AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯೆ ಸೇವನೆಗೆಂದು ತೆರಳಿದ್ದ ವ್ಯಕ್ತಿ ಕೊಲೆ ಪ್ರಕರಣ: ಪೊಲೀಸರಿಗೆ ತಲೆನೋವಾದ ಹಂತಕನ ಹೆಜ್ಜೆ

ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ಶರತ್ ಎಂಬಾತ ಬಿಟಿಎಂನಿಂದ ತಲಘಟ್ಟಪುರಕ್ಕೆ ಮಧ್ಯೆ ಸೇವನೆಗೆಂದು ತೆರಳಿ ಕೊಲೆಯಾಗಿದ್ದ. ಮರು ದಿನ ಬೆಳಿಗ್ಗೆ ಮೃತದೇಹದ ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು. ಬಳಿಕ ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಇದುವರೆಗೂ ಹಂತಕರ ಸುಳಿವು ಸಿಕ್ಕಿಲ್ಲ.

ಮಧ್ಯೆ ಸೇವನೆಗೆಂದು ತೆರಳಿದ್ದ ವ್ಯಕ್ತಿ ಕೊಲೆ ಪ್ರಕರಣ: ಪೊಲೀಸರಿಗೆ ತಲೆನೋವಾದ ಹಂತಕನ ಹೆಜ್ಜೆ
ಮೃತ ಶರತ್​
Follow us
Jagadish PB
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 12, 2023 | 5:32 PM

ಬೆಂಗಳೂರು, ಡಿ.12: ತಲಘಟ್ಟಪುರದ ಕಲ್ಲು ಕ್ವಾರೆಯಲ್ಲಿ ಡಿ.05 ರಂದು ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕುಡಿಯಲು ಬಂದು ಕೊಲೆಯಾದ ಶರತ್(30) ಎಂಬಾತನ ಸಾವು, ಇನ್ನೂ ನಿಗೂಢವಾಗಿಯೇ ಉಳಿದಿದೆ. ತಲಘಟ್ಟಪುರ ಪೊಲೀಸರು(Talaghattapura Police) ಹಲವು ಆಯಾಮದಲ್ಲಿ ತನಿಖೆ ನಡೆಸುತ್ತಿದ್ದು, ಸಿಸಿಟಿವಿ, ಟೆಕ್ನಿಕಲ್‌ ಹಾಗೂ ಹಲವು ಹ್ಯಾಂಗಲ್​ನಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ. ಆದರೆ, ಇನ್ನೂ ಕೂಡ ಯಾವುದೇ ಆಧಾರದಲ್ಲೂ ಹಂತಕನ ಹೆಜ್ಜೆ ಸಿಗುತ್ತಿಲ್ಲ. ಮೇಲ್ನೋಟಕ್ಕೆ ಹಣಕ್ಕಾಗಿ ಅಥವಾ ದ್ವೇಷಕ್ಕಾಗಿ ಈ ಹತ್ಯೆ ನಡೆದಂತಿಲ್ಲ. ಇದರಿಂದ ಕೊಲೆ ಯಾಕೆ ನಡೆದಿದೆ ಎಂಬುದೇ ಪೊಲೀಸರಿಗೆ ಪ್ರಶ್ನೆಯಾಗಿದೆ.

ಮಧ್ಯೆ ಸೇವನೆಗೆಂದು ತೆರಳಿದ್ದ ಶರತ್​ ಕೊಲೆಯಾಗಿದ್ದ

ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ಶರತ್, ಬಿಟಿಎಂನಿಂದ ತಲಘಟ್ಟಪುರಕ್ಕೆ ಮಧ್ಯೆ ಸೇವನೆಗೆಂದು ತೆರಳಿ ಕೊಲೆಯಾಗಿದ್ದ. ಮರು ದಿನ ಬೆಳಿಗ್ಗೆ ಮೃತದೇಹ ಕಂಡು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು. ಯಾವುದೇ ದ್ವೇಷ ಹೊಂದಿರದ ಶರತ್ ಕೊಲೆಯಾದ ಬಳಿಕವೂ ಆತನ ಮೊಬೈಲ್, ಹಣ ಹಾಗೂ ವಸ್ತುಗಳು ಅಲ್ಲೇ ಇದ್ದವು. ಸದ್ಯ ಸಿಸಿಟಿವಿ ಪರಿಶೀಲನೆ ವೇಳೆ ಸಹ ಒಂಟಿಯಾಗಿ ಸಂಚರಿಸುತಿದ್ದದ್ದು ಪತ್ತೆಯಾಗಿದೆ. ಆತನ ಕೊಲೆ ಮಾಡಿದವರು ಯಾರು ಎಂಬ ಬಗ್ಗೆ ತನಿಖೆ ನಡೆದಿದೆ.

ಇದನ್ನೂ ಓದಿ:ಬೆಂಗಳೂರು: ಬಾರ್​ನಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ!

ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಂಗಳೂರು: ನಗರದ ದಿನ್ನೂರು ಮುಖ್ಯರಸ್ತೆಯ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ದುಷ್ಕರ್ಮಿಗಳು ಹಲ್ಲೆ ಮಾಡಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಆರ್.ಟಿ.ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂದಾಜು 55 ರಿಂದ 60 ರ ಅಸುಪಾಸಿನ ವರ್ಷದ ವ್ಯಕ್ತಿಯ ಶವ ಇದಾಗಿದೆ. ಇನ್ನು ಇತ ಸ್ಥಳೀಯ ಅಂಗಡಿಗಳಲ್ಲಿ ಕೆಲಸ ಮಾಡಿಕೊಂಡಿದ್ದ. ರಾತ್ರಿ ಹೊತ್ತು ಬಂದು ಅಪಾರ್ಟ್ಮೆಂಟ್ ನ ಕೆಳ ಮಹಡಿಯಲ್ಲಿ ಮಲಗುತಿದ್ದ.ಇಂದು ಕೆಲಸಕ್ಕೆ ಬಾರದ ಹಿನ್ನಲೆ ಬಂದು ನೋಡಿದಾಗ ಮೃತನಾಗಿರುವುದು ಬೆಳಕಿಗೆ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್