್ಯಾಂಟ್ರೋ ಕಾರಿನಲ್ಲಿ ಯುವತಿಯರನ್ನು ಸರಬರಾಜು ಮಾಡುತ್ತಿದ್ದ ಕಾರಣ ಇವನಿಗೆ ಸ್ಯಾಂಟ್ರೋ ರವಿ ಎನ್ನುವ ಹೆಸರು ಬಂದಿತ್ತು. ಇಂದಿನ ಐಜಿ ಪ್ರವೀಣ್ ಸೂದ್ 2005ರಲ್ಲಿ ಮೈಸೂರು ಕಮಿಷನರ್ ಆಗಿದ್ದಾಗ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜೈಲಿಗೆ ಕಳಿಸಿದ್ದರು. ಮೈಸೂರಿನಿಂದ ಗಡಿಪಾರು ಮಾಡಿದ್ದರು.

ಇದನ್ನೂ ಓದಿ: ಸ್ಯಾಂಟ್ರೋ ರವಿಗಾಗಿ ರಾಯರ ಸನ್ನಿಧಿಯಲ್ಲಿ ಭಕ್ತರಂತೆ ಹೆಜ್ಜೆ ಹಾಕಿದ ಪೊಲೀಸರು

ಮತ್ತಷ್ಟು ಅಪರಾಧ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:52 am, Fri, 27 January 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು