
ಬೆಂಗಳೂರು: ಜೂಜಾಡುವ ಚಟಕ್ಕೆ ಬಿದ್ದು, ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿದ್ದ ಆರೋಪಿಯನ್ನು ಗಿರಿನಗರದ ಪೊಲೀಸರು ಬಂಧಿಸಿದ್ದಾರೆ. ಶಂಕರಪ್ಪ ಬಂಧಿತ ಆರೋಪಿ.
ಮನೆಯಲಿದ್ದ ಚಿನ್ನಾಭರಣ ಕಾಣದೆ ಇದ್ದಾಗ ಚಿಂತಿತರಾದ ಮನೆಯ ಯಜಮಾನ, ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ದೂರಿನನ್ವಯ ತನಿಖೆ ನಡೆಸಿದ ಪೊಲೀಸರು, ಆರೋಪಿ ಶಂಕರಪ್ಪನನ್ನು ಬಂಧಿಸಿದ್ದಾರೆ. ಶಂಕರಪ್ಪ ಹೊಸದುರ್ಗದಲ್ಲಿ ಅಡವಿಟ್ಟಿದ್ದ ಚಿನ್ನಾಭರಣಗಳನ್ನ ಹಣದಲ್ಲಿ ಜೂಜಾಡಿ ಸೋತಿದ್ದಾನೆ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.