AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಶಿಕ್ಷಣ ಸಂಸ್ಥೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ

ತನಿಖಾಧಿಕಾರಿಗಳು ಮರಣೋತ್ತರ ಪರೀಕ್ಷೆಯ ವರದಿಯನ್ನು ಉಲ್ಲೇಖಿಸಿದ್ದಾರೆ. ಬಾಲಕನು ಅನಾರೋಗ್ಯದಿಂದ ಸಾವಿಗೀಡಾಗಿದ್ದಾನೆ ಎಂದು ಶಾಲಾ ಅಧಿಕಾರಿಗಳು ಆರಂಭದಲ್ಲಿ ಹೇಳುತ್ತಿದ್ದರೂ ಸಹ ಬಾಲಕ ಕತ್ತು ಹಿಸುಕಿದ್ದು ಮರಣೋತ್ತರ ಪರೀಕ್ಷೆ ವರದಿಯಲ್ಲಿದೆ. ಜಸೋದನ್ ಸಿಂಗ್ ಮತ್ತು ಬಾಘೆಲ್ ಅವರು ಮಾಟ ಮಂತ್ರ ಮಾಡುತ್ತಿದ್ದು ಹುಡುಗನನ್ನು ಬಲಿ ಕೊಟ್ಟಿರುವುದಾಗಿ ಒಪ್ಪಿಕೊಂಡಿದ್ದಾರೆ.

ಉತ್ತರ ಪ್ರದೇಶ: ಶಿಕ್ಷಣ ಸಂಸ್ಥೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:Sep 27, 2024 | 3:39 PM

Share

ಲಕ್ನೋ ಸೆಪ್ಟೆಂಬರ್ 27: ಉತ್ತರ ಪ್ರದೇಶದ (Uttar Pradesh) ಹಾಥರಸ್​​​ನ ಶಾಲೆಯೊಂದರ ಮ್ಯಾನೇಜರ್ 2ನೇ ತರಗತಿಯಲ್ಲಿ ಕಲಿಯುತ್ತಿದ್ದ 11 ವರ್ಷದ ವಿದ್ಯಾರ್ಥಿಯನ್ನು ಇತರ ನಾಲ್ವರ ಸಹಾಯದಿಂದ ಬಲಿಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಶಿಕ್ಷಣ ಸಂಸ್ಥೆಯ ಬೆಳವಣಿಗೆಗೆ ಸಹಾಯ ಮಾಡುತ್ತದೆ ಮತ್ತು  ಕುಟುಂಬಕ್ಕೆ ಸಮೃದ್ಧಿಯನ್ನು ತರುತ್ತದೆ ಎಂದು ಬಾಲಕನ ಬಲಿಕೊಡಲಾಗಿದೆ ಎಂದು ತನಿಖಾಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಶಾಲೆಯ ಮ್ಯಾನೇಜರ್ ದಿನೇಶ್ ಬಘೇಲ್, ಆತನ ತಂದೆ ಜಸೋದನ್ ಸಿಂಗ್, ಪ್ರಾಂಶುಪಾಲ ಲಕ್ಷ್ಮಣ್ ಸಿಂಗ್, ಶಿಕ್ಷಕರಾದ ರಾಮ್ ಪ್ರಕಾಶ್ ಸೋಲಂಕಿ ಮತ್ತು ವೀರಪಾಲ್ ಅವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ತನಿಖಾಧಿಕಾರಿಗಳು ಮರಣೋತ್ತರ ಪರೀಕ್ಷೆಯ ವರದಿಯನ್ನು ಉಲ್ಲೇಖಿಸಿದ್ದಾರೆ. ಬಾಲಕನು ಅನಾರೋಗ್ಯದಿಂದ ಸಾವಿಗೀಡಾಗಿದ್ದಾನೆ ಎಂದು ಶಾಲಾ ಅಧಿಕಾರಿಗಳು ಆರಂಭದಲ್ಲಿ ಹೇಳುತ್ತಿದ್ದರೂ ಸಹ ಬಾಲಕ ಕತ್ತು ಹಿಸುಕಿದ್ದು ಮರಣೋತ್ತರ ಪರೀಕ್ಷೆ ವರದಿಯಲ್ಲಿದೆ. ಜಸೋದನ್ ಸಿಂಗ್ ಮತ್ತು ಬಾಘೆಲ್ ಅವರು ಮಾಟ ಮಂತ್ರ ಮಾಡುತ್ತಿದ್ದು ಹುಡುಗನನ್ನು ಬಲಿ ಕೊಟ್ಟಿರುವುದಾಗಿ ಒಪ್ಪಿಕೊಂಡಿದ್ದಾರೆ.

ಶಾಲೆಯ ಹಾಸ್ಟೆಲ್‌ನಲ್ಲಿ ವಾಸವಿದ್ದ ಬಾಲಕ ಮಲಗಿದ್ದ ವೇಳೆ ಸೋಲಂಕಿ ಆತನನ್ನು ಎತ್ತಿಕೊಂಡು ಕಾಡಿಗೆ ಬಲಿ ಕೊಡಲು ಕರೆದೊಯ್ದಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಮಗು ಸಹಾಯಕ್ಕಾಗಿ ಕೂಗುತ್ತಿದ್ದಂತೆ ವೀರಪಾಲ್ ಮತ್ತು ಲಕ್ಷ್ಮಣ್ ಸಿಂಗ್ ಬಲಿ ಸರಾಗವಾಗುವಂತೆ ಖಚಿತಪಡಿಸಿಕೊಳ್ಳಲು ನಿಗಾ ಇರಿಸಿದ್ದರು.

ಆರೋಪಿಗಳು ಬಾಲಕನ ಕತ್ತು ಹಿಸುಕಿ ಕೊಲೆ ಮಾಡಿದ ಬಳಿಕ ಬಾಲಕನ ಶವವನ್ನು ಬಘೇಲ್ ಕಾರಿನಲ್ಲಿಟ್ಟು ಬಿಸಾಡಲು ಸ್ಥಳ ಹುಡುಕುತ್ತಿದ್ದರು. ಹುಡುಗನ ತಂದೆಗೆ ಅವರ ಮಗ ಅಸ್ವಸ್ಥನಾಗಿದ್ದು ವೈದ್ಯರ ಬಳಿಗೆ ಕರೆದೊಯ್ಯಲಾಗಿದೆ ಎಂದು ತಿಳಿಸಲಾಯಿತು. ಬಾಲಕನ ಕುಟುಂಬವು ಹೇಗಾದರೂ ಸದಾಬಾದ್‌ನಲ್ಲಿ ಬಘೇಲ್‌ನ ಕಾರನ್ನು ಟ್ರ್ಯಾಕ್ ಮಾಡಿ ಮತ್ತು ಸೆಪ್ಟೆಂಬರ್ 23 ರಂದು ಬಾಲಕನ ಮೃತ ದೇಹವನ್ನು ವಶಪಡಿಸಿಕೊಂಡರು.

ಬಾಲಕನನ್ನು ಬರ್ಬರವಾಗಿ ಕೊಲ್ಲಲಾಗಿದೆ. ಅವನ ಹೆಗಲ ಮೂಳೆ ಮುರಿದಿದೆ. ಆರೋಪಿಗಳು ಬಾಯಿ ಬಿಗಿದು ಕತ್ತು ಹಿಸುಕಿದ್ದಾರೆ. ಬಲಿಯ ಆಚರಣೆಯ ಭಾಗವಾಗಿ ಬಾಲಕನ ಕೂದಲನ್ನು ಒಂದು ಬದಿಯಿಂದ ಕತ್ತರಿಸಲಾಯಿತು ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: Viral: ಮ್ಯಾಟ್ರಿಮೋನಿದಲ್ಲಿ 35ರ ಆಸುಪಾಸಿನ ಮಹಿಳೆಯರನ್ನು ಬಲೆಗೆ ಬೀಳಿಸಿ ಹಣ ದೋಚುತ್ತಿದ್ದ ಭೂಪ

ಐವರು ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 103 (1) ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಲಂಕಿ, ಬಘೇಲ್ ಮತ್ತು ಜಸೋಧನ್ ಸಿಂಗ್ ಅವರು ಸೆಪ್ಟೆಂಬರ್ 23 ರಂದು ಶಾಲೆಯ ಹಾಸ್ಟೆಲ್‌ನಿಂದ ಬಾಲಕನನ್ನು ಅಪಹರಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಸಿಂಗ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. “ಜಸೋಧನ್ ಸಿಂಗ್ ಮಾಟ ಮಂತ್ರದಲ್ಲಿ ನಂಬಿಕೆ ಹೊಂದಿದ್ದಾರೆ. ಶಾಲೆ ಮತ್ತು ಅವರ ಕುಟುಂಬದ ಏಳಿಗೆಗಾಗಿ ಮಗುವನ್ನು ಬಲಿ ಕೊಡುವಂತೆ ಅವರು ಮಗ ಬಘೇಲ್​​ನಲ್ಲಿ ಕೇಳಿಕೊಂಡರು” ಎಂದು ಸಿಂಗ್ ಹೇಳಿದ್ದಾರೆ.

ಬಾಲಕ ಅಳುತ್ತಿದ್ದಂತೆಯೇ ಆರೋಪಿ ಕತ್ತು ಹಿಸುಕಿ ಕೊಂದಿದ್ದಾನೆ. ವೀರಪಾಲ್ ಸಿಂಗ್ ಮತ್ತು ಶಾಲೆಯ ಪ್ರಾಂಶುಪಾಲ ಲಕ್ಷ್ಮಣ್ ಸಿಂಗ್ ಕೂಡ ಸ್ಥಳದಲ್ಲಿ ಹಾಜರಿದ್ದರು. ಶಾಲೆ ಮತ್ತು ಮಾಲೀಕರ ಕುಟುಂಬದ ಏಳಿಗೆಗಾಗಿ ವಿದ್ಯಾರ್ಥಿಯನ್ನು ಬಲಿಕೊಡಲಾಗಿದೆ ಎಂದು ಆರೋಪಿಗಳು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ ತನಿಖಾಧಿಕಾರಿಗಳು.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:37 pm, Fri, 27 September 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ