AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಣ್ಣ ವಾಗ್ವಾದ, ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈದು ಆರೋಪಿ ಪರಾರಿ

ಸಣ್ಣ ವಾಗ್ವಾದ ತಾರಕಕ್ಕೇರಿ ವ್ಯಕ್ತಿಯೊಬ್ಬ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಕೇಂದ್ರ ದೆಹಲಿಯ ಕರೋಲ್​ ಬಾಗ್ ಪ್ರದೇಶದಲ್ಲಿ ಘಟನೆ ನಡೆದಿದೆ. ಮನೋಜ್ ಶರ್ಮಾ ಸೆಕ್ಯುರಿಟಿ ಗಾರ್ಡ್​ ಆಗಿ ಕೆಲಸ ಮಾಡುತ್ತಿದ್ದು, ಶನಿವಾರ ಮಧ್ಯರಾತ್ರಿ ಊಟಕ್ಕೆಂದು ಸ್ಕೂಟಿಯಲ್ಲಿ ತೆರಳಿದ್ದರು. ಆ ಸಮಯದಲ್ಲಿ ಅವರ ಬೈಕ್ ಒಬ್ಬ ವ್ಯಕ್ತಿಗೆ ತಾಗಿತ್ತು, ಅದಕ್ಕೆ ಕೋಪಗೊಂಡ ಆರೋಪಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಸಣ್ಣ ವಾಗ್ವಾದ, ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈದು ಆರೋಪಿ ಪರಾರಿ
ಕ್ರೈಂ
ನಯನಾ ರಾಜೀವ್
|

Updated on: Aug 19, 2024 | 8:00 AM

Share

ರಸ್ತೆಯಲ್ಲಿ ನಡೆದ ಸಣ್ಣ ವಾಗ್ವಾದ ತಾರಕಕ್ಕೇರಿ ವ್ಯಕ್ತಿಯೊಬ್ಬ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಕೇಂದ್ರ ದೆಹಲಿಯ ಕರೋಲ್​ ಬಾಗ್ ಪ್ರದೇಶದಲ್ಲಿ ಘಟನೆ ನಡೆದಿದೆ. ಮನೋಜ್ ಶರ್ಮಾ ಸೆಕ್ಯುರಿಟಿ ಗಾರ್ಡ್​ ಆಗಿ ಕೆಲಸ ಮಾಡುತ್ತಿದ್ದು, ಶನಿವಾರ ಮಧ್ಯರಾತ್ರಿ ಊಟಕ್ಕೆಂದು ಸ್ಕೂಟಿಯಲ್ಲಿ ತೆರಳಿದ್ದರು. ಆ ಸಮಯದಲ್ಲಿ ಅವರ ಬೈಕ್ ಒಬ್ಬ ವ್ಯಕ್ತಿಗೆ ತಾಗಿತ್ತು, ಅದಕ್ಕೆ ಕೋಪಗೊಂಡ ಆರೋಪಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

ಪೊಲೀಸ್ ಮೂಲಗಳ ಪ್ರಕಾರ, ಆರೋಪಿಯನ್ನು ಗುರುತಿಸಲಾಗಿದ್ದು, ಆತನನ್ನು ಬಂಧಿಸಲು ಪೊಲೀಸ್ ತಂಡವು ವಿವಿಧ ಪ್ರದೇಶಗಳಲ್ಲಿ ನಿರಂತರವಾಗಿ ದಾಳಿ ನಡೆಸುತ್ತಿದೆ.

ಪೊಲೀಸ್ ನಿಯಂತ್ರಣ ಕೊಠಡಿಗೆ ಶನಿವಾರ ಮಧ್ಯರಾತ್ರಿಯ ಸುಮಾರಿಗೆ ಚೂರಿ ಇರಿತದ ಬಗ್ಗೆ ಮೊದಲು ಮಾಹಿತಿ ಸಿಕ್ಕಿತು. ಮಾಹಿತಿ ಪಡೆದ ತಕ್ಷಣ ಪೊಲೀಸ್ ತಂಡವು ಸ್ಥಳಕ್ಕೆ ಆಗಮಿಸಿ ಗಾಯಾಳು ಮನೋಜ್ ಶರ್ಮಾನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವರು ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೋಲಾರ: ಹೆಂಡತಿ ಮೇಲೆ ಅನುಮಾನ, 18 ಬಾರಿ ಚಾಕುವಿನಿಂದ ಚುಚ್ಚಿ ಕೊಂದ ಪತಿ! ಆಗಿದ್ದೇನು?

ದೆಹಲಿ ಪೊಲೀಸರು ಕೊಲೆ ಸೇರಿದಂತೆ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ, ಕೋಪದ ಕೈಯಲ್ಲಿ ಬುದ್ಧಿಕೊಡಬಾರದು ಎಂಬುದಕ್ಕೆ ಇದೊಂದು ನಿದರ್ಶನ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್