Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಮಾಲ್​ನ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್​, ಬುರ್ಖಾ ಧರಿಸಿ ಪ್ರವೇಶಿಸಿದ್ದ ಟೆಕ್ಕಿ

ಕೇರಳದಲ್ಲಿ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್​ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಟೆಕ್ಕಿಯೊಬ್ಬ ಬುರ್ಖಾ ಧರಿಸಿ ಶೌಚಾಲಯಕ್ಕೆ ಪ್ರವೇಸಿ ಕೃತ್ಯ ಎಸಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೇರಳದ ಕೊಚ್ಚಿಯಲ್ಲಿರುವ ಲುಲುಮಾಲ್​​ನಲ್ಲಿ ಈ ಘಟನೆ ನಡೆದಿದೆ

ಕೇರಳದ ಮಾಲ್​ನ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್​, ಬುರ್ಖಾ ಧರಿಸಿ ಪ್ರವೇಶಿಸಿದ್ದ ಟೆಕ್ಕಿ
ಅಭಿಮನ್ಯು
Follow us
ನಯನಾ ರಾಜೀವ್
|

Updated on:Aug 18, 2023 | 9:19 AM

ಕೇರಳದಲ್ಲಿ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್​ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಟೆಕ್ಕಿಯೊಬ್ಬ ಬುರ್ಖಾ ಧರಿಸಿ ಶೌಚಾಲಯಕ್ಕೆ ಪ್ರವೇಸಿ ಕೃತ್ಯ ಎಸಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೇರಳದ ಕೊಚ್ಚಿಯಲ್ಲಿರುವ ಲುಲುಮಾಲ್​​ನಲ್ಲಿ ಈ ಘಟನೆ ನಡೆದಿದೆ, ಐಟಿ ಉದ್ಯೋಗಿ ಅಭಿಮನ್ಯು(23) ಈ ಕೃತ್ಯ ಎಸಗಿದ್ದಾನೆ. ಆತ ಬಿಟೆಕ್ ಪದವೀಧರನಾಗಿರುವ ಆರೋಪಿ ಐಟಿ ಕಂಪನಿಯ ಉದ್ಯೋಗಿಯಾಗಿದ್ದಾನೆ. ಮಹಿಳೆಯ ಸೋಗಿನಲ್ಲಿ ಬುರ್ಖಾ ಧರಿಸಿ ಲುಲುಮಾಲ್​ಗೆ ಬಂದಿದ್ದ, ಈ ವೇಳೆ ಮಹಿಳೆಯರ ಶೌಚಾಯಲಕ್ಕೆ ತೆರಳಿ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ.

ಆತ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಹೊರಬಂದು ನಿಂತಿದ್ದ, ಸಿಬ್ಬಂದಿಗೆ ಅನುಮಾನ ಬಂದು ಮಾಲ್​ನ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೊಚ್ಚಿ ಪೊಲೀಸರು ಅಭಿಮನ್ಯುವನ್ನು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಕೊಚ್ಚಿಯ ಪ್ರಸಿದ್ಧ ಮಾಲ್‌ನಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಕೊಚ್ಚಿಯಲ್ಲಿ ಕೆಲಸ ಮಾಡುವ ರೊಬೊಟಿಕ್ಸ್ ಎಂಜಿನಿಯರಿಂಗ್ ಪದವೀಧರ ಅಭಿಮನ್ಯು ಮಹಿಳೆಯಂತೆ ಪೋಸ್ ನೀಡಲು ಬುರ್ಖಾ (ಮುಸುಕು) ಧರಿಸಿ ಮಹಿಳೆಯರ ವಾಶ್‌ರೂಮ್‌ನಲ್ಲಿ ವೀಡಿಯೊಗಳನ್ನು ಚಿತ್ರೀಕರಿಸುವಾಗ ಸಿಕ್ಕಿಬಿದ್ದಿದ್ದಾನೆ. ಸ್ಥಳೀಯ ನ್ಯಾಯಾಲಯದಿಂದ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬುರ್ಖಾ ಧರಿಸಿರುವ ಅಭಿಮನ್ಯು ವಿಡಿಯೋ

ಪೊಲೀಸರು ಅಭಿಮನ್ಯು ಅವರ ಫೋನ್ ಮತ್ತು ಅಪರಾಧ ಮಾಡಲು ಬಳಸಿದ ಬುರ್ಖಾವನ್ನು ವಶಪಡಿಸಿಕೊಂಡಿದ್ದಾರೆ, ಈ ವ್ಯಕ್ತಿ ಈ ಹಿಂದೆಯೂ ಇಂತಹ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರೆ ಅದನ್ನು ತನಿಖೆ ಮಾಡಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಉಡುಪಿ ಕಾಲೇಜಿನ ವಿಡಿಯೋ ಪ್ರಕರಣ, ಉಡುಪಿ ತಲುಪುವ ಮುನ್ನ ​ಮೌನ ಮುರಿದ ಸಿದ್ದರಾಮಯ್ಯ

ಕರ್ನಾಟಕದಲ್ಲೂ ನಡೆದಿತ್ತು ಇಂಥಹದ್ದೇ ಘಟನೆ

ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿದ್ಯಾರ್ಥಿಯೋರ್ವಳ ಖಾಸಗಿ ದೃಶ್ಯ ಚಿತ್ರೀಕರಣ ಮಾಡಿರುವ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿತ್ತು.

ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಹುಡುಗಿಯರ ವಿಡಿಯೋ ರೆಕಾರ್ಡ್ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ವಿದ್ಯಾರ್ಥಿನಿಯರು ತಮಾಷೆಗೆಂದು ವಿಡಿಯೋ ಮಾಡಿ ನಂತರ ಡಿಲೀಟ್ ಮಾಡಿದ್ದಾರೆ ಎಂದು ಹೇಳಲಾಗಿತ್ತು.

ಅಷ್ಟೇ ಅಲ್ಲ ಕರ್ನಾಟಕದಲ್ಲಿ ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಎಂದು ಘೋಷಿಸಿದ ಬಳಿಕ ವ್ಯಕ್ತಿಯೊಬ್ಬರು ಬುರ್ಖಾ ಧರಿಸಿ ಬಸ್​ನಲ್ಲಿ ಪ್ರಯಾಣಿಸಿ ಸಿಕ್ಕಿಬಿದ್ದಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:19 am, Fri, 18 August 23

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ