3 ವರ್ಷದ ಬಾಲಕಿ ಮೇಲೆ ನರ್ಸರಿ ಸ್ಕೂಲ್ ವ್ಯಾನ್ ಚಾಲಕನಿಂದ ಅತ್ಯಾಚಾರ!

ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ 3 ವರ್ಷದ ನರ್ಸರಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಾಲಾ ವ್ಯಾನ್ ಚಾಲಕನನ್ನು ಬಂಧಿಸಲಾಗಿದೆ. 3 ವರ್ಷದ ಬಾಲಕಿಯ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಆರೋಪಿ ಚಾಲಕನನ್ನು ಭಾನುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

3 ವರ್ಷದ ಬಾಲಕಿ ಮೇಲೆ ನರ್ಸರಿ ಸ್ಕೂಲ್ ವ್ಯಾನ್ ಚಾಲಕನಿಂದ ಅತ್ಯಾಚಾರ!
ಸಾಂದರ್ಭಿಕ ಚಿತ್ರ

Updated on: Aug 12, 2024 | 8:30 PM

ಜಮ್‌ಶೆಡ್‌ಪುರ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ 3 ವರ್ಷದ ನರ್ಸರಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 30 ವರ್ಷದ ಶಾಲಾ ವ್ಯಾನ್ ಚಾಲಕನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಗರದ ಮಾವಿನಕಟ್ಟೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ. ಬಾಲಕಿಯ ತಾಯಿ ಶನಿವಾರ ಎಫ್‌ಐಆರ್ ದಾಖಲಿಸಿದ ನಂತರ ವಿಶೇಷ ಪೊಲೀಸ್ ತಂಡವು ಆರೋಪಿ ಜೈಶ್ರೀ ತಿವಾರಿಯನ್ನು ಬಂಧಿಸಿದ್ದಾರೆ.

ಆತ ಮಾವಿನಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಡೈಗುತ್ತು ನಿವಾಸಿಯಾಗಿದ್ದು, ದೂರು ಬಂದ 3 ಗಂಟೆಗಳೊಳಗೆ ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ನಗರ ಮತ್ತು ಗ್ರಾಮಾಂತರ) ರಿಶವ್ ಗಾರ್ಡ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Kalaburagi News: ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ, ಆಸ್ಪತ್ರೆಯಲ್ಲಿ ಪ್ರಾಣಬಿಟ್ಟ ಕಂದಮ್ಮ

ಮೂರು ವರ್ಷದ ಬಾಲಕಿಯ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ಆರೋಪಿ ಚಾಲಕನನ್ನು ಭಾನುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಶುಕ್ರವಾರ ಆ ಮಗು ನರ್ಸರಿಯಿಂದ ಸ್ಕೂಲ್ ವ್ಯಾನ್​ನಲ್ಲಿ ಮನೆಗೆ ಮರಳಿದ ನಂತರ ಹೊಟ್ಟೆ ನೋವಾಗುತ್ತಿದೆ ಎಂದು ಅಪ್ಪ-ಅಮ್ಮನ ಬಳಿ ಹೇಳಿದ್ದಳು. ಆಕೆಯ ಅಮ್ಮ ಪರೀಕ್ಷಿಸಿದಾಗ ಆಕೆಯ ಗುಪ್ತಾಂಗದಲ್ಲಿ ರಕ್ತ ಬರುತ್ತಿರುವುದು ಕಂಡಿತ್ತು.

ಈ ಬಗ್ಗೆ ಮಗುವಿನ ಬಳಿ ವಿಚಾರಿಸಿದಾಗ ತನ್ನ ಶಾಲೆಯ ವ್ಯಾನ್ ಚಾಲಕ ಹೇಗೆ ತನ್ನ ಮೇಲೆ ಅತ್ಯಾಚಾರ ನಡೆಸಿದ ಎಂಬುದನ್ನು ಆ ಬಾಲಕಿ ವಿವರಿಸಿದ್ದಳು. ಇದನ್ನು ಕೇಳಿ ತಾಯಿಗೆ ಆಘಾತವಾಗಿತ್ತು. ಬಳಿಕ ಆಕೆ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಹಿರಿಯ ಅಧೀಕ್ಷಕ ಕಿಶೋರ್ ಕೌಶಲ್ ಅವರು ವಿಶೇಷ ಪೊಲೀಸ್ ತಂಡವನ್ನು ರಚಿಸಿದರು ಮತ್ತು ಪೋಕ್ಸೋ ಕಾಯ್ದೆಯ ನಿಬಂಧನೆಗಳ ಪ್ರಕಾರ ಆರೋಪಿಯನ್ನು ಬಂಧಿಸುವಂತೆ ಸೂಚಿಸಿದರು.

ಇದನ್ನೂ ಓದಿ: Crime News: ಹಾಸಿಗೆ ಹಿಡಿದಿದ್ದ 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರ; ಅಪರಾಧಿಗೆ 12 ವರ್ಷ ಜೈಲು ಶಿಕ್ಷೆ

ಚಾಲಕನನ್ನು ಹಿಡಿಯುವ ಮೊದಲು ಘಟನೆಯ ವಿವರಗಳನ್ನು ಸಂಗ್ರಹಿಸಲು ಮಹಿಳಾ ಪೊಲೀಸ್ ಅಧಿಕಾರಿಯನ್ನು ಸಂತ್ರಸ್ತೆಯ ಮನೆಗೆ ಕಳುಹಿಸಲಾಯಿತು. ಶಾಲಾ ವ್ಯಾನ್ ಜಪ್ತಿ ಮಾಡಲಾಗಿದೆ, ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಮತ್ತು ಸಂತ್ರಸ್ತೆಯ ಕುಟುಂಬಕ್ಕೆ ಒಂದು ವಾರದೊಳಗೆ ಆರೋಪಪಟ್ಟಿ ಸಲ್ಲಿಸುವುದಾಗಿ ಭರವಸೆ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us