AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಣ್ಣ ವಾಗ್ವಾದ, ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈದು ಆರೋಪಿ ಪರಾರಿ

ಸಣ್ಣ ವಾಗ್ವಾದ ತಾರಕಕ್ಕೇರಿ ವ್ಯಕ್ತಿಯೊಬ್ಬ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಕೇಂದ್ರ ದೆಹಲಿಯ ಕರೋಲ್​ ಬಾಗ್ ಪ್ರದೇಶದಲ್ಲಿ ಘಟನೆ ನಡೆದಿದೆ. ಮನೋಜ್ ಶರ್ಮಾ ಸೆಕ್ಯುರಿಟಿ ಗಾರ್ಡ್​ ಆಗಿ ಕೆಲಸ ಮಾಡುತ್ತಿದ್ದು, ಶನಿವಾರ ಮಧ್ಯರಾತ್ರಿ ಊಟಕ್ಕೆಂದು ಸ್ಕೂಟಿಯಲ್ಲಿ ತೆರಳಿದ್ದರು. ಆ ಸಮಯದಲ್ಲಿ ಅವರ ಬೈಕ್ ಒಬ್ಬ ವ್ಯಕ್ತಿಗೆ ತಾಗಿತ್ತು, ಅದಕ್ಕೆ ಕೋಪಗೊಂಡ ಆರೋಪಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಸಣ್ಣ ವಾಗ್ವಾದ, ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈದು ಆರೋಪಿ ಪರಾರಿ
ಕ್ರೈಂ
ನಯನಾ ರಾಜೀವ್
|

Updated on: Aug 19, 2024 | 8:00 AM

Share

ರಸ್ತೆಯಲ್ಲಿ ನಡೆದ ಸಣ್ಣ ವಾಗ್ವಾದ ತಾರಕಕ್ಕೇರಿ ವ್ಯಕ್ತಿಯೊಬ್ಬ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಕೇಂದ್ರ ದೆಹಲಿಯ ಕರೋಲ್​ ಬಾಗ್ ಪ್ರದೇಶದಲ್ಲಿ ಘಟನೆ ನಡೆದಿದೆ. ಮನೋಜ್ ಶರ್ಮಾ ಸೆಕ್ಯುರಿಟಿ ಗಾರ್ಡ್​ ಆಗಿ ಕೆಲಸ ಮಾಡುತ್ತಿದ್ದು, ಶನಿವಾರ ಮಧ್ಯರಾತ್ರಿ ಊಟಕ್ಕೆಂದು ಸ್ಕೂಟಿಯಲ್ಲಿ ತೆರಳಿದ್ದರು. ಆ ಸಮಯದಲ್ಲಿ ಅವರ ಬೈಕ್ ಒಬ್ಬ ವ್ಯಕ್ತಿಗೆ ತಾಗಿತ್ತು, ಅದಕ್ಕೆ ಕೋಪಗೊಂಡ ಆರೋಪಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಪೊಲೀಸ್ ಮೂಲಗಳ ಪ್ರಕಾರ, ಆರೋಪಿಯನ್ನು ಗುರುತಿಸಲಾಗಿದ್ದು, ಆತನನ್ನು ಬಂಧಿಸಲು ಪೊಲೀಸ್ ತಂಡವು ವಿವಿಧ ಪ್ರದೇಶಗಳಲ್ಲಿ ನಿರಂತರವಾಗಿ ದಾಳಿ ನಡೆಸುತ್ತಿದೆ.

ಪೊಲೀಸ್ ನಿಯಂತ್ರಣ ಕೊಠಡಿಗೆ ಶನಿವಾರ ಮಧ್ಯರಾತ್ರಿಯ ಸುಮಾರಿಗೆ ಚೂರಿ ಇರಿತದ ಬಗ್ಗೆ ಮೊದಲು ಮಾಹಿತಿ ಸಿಕ್ಕಿತು. ಮಾಹಿತಿ ಪಡೆದ ತಕ್ಷಣ ಪೊಲೀಸ್ ತಂಡವು ಸ್ಥಳಕ್ಕೆ ಆಗಮಿಸಿ ಗಾಯಾಳು ಮನೋಜ್ ಶರ್ಮಾನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವರು ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೋಲಾರ: ಹೆಂಡತಿ ಮೇಲೆ ಅನುಮಾನ, 18 ಬಾರಿ ಚಾಕುವಿನಿಂದ ಚುಚ್ಚಿ ಕೊಂದ ಪತಿ! ಆಗಿದ್ದೇನು?

ದೆಹಲಿ ಪೊಲೀಸರು ಕೊಲೆ ಸೇರಿದಂತೆ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ, ಕೋಪದ ಕೈಯಲ್ಲಿ ಬುದ್ಧಿಕೊಡಬಾರದು ಎಂಬುದಕ್ಕೆ ಇದೊಂದು ನಿದರ್ಶನ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ