AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ವಿರೋಧಿಸಿದ ಬಾಲಕಿಯ ಕೊಂದು ದೇಹ ಎಸೆದಿದ್ದ ಮುಖ್ಯೋಪಾಧ್ಯಾಯ ಅರೆಸ್ಟ್​

ಯಾವುದು ಸರಿ, ಯಾವುದು ತಪ್ಪು ಎಂದು ಮಕ್ಕಳಿಗೆ ತಿಳಿ ಹೇಳುವ ಶಿಕ್ಷಕರೇ ಇಂಥಾ ಹೇಯ ಕೃತ್ಯ ಮಾಡಿದರೆ ಮಕ್ಕಳಿಗೆ ಭದ್ರತೆ ಸಿಗುವುದೆಲ್ಲಿ? ಪೋಷಕರು ಶಿಕ್ಷಕರನ್ನೇ ನಂಬಿ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಾರೆ. ಶಿಕ್ಷಕನೇ ಮಕ್ಕಳ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ.

ಅತ್ಯಾಚಾರ ವಿರೋಧಿಸಿದ ಬಾಲಕಿಯ ಕೊಂದು ದೇಹ ಎಸೆದಿದ್ದ ಮುಖ್ಯೋಪಾಧ್ಯಾಯ ಅರೆಸ್ಟ್​
ಶಿಕ್ಷಕImage Credit source: Coastal Digest
Follow us
ನಯನಾ ರಾಜೀವ್
|

Updated on: Sep 24, 2024 | 2:16 PM

ಯಾವುದು ಸರಿ, ಯಾವುದು ತಪ್ಪು ಎಂದು ಮಕ್ಕಳಿಗೆ ತಿಳಿ ಹೇಳುವ ಶಿಕ್ಷಕರೇ ಇಂಥಾ ಹೇಯ ಕೃತ್ಯ ಮಾಡಿದರೆ ಮಕ್ಕಳಿಗೆ ಭದ್ರತೆ ಸಿಗುವುದೆಲ್ಲಿ? ಪೋಷಕರು ಶಿಕ್ಷಕರನ್ನೇ ನಂಬಿ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಾರೆ. ಶಿಕ್ಷಕನೇ ಮಕ್ಕಳ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ.

ಗುಜರಾತ್​ನ ದೋಹಾದ್ ಜಿಲ್ಲೆಯ ಪಿಪಾಲಿಯಾ ಎಂಬಲ್ಲಿನ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ, ಆಕೆ ಕೂಗಿಕೊಂಡಾಗ, ಆಕೆಯನ್ನು ಹತ್ಯೆ ಮಾಡಿ ಎಸೆದು ಹೋಗಿದ್ದ ಇದೀಗ ಆತನನ್ನು ಬಂಧಿಸಲಾಗಿದೆ.

1ನೇ ತರಗತಿ ಓದುತ್ತಿದ್ದ ಬಾಲಕಿಯ ಶವ ಸೆ.19ರಂದು ಶಾಲಾ ಕಾಂಪೌಂಡ್‌ನಲ್ಲಿ ಪತ್ತೆಯಾಗಿದ್ದು, ಆಕೆಯ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಪ್ರಕರಣದ ತನಿಖೆಗಾಗಿ ಒಟ್ಟು 10 ತಂಡಗಳನ್ನು ರಚಿಸಲಾಗಿದೆ ಎಂದು ದೋಹಾದ್ ಪೊಲೀಸ್ ವರಿಷ್ಠಾಧಿಕಾರಿ ರಾಜದೀಪ್ ಸಿಂಗ್ ಝಾಲಾ ಹೇಳಿದ್ದಾರೆ.

ತನಿಖೆಯ ವೇಳೆ, ಪೋಷಕರು ಬಾಲಕಿಯನ್ನು ಶಾಲೆಯ ಮುಖ್ಯೋಪಾಧ್ಯಾಯ ಗೋವಿಂದ್ ನಾಥ್ ಅವರ ಕಾರಿನಲ್ಲಿ ಶಾಲೆಗೆ ಕಳುಹಿಸಿದ್ದಾರೆ ಎಂಬುದು ಪೊಲೀಸರಿಗೆ ತಿಳಿದುಬಂದಿದೆ. ಆಕೆ ಶಾಲೆಯಿಂದ ಹಿಂತಿರುಗದಿದ್ದಾಗ, ಹುಡುಗಿಯ ಪೋಷಕರು ನಾಥ್ ಬಳಿ ವಿಚಾರಿಸಿದ್ದರು, ಆದರೆ ಆತ ನಾನು ಆಕೆಯನ್ನು ಶಾಲೆಗೆ ಬಿಟ್ಟಿದ್ದೆಯಷ್ಟೆ ನನಗೇನು ಗೊತ್ತಿಲ್ಲ ಎಂದು ಹೇಳಿದ್ದಾನೆ.

ಮತ್ತಷ್ಟು ಓದಿ: ಕೆಸರೆರೆಚಿದ್ದಕ್ಕೆ ವಿದ್ಯಾರ್ಥಿನಿಯಿಂದ ಅವಮಾನ, ಕೋಪಗೊಂಡು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ

ತನಿಖೆಯ ನಂತರ ಪೊಲೀಸರು ಗೋವಿಂದ್ ನಾಥ್ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದರು. ವಿಚಾರಣೆಯ ಸಮಯದಲ್ಲಿ, ನಾಥ್​ ಅತ್ಯಾಚಾರ ಪ್ರಯತ್ನವನ್ನು ವಿರೋಧಿಸಿದ್ದರಿಂದ ಹುಡುಗಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದಾಗ ಆಕೆ ಕಿರುಚಲು ಆರಂಭಿಸಿದಳು ಎಂದು ನಾಥ್ ಹೇಳಿದ್ದಾರೆ. ಆಕೆಯ ಕಿರುಚಾಟವನ್ನು ತಡೆಯಲು ಆಕೆಯ ಬಾಯಿಯ ಮೇಲೆ ತನ್ನ ಕೈಗಳನ್ನು ಬಿಗಿಯಾಗಿ ಇಟ್ಟಿದ್ದ. ಬಾಲಕಿ ಸಾವನ್ನಪ್ಪಿದ್ದು, ಬಳಿಕ ಆಕೆಯನ್ನು ಕಾರಿನ ಹಿಂಬದಿಯಲ್ಲಿ ಬಚ್ಚಿಟ್ಟಿದ್ದಾನೆ.

ಬಳಿಕ ಗೋವಿಂದ್ ನಾಥ್ ಎಂದಿನಂತೆ ಶಾಲೆಗೆ ತೆರಳಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದರು. ತರಗತಿಗಳು ಮುಗಿದ ನಂತರ, ಅವನು ಕಾರಿಗೆ ಹಿಂತಿರುಗಿದನು, ಆಕೆಯ ಸಾಮಾನುಗಳನ್ನು ಶಾಲೆಯ ಗೇಟ್ ಬಳಿ ಎಸೆದು ಬಾಲಕಿಯ ಶವವನ್ನು ತರಗತಿಯ ಹಿಂದೆ ಬಿಟ್ಟು ಹೋಗಿದ್ದಾನೆ.

ಸೆಪ್ಟೆಂಬರ್ 19 ರಂದು ಸಂಜೆ ಸ್ಥಳೀಯರೊಂದಿಗೆ ಬಾಲಕಿಯ ಪೋಷಕರು ಶಾಲೆಗೆ ತಲುಪಿದಾಗ ಗೇಟ್ ಬಳಿ ಆಕೆಯ ಸಾಮಾನುಗಳು ಮತ್ತು ಶಾಲೆಯ ಕಾಂಪೌಂಡ್‌ನಲ್ಲಿ ಆಕೆಯ ಶವ ಪತ್ತೆಯಾಗಿದೆ.

ಕ್ರೈಂ ಸುದ್ದಿಗಲಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್