AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸದಲ್ಲಿ ಭದ್ರತಾ ಲೋಪ: ಏಕಾಏಕಿ ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಿದ ವ್ಯಕ್ತಿ ವಿರುದ್ಧ FIR

ಬೆಂಗಳೂರು ನಗರದಲ್ಲಿರುವ ಮಾನಿಕ್ ಷಾ ಪರೇಡ್ ಮೈದಾನದಲ್ಲಿ ನಿನ್ನೆ ಗಣರಾಜ್ಯೋತ್ಸವ ಆಚರಣೆ ವೇಳೆ ಭದ್ರತಾ ಲೋಪ ನಡೆದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರತ್ತ ವ್ಯಕ್ತಿಯೊಬ್ಬ ಏಕಾಏಕಿ ನುಗ್ಗಲು ಯತ್ನಿಸಿದ ಘಟನೆ ನಡೆದಿತ್ತು. ಕೂಡಲೇ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು, ಇದೀಗ ಆತನ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ.

ಗಣರಾಜ್ಯೋತ್ಸದಲ್ಲಿ ಭದ್ರತಾ ಲೋಪ: ಏಕಾಏಕಿ ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಿದ ವ್ಯಕ್ತಿ ವಿರುದ್ಧ FIR
ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಭದ್ರತಾ ಲೋಪ; ಏಕಾಏಕಿ ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಿದ ವ್ಯಕ್ತಿ ವಿರುದ್ಧ FIRImage Credit source: PTI
ರಾಚಪ್ಪಾಜಿ ನಾಯ್ಕ್
| Edited By: Rakesh Nayak Manchi|

Updated on:Jan 27, 2024 | 3:13 PM

Share

ಬೆಂಗಳೂರು, ಜ.27: ನಗರದ ಮಾನಿಕ್ ಷಾ ಪರೇಡ್ ಮೈದಾನದಲ್ಲಿ ನಿನ್ನೆ ಗಣರಾಜ್ಯೋತ್ಸವ ಆಚರಣೆ ವೇಳೆ ಭದ್ರತೆ ಭೇದಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರತ್ತ ನುಗ್ಗಲು ಯತ್ನಿಸಿದ ವ್ಯಕ್ತಿ ವಿರುದ್ಧ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಎಫ್​ಐಆರ್ (FIR) ದಾಖಲಿಸಿದ್ದಾರೆ. ಸಾರ್ವಜನಿಕರಲ್ಲಿ ಆತಂಕ ಉಂಟುಮಾಡುವುದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಮೈಸೂರು ಮೂಲದ ಪರಶುರಾಮ್​​ 1993ರಲ್ಲಿ ಕೆಪಿಎಸ್​​ಸಿ ಪರೀಕ್ಷೆ ಬರೆದಿದ್ದರು. ಆದರೆ, ಪರೀಕ್ಷೆ ಫಲಿತಾಂಶವನ್ನು ಸರ್ಕಾರ ತಡೆಹಿಸಿದಿದೆ. ಇದರಿಂದ ಬೇಸತ್ತು ಮನವಿ ಕೊಡಲು ಪ್ರೆಸ್ ಪಾಸ್ ಹಿಡಿದು ಸಿದ್ದರಾಮಯ್ಯರತ್ತ ನುಗ್ಗಲು ಯತ್ನಿಸಿದ್ದರು. ಮೊದಲು ಸಿದ್ದರಾಮಯ್ಯ ಅವರ ಗಮನ ಸೆಳೆಯಲು ಪತ್ರ ಪ್ರದರ್ಶಿಸಿದ್ದರು. ಸಿದ್ದರಾಮಯ್ಯ ಅವರು ಗಮನಿಸಿದಿದ್ದಾಗ ಮೈದಾನಕ್ಕೆ ನುಗ್ಗಲು ಪ್ರಯತ್ನಿಸಿದ್ದರು. ಕೂಡಲೇ ಎಚ್ಚೆತ್ತ ಪೊಲೀಸರು, ಪರುಶರಾಮನನ್ನು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮರಣೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ಸಿದ್ದರಾಮಯ್ಯ ಖಡ್ಗ ಝಳಪಳಿಸಿದರು!

ಏನಿದು ಪ್ರಕರಣ?

ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ವೇಳೆ ಅಪರಿಚಿತ ವ್ಯಕ್ತಿಯೋರ್ವ ಸಿಎಂ ಸಿದ್ದರಾಮಯ್ಯ ಬಳಿ ನುಗ್ಗಲು ಯತ್ನಿಸಿರುವ ಘಟನೆ ನಿನ್ನೆ ನಡೆದಿತ್ತು. ತಮ್ಮ KPSC ಆರ್ಡರ್ ವಿಳಂಬದ ಬಗ್ಗೆ ಸಿಎಂಗೆ ಮನವಿ ಸಲ್ಲಿಸಲು ಪರಶುರಾಮ್ ಬಂದಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಹೋಗಲು ಪೊಲೀಸರು ಬಿಡದಿದ್ದಾಗ ಪರಶುರಾಮ್ ಗಣರಾಜ್ಯೋತ್ಸವ ಪರೇಡ್ ನಡೆಯುತ್ತಿರುವಾಗಲೇ ನುಗ್ಗಲು ಯತ್ನಿಸಿದ್ದರು. ಗಣರಾಜ್ಯೋತ್ಸವ ಪರೇಡ್ ನಡೆಯುತ್ತಿರುವಾಗ ಮನವಿ ಪತ್ರ ಪ್ರದರ್ಶಿಸಿದ್ದರೆ. ಪರಶುರಾಮ್ ಮನವಿ ಪತ್ರ ಪ್ರದರ್ಶಿಸುತ್ತಿದ್ದ ಹಾಗೇ ಪೊಲೀಸರು ಅವರನ್ನ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:12 pm, Sat, 27 January 24

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ