AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಣ್ಣ ವಾಗ್ವಾದ, ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈದು ಆರೋಪಿ ಪರಾರಿ

ಸಣ್ಣ ವಾಗ್ವಾದ ತಾರಕಕ್ಕೇರಿ ವ್ಯಕ್ತಿಯೊಬ್ಬ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಕೇಂದ್ರ ದೆಹಲಿಯ ಕರೋಲ್​ ಬಾಗ್ ಪ್ರದೇಶದಲ್ಲಿ ಘಟನೆ ನಡೆದಿದೆ. ಮನೋಜ್ ಶರ್ಮಾ ಸೆಕ್ಯುರಿಟಿ ಗಾರ್ಡ್​ ಆಗಿ ಕೆಲಸ ಮಾಡುತ್ತಿದ್ದು, ಶನಿವಾರ ಮಧ್ಯರಾತ್ರಿ ಊಟಕ್ಕೆಂದು ಸ್ಕೂಟಿಯಲ್ಲಿ ತೆರಳಿದ್ದರು. ಆ ಸಮಯದಲ್ಲಿ ಅವರ ಬೈಕ್ ಒಬ್ಬ ವ್ಯಕ್ತಿಗೆ ತಾಗಿತ್ತು, ಅದಕ್ಕೆ ಕೋಪಗೊಂಡ ಆರೋಪಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಸಣ್ಣ ವಾಗ್ವಾದ, ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈದು ಆರೋಪಿ ಪರಾರಿ
ಕ್ರೈಂ
ನಯನಾ ರಾಜೀವ್
|

Updated on: Aug 19, 2024 | 8:00 AM

Share

ರಸ್ತೆಯಲ್ಲಿ ನಡೆದ ಸಣ್ಣ ವಾಗ್ವಾದ ತಾರಕಕ್ಕೇರಿ ವ್ಯಕ್ತಿಯೊಬ್ಬ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಕೇಂದ್ರ ದೆಹಲಿಯ ಕರೋಲ್​ ಬಾಗ್ ಪ್ರದೇಶದಲ್ಲಿ ಘಟನೆ ನಡೆದಿದೆ. ಮನೋಜ್ ಶರ್ಮಾ ಸೆಕ್ಯುರಿಟಿ ಗಾರ್ಡ್​ ಆಗಿ ಕೆಲಸ ಮಾಡುತ್ತಿದ್ದು, ಶನಿವಾರ ಮಧ್ಯರಾತ್ರಿ ಊಟಕ್ಕೆಂದು ಸ್ಕೂಟಿಯಲ್ಲಿ ತೆರಳಿದ್ದರು. ಆ ಸಮಯದಲ್ಲಿ ಅವರ ಬೈಕ್ ಒಬ್ಬ ವ್ಯಕ್ತಿಗೆ ತಾಗಿತ್ತು, ಅದಕ್ಕೆ ಕೋಪಗೊಂಡ ಆರೋಪಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಪೊಲೀಸ್ ಮೂಲಗಳ ಪ್ರಕಾರ, ಆರೋಪಿಯನ್ನು ಗುರುತಿಸಲಾಗಿದ್ದು, ಆತನನ್ನು ಬಂಧಿಸಲು ಪೊಲೀಸ್ ತಂಡವು ವಿವಿಧ ಪ್ರದೇಶಗಳಲ್ಲಿ ನಿರಂತರವಾಗಿ ದಾಳಿ ನಡೆಸುತ್ತಿದೆ.

ಪೊಲೀಸ್ ನಿಯಂತ್ರಣ ಕೊಠಡಿಗೆ ಶನಿವಾರ ಮಧ್ಯರಾತ್ರಿಯ ಸುಮಾರಿಗೆ ಚೂರಿ ಇರಿತದ ಬಗ್ಗೆ ಮೊದಲು ಮಾಹಿತಿ ಸಿಕ್ಕಿತು. ಮಾಹಿತಿ ಪಡೆದ ತಕ್ಷಣ ಪೊಲೀಸ್ ತಂಡವು ಸ್ಥಳಕ್ಕೆ ಆಗಮಿಸಿ ಗಾಯಾಳು ಮನೋಜ್ ಶರ್ಮಾನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವರು ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೋಲಾರ: ಹೆಂಡತಿ ಮೇಲೆ ಅನುಮಾನ, 18 ಬಾರಿ ಚಾಕುವಿನಿಂದ ಚುಚ್ಚಿ ಕೊಂದ ಪತಿ! ಆಗಿದ್ದೇನು?

ದೆಹಲಿ ಪೊಲೀಸರು ಕೊಲೆ ಸೇರಿದಂತೆ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ, ಕೋಪದ ಕೈಯಲ್ಲಿ ಬುದ್ಧಿಕೊಡಬಾರದು ಎಂಬುದಕ್ಕೆ ಇದೊಂದು ನಿದರ್ಶನ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು