AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕ್ಯಾಬ್ ಚಾಲಕರ ಸೋಗಿನಲ್ಲಿ ಗಾಂಜಾ ಮಾರಾಟ: ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

ಕ್ಯಾಬ್ ಚಾಲಕರ ಸೋಗಿನಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳಿಗೆ ಗಾಂಜಾ ಮಾರುತ್ತಿದ್ದರು. ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. 

ಬೆಂಗಳೂರಿನಲ್ಲಿ ಕ್ಯಾಬ್ ಚಾಲಕರ ಸೋಗಿನಲ್ಲಿ ಗಾಂಜಾ ಮಾರಾಟ: ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ
ಬಂಧಿತರು, ವಶಕ್ಕೆ ಪಡೆದ ಗಾಂಜಾ
ರಾಚಪ್ಪಾಜಿ ನಾಯ್ಕ್
| Edited By: |

Updated on: Jan 10, 2024 | 9:08 PM

Share

ಬೆಂಗಳೂರು, ಜನವರಿ 10: ಕ್ಯಾಬ್ ಚಾಲಕರ ಸೋಗಿನಲ್ಲಿ ಗಾಂಜಾ (ganja) ಮಾರುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದಲ್ಲಿ ಕ್ಯಾಬ್ ಓಡಿಸುತ್ತಿದ್ದ ಯಾದಗಿರಿ, ವಿಜಯಪುರ ಮೂಲದ ವಿಜಯ್ ಕುಮಾರ್, ವಿಜಯ್​ನನ್ನು ಬಂಧಿಸಿದ್ದು, 25 ಲಕ್ಷ ರೂ. ಮೌಲ್ಯದ 15 ಕೆಜಿ ಗಾಂಜಾ, ತೂಕದ ಮಷೀನ್, 2 ಮೊಬೈಲ್, 1 ಕಾರು ಜಪ್ತಿ ಮಾಡಿದ್ದಾರೆ. ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳಿಗೆ ಗಾಂಜಾ ಮಾರುತ್ತಿದ್ದರು. ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.

ಅಕ್ರಮ ಗಾಂಜಾ ಮಾರಾಟ: ಓರ್ವ ವ್ಯಕ್ತಿಯ ಬಂಧನ

ಗದಗ: ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಗದಗ ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಮಾಡಿ ಬಂಧಿಸಿದ್ದಾರೆ. ಗದಗ ತಾಲೂಕಿನ ತಿಮ್ಮಾಪೂರ ಗ್ರಾಮದ ಹರಣಶಿಕಾರಿ ಕಾಲೋನಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಬಾಲಪ್ಪ ಹರಣಶಿಕಾರಿ ಮನೆ ಮೇಲೆ ಅಬಕಾರಿ ಅಧಿಕಾರಿಗಳ ದಾಳಿ ಮಾಡಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ದೇವಸ್ಥಾನಕ್ಕೆ ಹೋಗುತ್ತೇನೆಂದು ಹೋದವ ಶವವಾಗಿ ಪತ್ತೆ: ಜಾಕೆಟ್ ನೋಡಿ ಗಂಡನ ಶವ ಕಂಡುಹಿಡಿದ ಪತ್ನಿ

ಬಾಲಪ್ಪ ಹರಣಶಿಕಾರಿ ಹಾಗೂ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ಯಲ್ಲಪ್ಪ ತೊಂಡಿಹಾಳ ಎಂಬುವರು ಗಾಂಜಾ ಸಮೇತ ಸಿಕ್ಕಿಬಿದ್ದ ಖದೀಮರನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳಿಂದ 15 ಸಾವಿರ ಮೌಲ್ಯದ 348 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು, ಎನ್ ಡಿಪಿ ಎಸ್ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ.

ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಕಲಬುರಗಿ: ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಪುರಾವ್ ಸಾವಳಂಕೆ, ನಾಮದೇವ್ ಪವಾರ್ ಬಂಧಿತರು. ಬಂಧಿತರಿಂದ 3.68 ಲಕ್ಷ ರೂ. ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದವು‌. ಪ್ರಕರಣದ ತನಿಖೆ ಬೆನ್ನತ್ತಿದ್ದಾಗ ಖದೀಮರು ಸಿಕ್ಕಿಬಿದಿದ್ದಾರೆ. ಬಂಧಿತರಿಬ್ಬರನ್ನ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ