AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Santro Ravi: ಹೈಟೆಕ್ ವೇಶ್ಯಾವಾಟಿಕೆ ಆರೋಪಿ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ವೈದ್ಯರು ಸ್ಯಾಂಟ್ರೋ ರವಿಯನ್ನು ಅಬ್ಸರ್​ವೇಶನ್​ನಲ್ಲಿ ಇಟ್ಟಿದ್ದಾರೆ ಎಂದು ಸಿಐಡಿ ಅಧಿಕಾರಿಗಳು ಹೇಳಿದ್ದಾರೆ.

Santro Ravi: ಹೈಟೆಕ್ ವೇಶ್ಯಾವಾಟಿಕೆ ಆರೋಪಿ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಸ್ಯಾಂಟ್ರೋ ರವಿ
TV9 Web
| Edited By: |

Updated on:Jan 27, 2023 | 12:51 PM

Share

ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆ ಪ್ರಕರಣದ ಮುಖ್ಯ ಆರೋಪಿ ಸ್ಯಾಂಟ್ರೋ ರವಿ (Santro Ravi) ಆರೋಗ್ಯದಲ್ಲಿ ಏರುಪೇರಾಗಿದ್ದು ಸಿಐಡಿ ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ದಾಖಲಿಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸ್ಯಾಂಟ್ರೋ ರವಿಗೆ ಚಿಕಿತ್ಸೆ ಮುಂದುವರಿದಿದೆ. ಶುಗರ್​ ಪ್ರಮಾಣ ವ್ಯತ್ಯಯವಾದ ಹಿನ್ನೆಲೆಯಲ್ಲಿ ಸ್ಯಾಂಟ್ರೋ ರವಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಅವನನ್ನು ಅಬ್ಸರ್​ವೇಶನ್​ನಲ್ಲಿ ಇಟ್ಟಿದ್ದಾರೆ.

ವಿಚಾರಣೆ ಎದುರಿಸಲು ಇಷ್ಟವಿಲ್ಲದ ಸ್ಯಾಂಟ್ರೋ ರವಿ ಊಟ ಬಿಟ್ಟು ನಾಟಕವಾಡಿದ್ದಾನೆ. ಪ್ರತಿದಿನ 12 ರಿಂದ 14 ಮಾತ್ರೆ, ಎರಡು ಶಾಟ್ ಇನ್ಸುಲಿನ್ ತೆಗದುಕೊಳ್ಳುತ್ತಾನೆ. ಶುಗರ್, ಕಿಡ್ನಿ ಸಮಸ್ಯೆ ಸೇರಿದಂತೆ ಹಲವು ಕಾಯಿಲೆಗಳಿಗೆ ಸಂಬಂಧಿಸಿದ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದಾನೆ. ಊಟ ಮಾಡದೇ ಮಾತ್ರೆ ತೆಗೆದುಕೊಳ್ಳುತ್ತಿರುವುದರಿಂದ ಲೋ ಬಿಪಿ, ಸುಸ್ತಿನಿಂದ ಕೆಳಗೆ ಬಿದ್ದ. ತಕ್ಷಣ ಪೊಲೀಸರು ಅವನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದರು ಎಂದು ಮೂಲಗಳು ತಿಳಿಸಿವೆ.

ಮೈಸೂರು ಮೂಲದ ಸ್ಯಾಂಟ್ರೋ ರವಿ ಮೇಲೆ 2ನೇ ಪತ್ನಿ ಎಂದು ಹೇಳಿಕೊಂಡಿರುವ ಮಹಿಳೆಯೊಬ್ಬರು ಅತ್ಯಾಚಾರದ ಆರೋಪ ಹೊರಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬೇರೆಯವರೊಂದಿಗೆ ದೇಹ ಸಂಪರ್ಕ ಬೆಳೆಸುವಂತೆ ರವಿ ಒತ್ತಾಯಿಸುತ್ತಿದ್ದಾನೆ ಎಂದು ಆರೋಪಿಸಿದ್ದರು.

ಪೊಲೀಸರು ತನಿಖೆ ಆರಂಭಿಸಿದಾಗ ಹಲವು ಪ್ರಕರಣಗಳು ಬೆಳಕಿಗೆ ಬಂದವು. ವೇಶ್ಯಾವಾಟಿಕೆಯಲ್ಲಿ ತೊಡಗಿಸಿದ್ದ ರವಿ ಹಲವು ಹೆಣ್ಣುಮಕ್ಕಳನ್ನು ದಂಧೆಗೆ ನೂಕಿದ್ದ, ಈ ಹಿಂದೆ ಜೈಲುವಾಸ ಅನುಭವಿಸಿದ್ದ ಅಂಶಗಳೂ ಬೆಳಕಿಗೆ ಬಂದಿತ್ತು. ಪೊಲೀಸ್ ವರ್ಗಾವಣೆಯಲ್ಲಿ ಸ್ಯಾಂಟ್ರೋ ರವಿ ಸಕ್ರಿಯ ಪಾತ್ರ ನಿರ್ವಹಿಸಿದ್ದ ಸಂಗತಿ ರಾಜಕೀಯದ ದಾಳವಾಗಿತ್ತು. ಹಲವು ಸಚಿವರು ಹಾಗೂ ಶಾಸಕರೊಂದಿಗೆ ಸ್ಯಾಂಟ್ರೋ ರವಿ ಇರುವ ಚಿತ್ರಗಳು ವೈರಲ್ ಆಗಿದ್ದವು.

ವೇಶ್ಯಾವಾಟಿಕೆಗಾಗಿ ರಷ್ಯಾ, ಇರಾನ್, ಮುಂಬೈ, ಕೊಲ್ಕೊತ್ತಾ ಗಳಿಂದ ಯುವತಿಯರನ್ನು ಕರೆಸುತ್ತಿದ್ದ. ಸ್ಯಾಂಟ್ರೋ ಕಾರಿನಲ್ಲಿ ಯುವತಿಯರನ್ನು ಸರಬರಾಜು ಮಾಡುತ್ತಿದ್ದ ಕಾರಣ ಇವನಿಗೆ ಸ್ಯಾಂಟ್ರೋ ರವಿ ಎನ್ನುವ ಹೆಸರು ಬಂದಿತ್ತು. ಇಂದಿನ ಐಜಿ ಪ್ರವೀಣ್ ಸೂದ್ 2005ರಲ್ಲಿ ಮೈಸೂರು ಕಮಿಷನರ್ ಆಗಿದ್ದಾಗ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜೈಲಿಗೆ ಕಳಿಸಿದ್ದರು. ಮೈಸೂರಿನಿಂದ ಗಡಿಪಾರು ಮಾಡಿದ್ದರು.

ಇದನ್ನೂ ಓದಿ: ಸ್ಯಾಂಟ್ರೋ ರವಿಗಾಗಿ ರಾಯರ ಸನ್ನಿಧಿಯಲ್ಲಿ ಭಕ್ತರಂತೆ ಹೆಜ್ಜೆ ಹಾಕಿದ ಪೊಲೀಸರು

ಮತ್ತಷ್ಟು ಅಪರಾಧ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:52 am, Fri, 27 January 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್