AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ವಿರೋಧಿಸಿದ ಬಾಲಕಿಯ ಕೊಂದು ದೇಹ ಎಸೆದಿದ್ದ ಮುಖ್ಯೋಪಾಧ್ಯಾಯ ಅರೆಸ್ಟ್​

ಯಾವುದು ಸರಿ, ಯಾವುದು ತಪ್ಪು ಎಂದು ಮಕ್ಕಳಿಗೆ ತಿಳಿ ಹೇಳುವ ಶಿಕ್ಷಕರೇ ಇಂಥಾ ಹೇಯ ಕೃತ್ಯ ಮಾಡಿದರೆ ಮಕ್ಕಳಿಗೆ ಭದ್ರತೆ ಸಿಗುವುದೆಲ್ಲಿ? ಪೋಷಕರು ಶಿಕ್ಷಕರನ್ನೇ ನಂಬಿ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಾರೆ. ಶಿಕ್ಷಕನೇ ಮಕ್ಕಳ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ.

ಅತ್ಯಾಚಾರ ವಿರೋಧಿಸಿದ ಬಾಲಕಿಯ ಕೊಂದು ದೇಹ ಎಸೆದಿದ್ದ ಮುಖ್ಯೋಪಾಧ್ಯಾಯ ಅರೆಸ್ಟ್​
ಶಿಕ್ಷಕImage Credit source: Coastal Digest
ನಯನಾ ರಾಜೀವ್
|

Updated on: Sep 24, 2024 | 2:16 PM

Share

ಯಾವುದು ಸರಿ, ಯಾವುದು ತಪ್ಪು ಎಂದು ಮಕ್ಕಳಿಗೆ ತಿಳಿ ಹೇಳುವ ಶಿಕ್ಷಕರೇ ಇಂಥಾ ಹೇಯ ಕೃತ್ಯ ಮಾಡಿದರೆ ಮಕ್ಕಳಿಗೆ ಭದ್ರತೆ ಸಿಗುವುದೆಲ್ಲಿ? ಪೋಷಕರು ಶಿಕ್ಷಕರನ್ನೇ ನಂಬಿ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಾರೆ. ಶಿಕ್ಷಕನೇ ಮಕ್ಕಳ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ.

ಗುಜರಾತ್​ನ ದೋಹಾದ್ ಜಿಲ್ಲೆಯ ಪಿಪಾಲಿಯಾ ಎಂಬಲ್ಲಿನ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ, ಆಕೆ ಕೂಗಿಕೊಂಡಾಗ, ಆಕೆಯನ್ನು ಹತ್ಯೆ ಮಾಡಿ ಎಸೆದು ಹೋಗಿದ್ದ ಇದೀಗ ಆತನನ್ನು ಬಂಧಿಸಲಾಗಿದೆ.

1ನೇ ತರಗತಿ ಓದುತ್ತಿದ್ದ ಬಾಲಕಿಯ ಶವ ಸೆ.19ರಂದು ಶಾಲಾ ಕಾಂಪೌಂಡ್‌ನಲ್ಲಿ ಪತ್ತೆಯಾಗಿದ್ದು, ಆಕೆಯ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಪ್ರಕರಣದ ತನಿಖೆಗಾಗಿ ಒಟ್ಟು 10 ತಂಡಗಳನ್ನು ರಚಿಸಲಾಗಿದೆ ಎಂದು ದೋಹಾದ್ ಪೊಲೀಸ್ ವರಿಷ್ಠಾಧಿಕಾರಿ ರಾಜದೀಪ್ ಸಿಂಗ್ ಝಾಲಾ ಹೇಳಿದ್ದಾರೆ.

ತನಿಖೆಯ ವೇಳೆ, ಪೋಷಕರು ಬಾಲಕಿಯನ್ನು ಶಾಲೆಯ ಮುಖ್ಯೋಪಾಧ್ಯಾಯ ಗೋವಿಂದ್ ನಾಥ್ ಅವರ ಕಾರಿನಲ್ಲಿ ಶಾಲೆಗೆ ಕಳುಹಿಸಿದ್ದಾರೆ ಎಂಬುದು ಪೊಲೀಸರಿಗೆ ತಿಳಿದುಬಂದಿದೆ. ಆಕೆ ಶಾಲೆಯಿಂದ ಹಿಂತಿರುಗದಿದ್ದಾಗ, ಹುಡುಗಿಯ ಪೋಷಕರು ನಾಥ್ ಬಳಿ ವಿಚಾರಿಸಿದ್ದರು, ಆದರೆ ಆತ ನಾನು ಆಕೆಯನ್ನು ಶಾಲೆಗೆ ಬಿಟ್ಟಿದ್ದೆಯಷ್ಟೆ ನನಗೇನು ಗೊತ್ತಿಲ್ಲ ಎಂದು ಹೇಳಿದ್ದಾನೆ.

ಮತ್ತಷ್ಟು ಓದಿ: ಕೆಸರೆರೆಚಿದ್ದಕ್ಕೆ ವಿದ್ಯಾರ್ಥಿನಿಯಿಂದ ಅವಮಾನ, ಕೋಪಗೊಂಡು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ

ತನಿಖೆಯ ನಂತರ ಪೊಲೀಸರು ಗೋವಿಂದ್ ನಾಥ್ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದರು. ವಿಚಾರಣೆಯ ಸಮಯದಲ್ಲಿ, ನಾಥ್​ ಅತ್ಯಾಚಾರ ಪ್ರಯತ್ನವನ್ನು ವಿರೋಧಿಸಿದ್ದರಿಂದ ಹುಡುಗಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದಾಗ ಆಕೆ ಕಿರುಚಲು ಆರಂಭಿಸಿದಳು ಎಂದು ನಾಥ್ ಹೇಳಿದ್ದಾರೆ. ಆಕೆಯ ಕಿರುಚಾಟವನ್ನು ತಡೆಯಲು ಆಕೆಯ ಬಾಯಿಯ ಮೇಲೆ ತನ್ನ ಕೈಗಳನ್ನು ಬಿಗಿಯಾಗಿ ಇಟ್ಟಿದ್ದ. ಬಾಲಕಿ ಸಾವನ್ನಪ್ಪಿದ್ದು, ಬಳಿಕ ಆಕೆಯನ್ನು ಕಾರಿನ ಹಿಂಬದಿಯಲ್ಲಿ ಬಚ್ಚಿಟ್ಟಿದ್ದಾನೆ.

ಬಳಿಕ ಗೋವಿಂದ್ ನಾಥ್ ಎಂದಿನಂತೆ ಶಾಲೆಗೆ ತೆರಳಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದರು. ತರಗತಿಗಳು ಮುಗಿದ ನಂತರ, ಅವನು ಕಾರಿಗೆ ಹಿಂತಿರುಗಿದನು, ಆಕೆಯ ಸಾಮಾನುಗಳನ್ನು ಶಾಲೆಯ ಗೇಟ್ ಬಳಿ ಎಸೆದು ಬಾಲಕಿಯ ಶವವನ್ನು ತರಗತಿಯ ಹಿಂದೆ ಬಿಟ್ಟು ಹೋಗಿದ್ದಾನೆ.

ಸೆಪ್ಟೆಂಬರ್ 19 ರಂದು ಸಂಜೆ ಸ್ಥಳೀಯರೊಂದಿಗೆ ಬಾಲಕಿಯ ಪೋಷಕರು ಶಾಲೆಗೆ ತಲುಪಿದಾಗ ಗೇಟ್ ಬಳಿ ಆಕೆಯ ಸಾಮಾನುಗಳು ಮತ್ತು ಶಾಲೆಯ ಕಾಂಪೌಂಡ್‌ನಲ್ಲಿ ಆಕೆಯ ಶವ ಪತ್ತೆಯಾಗಿದೆ.

ಕ್ರೈಂ ಸುದ್ದಿಗಲಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ