AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: ನಾಲ್ಕು ವಾಹನಗಳು ಜಖಂ, ಅದೃಷ್ಟವಶಾತ್ ತಪ್ಪಿದ ಪ್ರಾಣಾಪಾಯ

ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್, ಗೂಡ್ಸ್ ವಾಹನ, ಲಾರಿ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿರುವಂತಹ ಘಟನೆ ಬೆಂಗಳೂರು ಹೊನ್ನಾವರ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ.

ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: ನಾಲ್ಕು ವಾಹನಗಳು ಜಖಂ, ಅದೃಷ್ಟವಶಾತ್ ತಪ್ಪಿದ ಪ್ರಾಣಾಪಾಯ
ಸರಣಿ ಅಪಘಾತ
TV9 Web
| Edited By: |

Updated on:Feb 10, 2023 | 10:22 PM

Share

ಶಿವಮೊಗ್ಗ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್, ಗೂಡ್ಸ್ ವಾಹನ, ಲಾರಿ ಹಾಗೂ ಕಾರಿನ ನಡುವೆ ಸರಣಿ ಅಪಘಾತ (Serial accident) ಸಂಭವಿಸಿರುವಂತಹ ಘಟನೆ ಬೆಂಗಳೂರು ಹೊನ್ನಾವರ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದಿದೆ. ಸರಣಿ ಅಪಘಾತದಲ್ಲಿ ನಾಲ್ಕು ವಾಹನಗಳು ಜಖಂ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಾಗರ ಕಡೆಯಿಂದ ಬಂದ ಖಾಸಗಿ ಬಸ್, ಚೋರಡಿ ಗ್ರಾಮದಲ್ಲಿ ಪ್ರಯಾಣಿಕರು ಇಳಿಯಲು ನಿಲ್ಲಿಸಲಾಗಿತ್ತು. ಈ ವೇಳೆ ಹಿಂಬದಿಯಿಂದ ಗೂಡ್ಸ್ ಆಟೋ ಬಂದಿದೆ. ಅದರ ಹಿಂದೆ ಬಂದ ಇಟ್ಟಿಗೆ ತುಂಬಿದ್ದ ಲಾರಿಯೊಂದು, ಗೂಡ್ಸ್ ಆಟೋವನ್ನು ಓವರ್ ಟೇಕ್ ಮಾಡಲು ಹೋಗಿ ಹಿಂದಿನಿಂದ ಗೂಡ್ಸ್ ಆಟೋಗೆ ಅಪ್ಪಳಿಸಿದೆ. ನಿಯಂತ್ರಣ ಕಳೆದುಕೊಂಡ ಗೂಡ್ಸ್ ಆಟೋ ಬಸ್​ಗೆ ಡಿಕ್ಕಿ ಹೊಡೆದಿದೆ.

ಬಸ್​ನಲ್ಲಿದ್ದ ಪ್ರಯಾಣಿಕರು ಗಾಬರಿಯಾಗಿ ಕೂಗಿಕೊಂಡಿದ್ದಾರೆ. ಇದೇ ವೇಳೆ ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಾರ್​ಗೆ ಇಟ್ಟಿಗೆ ಲಾರಿ ತಗುಲಿದೆ. ಇದರಿಂದ ಹೆದ್ದಾರಿ ಬ್ಲಾಕ್ ಆಗಿ ಸಂಚಾರ ಅರ್ಧ ಗಂಟೆ ಕಾಲ ಅಸ್ತವ್ಯಸ್ತವಾಗಿತ್ತು. ಕುಂಸಿ ಪೊಲೀಸರು ಸ್ಥಳಕ್ಕೆ ತೆರಳಿ ಸುಗಮ‌ ಸಂಚಾರಕ್ಕೆ ವ್ಯವಸ್ತೆ ಮಾಡಿದ್ದಾರೆ.

ಇದನ್ನೂ ಓದಿ: ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಮತ್ತೆ 8 ಸಹಶಿಕ್ಷಕರನ್ನು ಬಂಧಿಸಿದ ಸಿಐಡಿ ಪೊಲೀಸರು

ಲಾರಿ ಡಿಕ್ಕಿ, ವಿವಾಹ ಆಮಂತ್ರಣ ಕೊಡಲು ತೆರಳಿದ್ದ ಮದುಮಗ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಬೈಕ್​ಗೆ ಲಾರಿ ಡಿಕ್ಕಿ ಹೊಡೆದು ವಿವಾಹ ಆಮಂತ್ರಣ ಕೊಡಲು ತೆರಳಿದ್ದ ಮದುಮಗ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಳ್ಳಕೆರೆ ಹೊರವಲಯದಲ್ಲಿ ನಡೆದಿದೆ. ಮಂಜುನಾಥ್ ಮೃತ ಮದುಮಗ. ಫೆಬ್ರುವರಿ 12ರಂದು ಮಂಜುನಾಥ್​ ಮದುವೆ ನಿಶ್ಚಯವಾಗಿತ್ತು. ನಾಯಕನಹಟ್ಟಿಯಿಂದ ಕಾಟಪ್ಪನಹಟ್ಟಿಗೆ ವಿವಾಹ ಆಮಂತ್ರಣ ಕೊಡಲು ತೆರಳುವಾಗ ದುರ್ಘಟನೆ ಸಂಭವಿಸಿದೆ. ಮದುವೆ ಮನೆಯಲ್ಲಿ ನೀರವಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ರನ ಹುಟ್ಟುಹಬ್ಬಕ್ಕೆ ಕೇಕ್ ತರಲು ಹೋಗಿದ್ದ ತಂದೆ ದುರ್ಮರಣ

ಮಂಡ್ಯ: ಪುತ್ರನ ಹುಟ್ಟುಹಬ್ಬಕ್ಕೆ ಕೇಕ್ ತರಲು ಹೋಗಿದ್ದ ತಂದೆ ದುರ್ಮರಣ ಹೊಂದಿರುವಂತಹ ದಾರುಣ ಘಟನೆ ಮಂಡ್ಯ ನಗರದ ತಾವರಗೆರೆಯ ಚಲುವಯ್ಯ ಪಾರ್ಕ್ ಬಳಿ ನಡೆದಿದೆ. ಬೈಕ್​ನಲ್ಲಿ ತೆರಳುತ್ತಿದ್ದಾಗ ಮರ ಉರುಳಿ ಬಿದ್ದು ತಂದೆ ಸವಾರ ಸಾವನ್ನಪ್ಪಿದ್ದಾರೆ. ಉದಯ್ ಕುಮಾರ್ ಮೃತ ವ್ಯಕ್ತಿ. ಪತ್ನಿ ಮತ್ತು ಮಗನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪುತ್ರ ದೀಕ್ಷಿತ್​ನ 7ನೇ ವರ್ಷದ ಹುಟ್ಟುಹಬ್ಬವಿದ್ದು, ಕೇಕ್ ತರಲು ಹೋಗಿದ್ದಾಗ ಘಟನೆ ನಡೆದಿದೆ. ಮೃತ ಉದಯ್ ಕುಮಾರ್ ಪೌರಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಅರಣ್ಯಾಧಿಕಾರಿಗಳ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಆರೋಪಿಸುತ್ತಿದ್ದು, ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ದಲಿತ ಸಂಘಟನೆ ಒತ್ತಾಯ ಮಾಡಿದೆ. ಪರಿಹಾರ ನೀಡದಿದ್ರೆ ಡಿಸಿ ಕಚೇರಿ ಮುಂದೆ ಪ್ರತಿಭಟಿಸಲು ನಿರ್ಧಾರ ಮಾಡಲಾಗಿದೆ.

ಇದನ್ನೂ ಓದಿ: ವಿಜಯಪುರ: ಅತ್ಯಾಚಾರಕ್ಕೆ ಯತ್ನ ಆರೋಪ, ಅವಳಿ ಸಹೋದರರ ತಲೆ ಬೋಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ

ಬೈಕ್ ಮತ್ತು ಬಸ್ ಮಧ್ಯೆ ಅಪಘಾತ: ಸವಾರ ಸ್ಥಳದಲ್ಲಿಯೇ ಸಾವು

ಧಾರವಾಡ: ಬೈಕ್ ಮತ್ತು ಬಸ್ ಮಧ್ಯೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದಿದೆ. ತಿಪ್ಪನಗೌಡ ಮರಿಗೌಡರ್ (48) ಮೃತ ವ್ಯಕ್ತಿ. ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ನವಲಗುಂದ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:22 pm, Fri, 10 February 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು