AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕ್ಯಾಬ್ ಚಾಲಕರ ಸೋಗಿನಲ್ಲಿ ಗಾಂಜಾ ಮಾರಾಟ: ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ

ಕ್ಯಾಬ್ ಚಾಲಕರ ಸೋಗಿನಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳಿಗೆ ಗಾಂಜಾ ಮಾರುತ್ತಿದ್ದರು. ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. 

ಬೆಂಗಳೂರಿನಲ್ಲಿ ಕ್ಯಾಬ್ ಚಾಲಕರ ಸೋಗಿನಲ್ಲಿ ಗಾಂಜಾ ಮಾರಾಟ: ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ
ಬಂಧಿತರು, ವಶಕ್ಕೆ ಪಡೆದ ಗಾಂಜಾ
ರಾಚಪ್ಪಾಜಿ ನಾಯ್ಕ್
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 10, 2024 | 9:08 PM

Share

ಬೆಂಗಳೂರು, ಜನವರಿ 10: ಕ್ಯಾಬ್ ಚಾಲಕರ ಸೋಗಿನಲ್ಲಿ ಗಾಂಜಾ (ganja) ಮಾರುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದಲ್ಲಿ ಕ್ಯಾಬ್ ಓಡಿಸುತ್ತಿದ್ದ ಯಾದಗಿರಿ, ವಿಜಯಪುರ ಮೂಲದ ವಿಜಯ್ ಕುಮಾರ್, ವಿಜಯ್​ನನ್ನು ಬಂಧಿಸಿದ್ದು, 25 ಲಕ್ಷ ರೂ. ಮೌಲ್ಯದ 15 ಕೆಜಿ ಗಾಂಜಾ, ತೂಕದ ಮಷೀನ್, 2 ಮೊಬೈಲ್, 1 ಕಾರು ಜಪ್ತಿ ಮಾಡಿದ್ದಾರೆ. ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳಿಗೆ ಗಾಂಜಾ ಮಾರುತ್ತಿದ್ದರು. ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.

ಅಕ್ರಮ ಗಾಂಜಾ ಮಾರಾಟ: ಓರ್ವ ವ್ಯಕ್ತಿಯ ಬಂಧನ

ಗದಗ: ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಗದಗ ಅಬಕಾರಿ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಮಾಡಿ ಬಂಧಿಸಿದ್ದಾರೆ. ಗದಗ ತಾಲೂಕಿನ ತಿಮ್ಮಾಪೂರ ಗ್ರಾಮದ ಹರಣಶಿಕಾರಿ ಕಾಲೋನಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಬಾಲಪ್ಪ ಹರಣಶಿಕಾರಿ ಮನೆ ಮೇಲೆ ಅಬಕಾರಿ ಅಧಿಕಾರಿಗಳ ದಾಳಿ ಮಾಡಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ದೇವಸ್ಥಾನಕ್ಕೆ ಹೋಗುತ್ತೇನೆಂದು ಹೋದವ ಶವವಾಗಿ ಪತ್ತೆ: ಜಾಕೆಟ್ ನೋಡಿ ಗಂಡನ ಶವ ಕಂಡುಹಿಡಿದ ಪತ್ನಿ

ಬಾಲಪ್ಪ ಹರಣಶಿಕಾರಿ ಹಾಗೂ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ಯಲ್ಲಪ್ಪ ತೊಂಡಿಹಾಳ ಎಂಬುವರು ಗಾಂಜಾ ಸಮೇತ ಸಿಕ್ಕಿಬಿದ್ದ ಖದೀಮರನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳಿಂದ 15 ಸಾವಿರ ಮೌಲ್ಯದ 348 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು, ಎನ್ ಡಿಪಿ ಎಸ್ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ.

ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಕಲಬುರಗಿ: ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಪುರಾವ್ ಸಾವಳಂಕೆ, ನಾಮದೇವ್ ಪವಾರ್ ಬಂಧಿತರು. ಬಂಧಿತರಿಂದ 3.68 ಲಕ್ಷ ರೂ. ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದವು‌. ಪ್ರಕರಣದ ತನಿಖೆ ಬೆನ್ನತ್ತಿದ್ದಾಗ ಖದೀಮರು ಸಿಕ್ಕಿಬಿದಿದ್ದಾರೆ. ಬಂಧಿತರಿಬ್ಬರನ್ನ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್