ಉತ್ತರ ಪ್ರದೇಶ: ಶಿಕ್ಷಣ ಸಂಸ್ಥೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ

ತನಿಖಾಧಿಕಾರಿಗಳು ಮರಣೋತ್ತರ ಪರೀಕ್ಷೆಯ ವರದಿಯನ್ನು ಉಲ್ಲೇಖಿಸಿದ್ದಾರೆ. ಬಾಲಕನು ಅನಾರೋಗ್ಯದಿಂದ ಸಾವಿಗೀಡಾಗಿದ್ದಾನೆ ಎಂದು ಶಾಲಾ ಅಧಿಕಾರಿಗಳು ಆರಂಭದಲ್ಲಿ ಹೇಳುತ್ತಿದ್ದರೂ ಸಹ ಬಾಲಕ ಕತ್ತು ಹಿಸುಕಿದ್ದು ಮರಣೋತ್ತರ ಪರೀಕ್ಷೆ ವರದಿಯಲ್ಲಿದೆ. ಜಸೋದನ್ ಸಿಂಗ್ ಮತ್ತು ಬಾಘೆಲ್ ಅವರು ಮಾಟ ಮಂತ್ರ ಮಾಡುತ್ತಿದ್ದು ಹುಡುಗನನ್ನು ಬಲಿ ಕೊಟ್ಟಿರುವುದಾಗಿ ಒಪ್ಪಿಕೊಂಡಿದ್ದಾರೆ.

ಉತ್ತರ ಪ್ರದೇಶ: ಶಿಕ್ಷಣ ಸಂಸ್ಥೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ
ಪ್ರಾತಿನಿಧಿಕ ಚಿತ್ರ
Follow us
|

Updated on:Sep 27, 2024 | 3:39 PM

ಲಕ್ನೋ ಸೆಪ್ಟೆಂಬರ್ 27: ಉತ್ತರ ಪ್ರದೇಶದ (Uttar Pradesh) ಹಾಥರಸ್​​​ನ ಶಾಲೆಯೊಂದರ ಮ್ಯಾನೇಜರ್ 2ನೇ ತರಗತಿಯಲ್ಲಿ ಕಲಿಯುತ್ತಿದ್ದ 11 ವರ್ಷದ ವಿದ್ಯಾರ್ಥಿಯನ್ನು ಇತರ ನಾಲ್ವರ ಸಹಾಯದಿಂದ ಬಲಿಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಶಿಕ್ಷಣ ಸಂಸ್ಥೆಯ ಬೆಳವಣಿಗೆಗೆ ಸಹಾಯ ಮಾಡುತ್ತದೆ ಮತ್ತು  ಕುಟುಂಬಕ್ಕೆ ಸಮೃದ್ಧಿಯನ್ನು ತರುತ್ತದೆ ಎಂದು ಬಾಲಕನ ಬಲಿಕೊಡಲಾಗಿದೆ ಎಂದು ತನಿಖಾಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಶಾಲೆಯ ಮ್ಯಾನೇಜರ್ ದಿನೇಶ್ ಬಘೇಲ್, ಆತನ ತಂದೆ ಜಸೋದನ್ ಸಿಂಗ್, ಪ್ರಾಂಶುಪಾಲ ಲಕ್ಷ್ಮಣ್ ಸಿಂಗ್, ಶಿಕ್ಷಕರಾದ ರಾಮ್ ಪ್ರಕಾಶ್ ಸೋಲಂಕಿ ಮತ್ತು ವೀರಪಾಲ್ ಅವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ತನಿಖಾಧಿಕಾರಿಗಳು ಮರಣೋತ್ತರ ಪರೀಕ್ಷೆಯ ವರದಿಯನ್ನು ಉಲ್ಲೇಖಿಸಿದ್ದಾರೆ. ಬಾಲಕನು ಅನಾರೋಗ್ಯದಿಂದ ಸಾವಿಗೀಡಾಗಿದ್ದಾನೆ ಎಂದು ಶಾಲಾ ಅಧಿಕಾರಿಗಳು ಆರಂಭದಲ್ಲಿ ಹೇಳುತ್ತಿದ್ದರೂ ಸಹ ಬಾಲಕ ಕತ್ತು ಹಿಸುಕಿದ್ದು ಮರಣೋತ್ತರ ಪರೀಕ್ಷೆ ವರದಿಯಲ್ಲಿದೆ. ಜಸೋದನ್ ಸಿಂಗ್ ಮತ್ತು ಬಾಘೆಲ್ ಅವರು ಮಾಟ ಮಂತ್ರ ಮಾಡುತ್ತಿದ್ದು ಹುಡುಗನನ್ನು ಬಲಿ ಕೊಟ್ಟಿರುವುದಾಗಿ ಒಪ್ಪಿಕೊಂಡಿದ್ದಾರೆ.

ಶಾಲೆಯ ಹಾಸ್ಟೆಲ್‌ನಲ್ಲಿ ವಾಸವಿದ್ದ ಬಾಲಕ ಮಲಗಿದ್ದ ವೇಳೆ ಸೋಲಂಕಿ ಆತನನ್ನು ಎತ್ತಿಕೊಂಡು ಕಾಡಿಗೆ ಬಲಿ ಕೊಡಲು ಕರೆದೊಯ್ದಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಮಗು ಸಹಾಯಕ್ಕಾಗಿ ಕೂಗುತ್ತಿದ್ದಂತೆ ವೀರಪಾಲ್ ಮತ್ತು ಲಕ್ಷ್ಮಣ್ ಸಿಂಗ್ ಬಲಿ ಸರಾಗವಾಗುವಂತೆ ಖಚಿತಪಡಿಸಿಕೊಳ್ಳಲು ನಿಗಾ ಇರಿಸಿದ್ದರು.

ಆರೋಪಿಗಳು ಬಾಲಕನ ಕತ್ತು ಹಿಸುಕಿ ಕೊಲೆ ಮಾಡಿದ ಬಳಿಕ ಬಾಲಕನ ಶವವನ್ನು ಬಘೇಲ್ ಕಾರಿನಲ್ಲಿಟ್ಟು ಬಿಸಾಡಲು ಸ್ಥಳ ಹುಡುಕುತ್ತಿದ್ದರು. ಹುಡುಗನ ತಂದೆಗೆ ಅವರ ಮಗ ಅಸ್ವಸ್ಥನಾಗಿದ್ದು ವೈದ್ಯರ ಬಳಿಗೆ ಕರೆದೊಯ್ಯಲಾಗಿದೆ ಎಂದು ತಿಳಿಸಲಾಯಿತು. ಬಾಲಕನ ಕುಟುಂಬವು ಹೇಗಾದರೂ ಸದಾಬಾದ್‌ನಲ್ಲಿ ಬಘೇಲ್‌ನ ಕಾರನ್ನು ಟ್ರ್ಯಾಕ್ ಮಾಡಿ ಮತ್ತು ಸೆಪ್ಟೆಂಬರ್ 23 ರಂದು ಬಾಲಕನ ಮೃತ ದೇಹವನ್ನು ವಶಪಡಿಸಿಕೊಂಡರು.

ಬಾಲಕನನ್ನು ಬರ್ಬರವಾಗಿ ಕೊಲ್ಲಲಾಗಿದೆ. ಅವನ ಹೆಗಲ ಮೂಳೆ ಮುರಿದಿದೆ. ಆರೋಪಿಗಳು ಬಾಯಿ ಬಿಗಿದು ಕತ್ತು ಹಿಸುಕಿದ್ದಾರೆ. ಬಲಿಯ ಆಚರಣೆಯ ಭಾಗವಾಗಿ ಬಾಲಕನ ಕೂದಲನ್ನು ಒಂದು ಬದಿಯಿಂದ ಕತ್ತರಿಸಲಾಯಿತು ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: Viral: ಮ್ಯಾಟ್ರಿಮೋನಿದಲ್ಲಿ 35ರ ಆಸುಪಾಸಿನ ಮಹಿಳೆಯರನ್ನು ಬಲೆಗೆ ಬೀಳಿಸಿ ಹಣ ದೋಚುತ್ತಿದ್ದ ಭೂಪ

ಐವರು ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 103 (1) ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಲಂಕಿ, ಬಘೇಲ್ ಮತ್ತು ಜಸೋಧನ್ ಸಿಂಗ್ ಅವರು ಸೆಪ್ಟೆಂಬರ್ 23 ರಂದು ಶಾಲೆಯ ಹಾಸ್ಟೆಲ್‌ನಿಂದ ಬಾಲಕನನ್ನು ಅಪಹರಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಸಿಂಗ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. “ಜಸೋಧನ್ ಸಿಂಗ್ ಮಾಟ ಮಂತ್ರದಲ್ಲಿ ನಂಬಿಕೆ ಹೊಂದಿದ್ದಾರೆ. ಶಾಲೆ ಮತ್ತು ಅವರ ಕುಟುಂಬದ ಏಳಿಗೆಗಾಗಿ ಮಗುವನ್ನು ಬಲಿ ಕೊಡುವಂತೆ ಅವರು ಮಗ ಬಘೇಲ್​​ನಲ್ಲಿ ಕೇಳಿಕೊಂಡರು” ಎಂದು ಸಿಂಗ್ ಹೇಳಿದ್ದಾರೆ.

ಬಾಲಕ ಅಳುತ್ತಿದ್ದಂತೆಯೇ ಆರೋಪಿ ಕತ್ತು ಹಿಸುಕಿ ಕೊಂದಿದ್ದಾನೆ. ವೀರಪಾಲ್ ಸಿಂಗ್ ಮತ್ತು ಶಾಲೆಯ ಪ್ರಾಂಶುಪಾಲ ಲಕ್ಷ್ಮಣ್ ಸಿಂಗ್ ಕೂಡ ಸ್ಥಳದಲ್ಲಿ ಹಾಜರಿದ್ದರು. ಶಾಲೆ ಮತ್ತು ಮಾಲೀಕರ ಕುಟುಂಬದ ಏಳಿಗೆಗಾಗಿ ವಿದ್ಯಾರ್ಥಿಯನ್ನು ಬಲಿಕೊಡಲಾಗಿದೆ ಎಂದು ಆರೋಪಿಗಳು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ ತನಿಖಾಧಿಕಾರಿಗಳು.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:37 pm, Fri, 27 September 24

‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ