AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲುಧಿಯಾನದ ಗುಡಿಸಲಲ್ಲಿ ಬೆಂಕಿ ಅವಘಡ; ಒಂದೇ ಕುಟುಂಬದ 7 ಜನ ಸಜೀವ ದಹನ

Ludhiana Fire Accident: ಗುಡಿಸಲಿಗೆ ಬೆಂಕಿ ತಗುಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಸುದ್ದಿಯೊಂದು ಪಂಜಾಬ್‌ನಲ್ಲಿ ನಡೆದಿದೆ. ಮೃತರು ಬಿಹಾರದ ಸಮಸ್ತಿಪುರ ನಿವಾಸಿಗಳು ಎನ್ನಲಾಗಿದೆ.

ಲುಧಿಯಾನದ ಗುಡಿಸಲಲ್ಲಿ ಬೆಂಕಿ ಅವಘಡ; ಒಂದೇ ಕುಟುಂಬದ 7 ಜನ ಸಜೀವ ದಹನ
ಬೆಂಕಿ ಅವಘಡ
TV9 Web
| Edited By: |

Updated on: Apr 20, 2022 | 1:55 PM

Share

ಲುಧಿಯಾನ: ಪಂಜಾಬ್​ನ ಲುಧಿಯಾನದಲ್ಲಿ (Ludhiana Fire Accident) ಇಂದು ಬೆಳಗ್ಗೆ ಇಲ್ಲಿನ ಗುಡಿಸಲಿನಲ್ಲಿ ಸಂಭವಿಸಿದ ಬೆಂಕಿ ಅಪಘಾತದಿಂದ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ವಲಸೆ ಕಾರ್ಮಿಕರು ಮತ್ತು ಲುಧಿಯಾನದ ಟಿಬ್ಬಾ ರಸ್ತೆಯಲ್ಲಿರುವ ಪುರಸಭೆಯ ಕಸದ ಡಂಪ್ ಯಾರ್ಡ್ ಬಳಿಯ ತಮ್ಮ ಗುಡಿಸಲಿನಲ್ಲಿ ಮಲಗಿದ್ದರು ಎಂದು ಲುಧಿಯಾನದ ಸಹಾಯಕ ಪೊಲೀಸ್ ಕಮಿಷನರ್ (ಪೂರ್ವ) ಸುರೀಂದರ್ ಸಿಂಗ್ ಹೇಳಿದ್ದಾರೆ. ಗಂಡ, ಹೆಂಡತಿ ಮತ್ತು ಅವರ ಐದು ಮಕ್ಕಳು ಬೆಂಕಿ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದ್ದಾರೆ. ಗುಡಿಸಲಿಗೆ ಬೆಂಕಿ ತಗುಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಸುದ್ದಿಯೊಂದು ಪಂಜಾಬ್‌ನಲ್ಲಿ ನಡೆದಿದೆ. ಮೃತರು ಬಿಹಾರದ ಸಮಸ್ತಿಪುರ ನಿವಾಸಿಗಳು ಎನ್ನಲಾಗಿದೆ. ಮಾಹಿತಿ ಪ್ರಕಾರ ವಲಸೆ ಕಾರ್ಮಿಕನ ಗುಡಿಸಲಿಗೆ ಬೆಂಕಿ ತಗುಲಿ ಮನೆಯ ದಂಪತಿ ಹಾಗೂ ಮಕ್ಕಳು ಸಾವನ್ನಪ್ಪಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಘಟನೆಯು ಟಿಬ್ಬಾ ರಸ್ತೆಯಲ್ಲಿರುವ ಮಕ್ಕರ್ ಕಾಲೋನಿ ಪ್ರದೇಶದಲ್ಲಿ ನಡೆದಿದೆ. ಬೆಂಕಿ ಹೊತ್ತಿಕೊಂಡ ಗುಡಿಸಲು ಕಸದ ರಾಶಿಯಿಂದ ಸುತ್ತುವರಿದಿತ್ತು ಎನ್ನಲಾಗಿದೆ. ಇದರಿಂದ ಮಂಗಳವಾರ ತಡರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಸ್ವಲ್ಪ ಸಮಯದ ನಂತರ ಇಡೀ ಗುಡಿಸಲು ಬೆಂಕಿಯಲ್ಲಿ ಸಿಲುಕಿಕೊಂಡಿತು ಮತ್ತು ಒಳಗೆ ಮಲಗಿದ್ದ ಇಡೀ ಕುಟುಂಬದವರು ಸುಟ್ಟು ಕರಕಲಾಗಿದ್ದಾರೆ.

ಈ ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಸ್ವಲ್ಪ ಹೊತ್ತಿನಲ್ಲೇ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದರು. ಇದಕ್ಕೂ ಮುನ್ನ ಬೆಂಕಿಯ ರಭಸಕ್ಕೆ ಒಳಗಡೆ ಮಲಗಿದ್ದವರು ಸುಟ್ಟು ಕರಕಲಾಗಿದ್ದು, ಹೊರಗೆ ಬರಲೂ ಸಾಧ್ಯವಾಗಲಿಲ್ಲ. ಮೃತರೆಲ್ಲರೂ ಬಿಹಾರದ ಸಮಸ್ತಿಪುರ ಜಿಲ್ಲೆಯ ನಿವಾಸಿಗಳು ಎಂದು ಹೇಳಲಾಗಿದೆ. ಜೀವನೋಪಾಯ ಅರಸಿ ಎಲ್ಲರೂ ಪಂಜಾಬಿಗೆ ಹೋಗಿದ್ದರು. ಮೃತರಲ್ಲಿ ಕುಟುಂಬದ ಮುಖ್ಯಸ್ಥರು ಮತ್ತು ಮಕ್ಕಳು ಸೇರಿದ್ದಾರೆ.

ಈ ಘಟನೆಯಲ್ಲಿ ಪತಿ, ಪತ್ನಿ ಹಾಗೂ ಐವರು ಮಕ್ಕಳು ಸಾವನ್ನಪ್ಪಿದ್ದಾರೆ. ಪತಿ, ಪತ್ನಿ ಹಾಗೂ ಐವರು ಮಕ್ಕಳು ಬೆಂಕಿ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಮೃತ ದೇಹಗಳನ್ನು ವಶಪಡಿಸಿಕೊಂಡ ನಂತರ ಮೃತರನ್ನು ಸುರೇಶ್ ಸಾಹ್ನಿ (55 ವರ್ಷ), ಅವರ ಪತ್ನಿ ಅರುಣಾ ದೇವಿ (52 ವರ್ಷ), ನಾಲ್ವರು ಹೆಣ್ಣುಮಕ್ಕಳು ರಾಖಿ (15 ವರ್ಷ), ಮನಿಶಾ (10 ವರ್ಷ), ಗೀತಾ (8 ವರ್ಷ), ಚಂದಾ (5 ವರ್ಷ), ಸನ್ನಿ (2 ವರ್ಷ) ಎಂದು ಗುರುತಿಸಲಾಗಿದೆ.

ತಿಬ್ಬಾ ರಸ್ತೆಯಲ್ಲಿರುವ ಮಕ್ಕರ್ ಕಾಲೋನಿ ಪ್ರದೇಶದಲ್ಲಿನ ಕಸದ ರಾಶಿಗೆ ಹೊಂದಿಕೊಂಡಿರುವ ಕೊಳೆಗೇರಿಯಲ್ಲಿ ಮಂಗಳವಾರ ತಡರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಏಳು ಮಂದಿ ಸಜೀವ ದಹನವಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಅಗ್ನಿಶಾಮಕ ದಳದ ವಾಹನ ಕೆಲವೇ ಸಮಯದಲ್ಲಿ ಬೆಂಕಿಯನ್ನು ಹತೋಟಿಗೆ ತಂದಿದೆ. ಇದೇ ವೇಳೆ ಬೆಂಕಿಗೆ ಆಹುತಿಯಾಗಿ ಕೊಳೆಗೇರಿಯಲ್ಲಿ ಮಲಗಿದ್ದ ಒಂದೇ ಕುಟುಂಬದ 7 ಮಂದಿ ಸಾವಿಗೀಡಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಮೃತರೆಲ್ಲರೂ ಬಿಹಾರದ ಸಮಸ್ತಿಪುರ ಜಿಲ್ಲೆಯ ನಿವಾಸಿಗಳು. ಮೃತರಲ್ಲಿ ದಂಪತಿ ಸೇರಿದಂತೆ 5 ಮಕ್ಕಳು ಸೇರಿದ್ದಾರೆ. ಸದ್ಯಕ್ಕೆ ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಇದರ ವಿಚಾರಣೆ ನಡೆಸುತ್ತಿದ್ದಾರೆ. ಫೋರೆನ್ಸಿಕ್ ತಂಡ ಕೂಡ ಸ್ಥಳಕ್ಕೆ ಆಗಮಿಸಿದೆ. ಪಂಜಾಬ್ ಸರ್ಕಾರ ಮತ್ತು ಜಿಲ್ಲಾಡಳಿತದಿಂದ ಮೃತರ ಸಂಬಂಧಿಕರಿಗೆ ಇದುವರೆಗೆ ಯಾವುದೇ ಪರಿಹಾರದ ಮೊತ್ತವನ್ನು ನೀಡಿಲ್ಲ.

ಇದನ್ನೂ ಓದಿ: ಹರ್ಯಾಣ ಕೆಮಿಕಲ್ ಘಟಕದಲ್ಲಿ ಭಾರೀ ಬೆಂಕಿ; ದೆಹಲಿಯಿಂದ ದೌಡಾಯಿಸಿದ ಅಗ್ನಿಶಾಮಕ ದಳ

ಹರ್ಯಾಣ ಕೆಮಿಕಲ್ ಘಟಕದಲ್ಲಿ ಭಾರೀ ಬೆಂಕಿ; ದೆಹಲಿಯಿಂದ ದೌಡಾಯಿಸಿದ ಅಗ್ನಿಶಾಮಕ ದಳ

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ