ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಪಿಹೆಚ್​​ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ

ರಾಜ್ಯದ ಪ್ರತಿಷ್ಠಿತ ಏಕೈಕ ಮಹಿಳಾ ವಿಶ್ವವಿದ್ಯಾಲಯವಾಗಿರುವ ವಿಜಯಪುರದಲ್ಲಿರುವ ಅಕ್ಕಮಹಾದೇವಿ ವಿಶ್ವವಿದ್ಯಾಲಯದಲ್ಲಿ ಪಿಹೆಚ್​ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ತನ್ನ ಮೇಲೆ ಆದ ದೌರ್ಜನ್ಯದ ಬಗ್ಗೆ ವಿದ್ಯಾರ್ಥಿನಿ ವಿಶ್ವವಿದ್ಯಾಲಯದ ಕುಲಪತಿಗಳಿಗೆ ದೂರು ನೀಡಿದ್ದಾರೆ.

ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಪಿಹೆಚ್​​ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ
ಸಾಂದರ್ಭಿಕ ಚಿತ್ರ
Edited By: ವಿವೇಕ ಬಿರಾದಾರ

Updated on: Mar 07, 2024 | 2:06 PM

ವಿಜಯಪುರ, ಮಾರ್ಚ್​ 07: ವಿಜಯಪುರದ (Vijayapura) ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ (Akkamahadevi Women’s University) ಪ್ರೊಫೆಸರ್ ಪಿಹೆಚ್​ಡಿ (Phd) ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಮ್ಯಾನೇಜ್ಮೆಂಟ್ ವಿಭಾಗದ ಪ್ರೋ. ಮಲ್ಲಿಕಾರ್ಜುನ ಎನ್​ಎಲ್ ಅವರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತುಳಸೀಮಾಲಾ ಅವರಿಗೆ ಫೆಬ್ರವರಿ 27 ರಂದು ವಿದ್ಯಾರ್ಥಿನಿ ದೂರು ನೀಡಿದ್ದಾರೆ. ಇನ್ನು ವಿದ್ಯಾರ್ಥಿನಿ ನೀಡಿರುವ ದೂರನ್ನು ಕುಲಪತಿ ಪ್ರೋ. ತುಳಸೀಮಾಲಾ ಅವರು ಆಂತರಿಕ ದೂರು ಸಮಿತಿಗೆ ರವಾನಿಸಲಿದ್ದಾರೆ. ಬಳಿಕ ಆಂತರಿಕ ದೂರು ಸಮಿತಿ ವಿಚಾರಣೆ ನಡೆಸಲಿದೆ.

ಪ್ರೋ. ಮಲ್ಲಿಕಾರ್ಜುನ ಎನ್​ಎಲ್ 2017 ರಿಂದ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವಿದ್ಯಾರ್ಥಿನಿಗೆ‌ ನ್ಯಾಯ ಒದಗಿಸಬೇಕೆಂದು ವಿವಿಧ ಸಂಘಟನೆಗಳು ಒತ್ತಾಯಿಸಿವೆ.

ಇದನ್ನೂ ಓದಿ: ಸಹ ಶಿಕ್ಷಕನಿಂದ ಶಿಕ್ಷಕಿಯರಿಗೆ ಲೈಂಗಿಕ ಕಿರುಕುಳ ಆರೋಪ; ಶಿಕ್ಷಕನನ್ನು ಟರ್ಮಿನೇಟ್ ಮಾಡಿದ ಶಾಲಾ ಆಡಳಿತ ಮಂಡಳಿ

ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ, ಅತ್ಯಾಚಾರ ಶಂಕೆ

ಕೋಲಾರ: ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದ್ದು ಅತ್ಯಾಚಾರ ಶಂಕೆ ವ್ಯಕ್ತವಾಗಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ನಾಗಶೆಟ್ಟಿಹಳ್ಳಿಯಲ್ಲಿ ಘಟನೆ ನಡೆದಿತ್ತು. ಕೆಜಿಎಫ್ ತಾಲೂಕಿನ ಐಪಲ್ಲಿ ಗ್ರಾಮದ 28 ವರ್ಷದ ಮಹಿಳೆ ಕೊಲೆ ಮಾಡಲಾಗಿತ್ತು. ಸ್ಥಳಕ್ಕೆ ಕೆಜಿಎಫ್ ಎಸ್​ಪಿ ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮರಣೋತ್ತರ ಪರೀಕ್ಷೆಗಾಗಿ ಕೆಜಿಎಫ್ ಆಸ್ಪತ್ರೆಗೆ ಶವ ಸ್ಥಳಾಂತರ ಮಾಡಲಾಗಿತ್ತು. ಆರೋಪಿ ಪತ್ತೆಗಾಗಿ ತಂಡ ರಚನೆ ಮಾಡಲಾಗಿತ್ತು. ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಶಿಕ್ಷಕ ಸಾವು

ವಿಜಯನಗರ: ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾ ಶಿಕ್ಷಕ ಮೃತಪಟ್ಟಿರುವ ಘಟನೆ ಹೂವಿನ ಹಡಗಲಿ ತಾಲೂಕಿನ ಹೊಳಲು ಗ್ರಾಮದ ಬಳಿ ನಡೆದಿದೆ.  ಮಕ್ಕರಬ್ಬಿ ಸರ್ಕಾರಿ ಶಾಲೆಯ ಶಿಕ್ಷಕ ಮಹಾಂತೇಶ್‌ಗೌಡ (37) ಮೃತ ದುರ್ದೈವಿ. ಮಾಹಾಂತೇಶ್ ಗೌಡ ಬೈಕ್‌ನಲ್ಲಿ ಶಾಲೆಗೆ ಹೊರಟಿದ್ದರು. ಈ ವೇಳೆ  ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿರೇಹಡಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:00 pm, Thu, 7 March 24

ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us