AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲೆಕ್ಸ್ ವಿಚಾರಕ್ಕೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಮಾರಾಮಾರಿ ಮಾಡಿಕೊಂಡಿರುವಂತಹ ಘಟನೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವಿಜಯನಗರದ ಎಂ.ಸಿ.ಲೇಔಟ್‌ನ ಬಿಜಿಎಸ್ ಆಟದ ಮೈದಾನದಲ್ಲಿ ನಡೆದಿದೆ.

ಫ್ಲೆಕ್ಸ್ ವಿಚಾರಕ್ಕೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ
ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಾರಾಮಾರಿ
ಗಂಗಾಧರ​ ಬ. ಸಾಬೋಜಿ
|

Updated on:Mar 17, 2023 | 8:09 PM

Share

ಬೆಂಗಳೂರು: ಫ್ಲೆಕ್ಸ್ (Flex) ವಿಚಾರವಾಗಿ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ಕಾರ್ಯಕರ್ತರು ಮಾರಾಮಾರಿ ಮಾಡಿಕೊಂಡಿರುವಂತಹ ಘಟನೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವಿಜಯನಗರದ ಎಂ.ಸಿ.ಲೇಔಟ್‌ನ ಬಿಜಿಎಸ್ ಆಟದ ಮೈದಾನದಲ್ಲಿ ನಡೆದಿದೆ. ಕಾಂಗ್ರೆಸ್‌ನ ಮಾಜಿ ಶಾಸಕ ಪ್ರಿಯಾಕೃಷ್ಣ ಬೆಂಬಲಿಗರಿಂದ ಸಚಿವ ಸೋಮಣ್ಣ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪ ಮಾಡಲಾಗಿದೆ. ಕಾಂಗ್ರೆಸ್ ಕಾರ್ಯಕ್ರಮಕ್ಕಾಗಿ ಅನುಮತಿ ಪಡೆದು ಯುಗಾದಿ ಉತ್ಸವ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸುತ್ತಿರುವ ಆರೋಪ ಮಾಡಿದ್ದಾರೆ. ಮಾರಾಮಾರಿಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ವಿಜಯನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಾರ್ಚ್ 19ರಂದು ಕಾಂಗ್ರೆಸ್ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ಬೇರೆ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿದ್ದಕ್ಕೆ BJP ಕಾರ್ಯಕರ್ತರಿಂದ ಆಕ್ಷೇಪ ವ್ಯಕ್ತವಾಗಿದೆ. ಈ ವೇಳೆ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು ಮಾರಾಮಾರಿ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ

ಹಾಸನ: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಹಾಸನ ಜಿಲ್ಲೆಯಲ್ಲಿ ರಾಜಕೀಯ ಪಕ್ಷಗಳ ನಡುವಿನ ಜಟಾಪಟಿ ಹೆಚ್ಚುತ್ತಿದೆ. ಇದೀಗ ದೇವಸ್ಥಾನದಲ್ಲಿ ಪ್ರಸಾದ ಹಂಚುವಿಕೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ನೂಕಾಟ, ತಳ್ಳಾಟ ನಡೆದಿತ್ತು. ಜಿಲ್ಲೆಯ ಹೊಳೆನರಸೀಪುರದಲ್ಲಿರುವ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವದ (ಮಾರ್ಚ್ 7) ಅಂಗವಾಗಿ ಮಾಜಿ ಸಚಿವರೂ ಆಗಿರುವ ಶಾಸಕ ಹೆಚ್.ಡಿ.ರೇವಣ್ಣ ಅವರ ಕಡೆಯಿಂದ ಪ್ರಸಾದ ವಿತರಣೆ ಮಾಡಲು ಕಾರ್ಯಕರ್ತರು ಮುಂದಾಗಿದ್ದರು. ಈ ವೇಳೆ ನಮಗೂ ಪ್ರಸಾದ ವಿತರಣೆಗೆ ಅವಕಾಶ ನೀಡಿ ಅಂತಾ ಕಾಂಗ್ರೆಸ್ಸಿಗರ ಪಟ್ಟು ಹಿಡಿಯಲಾರಂಭಿಸಿ ಧರಣಿ ಕುಳಿತ್ತಿದ್ದರು. ಈ ವಿಚಾರ ತಿಳಿದು ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಜಮಾಯಿಸಿದ್ದರು.

ಇದನ್ನೂ ಓದಿ: Bengaluru: ಚೀನಾ ಲೋನ್​ ಕಂಪನಿಗಳಿಂದ ವಂಚನೆ: 7 ಸಂಸ್ಥೆ, ಐವರ ವಿರುದ್ಧ ತನಿಖಾ ವರದಿ ಸಲ್ಲಿಸಿದ ಇಡಿ

ಜೆಡಿಎಸ್ ಕಾರ್ಯಕರ್ತರು ಪ್ರಸಾದ ವಿತರಣೆಗೆ ನಿಂತಾಗ ನಮಗೂ ಪ್ರಸಾದ ವಿನಿಯೋಗ ಮಾಡಲು ಅವಕಾಶ ನೀಡಿ ಎಂದು ಪಾತ್ರೆ ಹಾಗೂ ಶಾಮಿಯಾನದೊಂದಿಗೆ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದಾರೆ. ಈ ವೇಳೆ ವಾಹನ ತಡೆದ ಪೊಲೀಸರ ವಿರುದ್ದ ಕೈ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ಕ್ರಮದಿಂದ ಕೆರಳಿ ದೇವಾಲಯದ ದ್ವಾರದ ಎದುರು ನೂರಾರು ಮಂದಿ ಧರಣಿಗೆ ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಹೊಡೆದು ಓಡಿಸಿದರು.

ಹೀಗೆ ಆರಂಭವಾದ ಕಾಂಗ್ರೆಸ್ ಕಾರ್ಯಕರ್ತರ ಧರಣಿ ವಿಚಾರ ತಿಳಿದ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದರು. ಬಳಿಕ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಆರಂಭವಾದ ವಾಗ್ವಾದ ತಾರಕಕ್ಕೇರಿ ಪರಸ್ಪರ ನೂಕಾಟ ತಳ್ಳಾಟ ಆರಂಭವಾಯಿತು. ಇದರಿಂದಾಗಿ ದೇವಸ್ಥಾನದ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿತು. ಈ ವೇಳೆ ಜಟಾಪಟಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸಪಟ್ಟರು.

ಇದನ್ನೂ ಓದಿ: Bengaluru-Mysuru Expressway: ವಿಪಕ್ಷಗಳ ಆರೋಪದ ನಡುವೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪಘಾತ

ಇನ್ನು, ದೇವಸ್ಥಾನದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡ ಬಗ್ಗೆ ವಿಚಾರ ತಿಳಿದ ತಹಶೀಲ್ದಾರ್ ಸ್ಥಳಕ್ಕೆ ದೌಡಾಯಿಸಿದ್ದು, ಪಕ್ಷದ ಹೆಸರಿನಲ್ಲಿ ದೇಗುಲ ಆವರಣದಲ್ಲಿ ಪ್ರಸಾದ ವಿತರಣೆಗೆ ಅವಕಾಶ ಇಲ್ಲವೆಂದು ಸ್ಪಷ್ಟನೆ ನೀಡಿದರು. ಈವೆರೆಗೆ ಯಾವುದೇ ಪಕ್ಷದ ಹೆಸರನಲ್ಲಿ ಪ್ರಸಾದ ವಿನಿಯೋಗ ನಡೆದಿಲ್ಲ. ಈ ವರ್ಷವೂ ವ್ಯಕ್ತಿ ಅಥವಾ ಪಕ್ಷದ ಹೆಸರಿನಲ್ಲಿ ಅನ್ನ ಸಂತರ್ಪಣೆ ಆಗಲ್ಲ. ಮುಜರಾಯಿ ಇಲಾಖೆಗೆ ಯಾರು ಬೇಕಾದರೂ ದಾನ ಕೊಡಬಹುದು. ದಾನಿಗಳು ದಿನಸಿ ಕೊಟ್ಟರೆ ಅನ್ನಸಂತರ್ಪಣೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಬಳಿಕ ಪರಿಸ್ಥಿತಿ ತಿಳಿಗೊಂಡಿತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:09 pm, Fri, 17 March 23

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು