AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರಿಗಮಪ’ ಸುಬ್ರಮಣಿ ಪತ್ನಿ ಸಾವಿನ ಕೇಸ್​​ಗೆ ಟ್ವಿಸ್ಟ್​; ಕೊರೊನಾ ಅಲ್ಲ, ಆತ್ಮಹತ್ಯೆಯಿಂದ ನಿಧನ?

Subramani Wife Death: ಕೋಲಾರದ ಧರ್ಮರಾಯ ನಗರದಲ್ಲಿ ಇರುವ ನಿವಾಸದಲ್ಲಿ ಮೇ 7ರಂದು ಜ್ಯೋತಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಯಿತು. ಆ ಸಂದರ್ಭದಲ್ಲಿ ಜ್ಯೋತಿ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಯಿತು.

‘ಸರಿಗಮಪ’ ಸುಬ್ರಮಣಿ ಪತ್ನಿ ಸಾವಿನ ಕೇಸ್​​ಗೆ ಟ್ವಿಸ್ಟ್​; ಕೊರೊನಾ ಅಲ್ಲ, ಆತ್ಮಹತ್ಯೆಯಿಂದ ನಿಧನ?
‘ಸರಿಗಮಪ’ ಸುಬ್ರಮಣಿ - ಪತ್ನಿ ಜ್ಯೋತಿ
ಮದನ್​ ಕುಮಾರ್​
| Edited By: |

Updated on:May 11, 2021 | 6:15 PM

Share

ಮುಖ್ಯಪೇದೆಯಾಗಿ ಕೆಲಸ ಮಾಡುತ್ತಲೇ ಗಾಯನದ ಪ್ರತಿಭೆ ಮೂಲಕ ಗುರುತಿಸಿಕೊಂಡಿದ್ದ ಸುಬ್ರಮಣಿ ಅವರ ಪತ್ನಿ ಜ್ಯೋತಿ ಕೊರೊನಾದಿಂದ ನಿಧನರಾಗಿದ್ದಾರೆ ಎಂಬ ಮಾಹಿತಿ ಸೋಮವಾರ (ಮೇ 10) ಹಬ್ಬಿತ್ತು. ಆದರೆ ಆ ಘಟನೆಗೆ ಈಗ ದೊಡ್ಡ ಟ್ವಿಸ್ಟ್​ ಸಿಕ್ಕಿದೆ. ಸುಬ್ರಮಣಿ ಪತ್ನಿ ಜ್ಯೋತಿ ಸಾವಿಗೆ ಕೊರೊನಾ ವೈರಸ್​ ಕಾರಣವಲ್ಲ. ಅವರು ಆತ್ಮಹತ್ಯೆಯಿಂದ ಅಸುನೀಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಜ್ಯೋತಿ ಅವರಿಗೆ 33 ವರ್ಷ ವಯಸ್ಸಾಗಿತ್ತು.

ಉತ್ತಮ ಗಾಯಕನಾಗಿರುವ ಸುಬ್ರಮಣಿ ಅವರು ಸರಿಗಮಪ ವೇದಿಕೆಯಲ್ಲಿ ಹಾಡುವ ಮೂಲಕ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದರು. ಅನೇಕ ಟಿವಿ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಿದ್ದರು. ಅವರ ಪತ್ನಿ ಜ್ಯೋತಿ ಕೋಲಾರದ ಧರ್ಮರಾಯ ನಗರದಲ್ಲಿ ಇರುವ ನಿವಾಸದಲ್ಲಿ ಮೇ 7ರಂದು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಕೂಡಲೇ ಕೋಲಾರದ ಸ್ಥಳೀಯ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಯಿತು. ಆ ಸಂದರ್ಭದಲ್ಲಿ ಜ್ಯೋತಿ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಯಿತು. ವೆಂಟಿಲೇಟರ್​ ಬೆಡ್​ ಸಿಗದೇ ಪರದಾಡುವ ಪರಿಸ್ಥಿತಿ ಎದುರಾಯಿತು. ಬಳಿಕ ಹೊಸಕೋಟೆ ಹೊರವಲಯದ ಆಸ್ಪತ್ರೆಗೆ ಅವರನ್ನು ಸಂಬಂಧಿಕರು ಕರೆದುಕೊಂಡು ಬಂದರು. ಚಿಕಿತ್ಸೆ ಫಲಕಾರಿ ಆಗದೇ ಜ್ಯೋತಿ ಮೃತರಾದರು ಎಂಬ ಮಾಹಿತಿ ಲಭ್ಯವಾಗಿದೆ.

ಜ್ಯೋತಿ ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ಹೇಳಲಾಗುತ್ತಿದೆ. ಕೆ.ಆರ್​. ಪುರ ಪೊಲೀಸ್​ ಠಾಣೆಯಲ್ಲಿ ಮುಖ್ಯಪೇದೆಯಾಗಿ ಸುಮ್ರಮಣಿ ಕೆಲಸ ಮಾಡುತ್ತಿದ್ದರು. ಕಳೆದ ಎರಡು ತಿಂಗಳಿನಿಂದ ಅವರು ಕರ್ತವ್ಯಕ್ಕೆ ಗೈರಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ:

ಭಾವಿ ಪತ್ನಿ 3 ದಿನದಿಂದ ಫೋನ್​ ಮಾಡಿಲ್ಲ ಎಂದು ಕಾನ್ಸ್​ಟೇಬಲ್​ ಆತ್ಮಹತ್ಯೆ

ತಲೆಗೆ ಗುಂಡು ಹಾರಿಸಿಕೊಂಡು ಚಿಕ್ಕಮಗಳೂರು ರೈತ ಆತ್ಮಹತ್ಯೆ

Published On - 5:16 pm, Tue, 11 May 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ