AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಬೇರೊಬ್ಬನೊಂದಿಗೆ ಸಂಪರ್ಕದಲ್ಲಿದ್ದಾಳೆ ಎಂದು ಪ್ರೀತಿಸಿದ ಯುವತಿಗೆ ಚಾಕು ಇರಿದ ಪ್ರಿಯತಮ

ಹಾವೇರಿ (Haveri) ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ಪ್ರಿಯಕರನೊಬ್ಬ ಮೆಡಿಕಲ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ಪ್ರೇಯಸಿಗೆ ಚಾಕು ಇರಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಾವೇರಿ: ಬೇರೊಬ್ಬನೊಂದಿಗೆ ಸಂಪರ್ಕದಲ್ಲಿದ್ದಾಳೆ ಎಂದು ಪ್ರೀತಿಸಿದ ಯುವತಿಗೆ ಚಾಕು ಇರಿದ ಪ್ರಿಯತಮ
ಪ್ರಾತಿನಿಧಿಕ ಚಿತ್ರ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jan 26, 2024 | 10:35 PM

Share

ಹಾವೇರಿ, ಜ.26: ಪ್ರಿಯಕರನೊಬ್ಬ ಮೆಡಿಕಲ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ಪ್ರೇಯಸಿಗೆ ಚಾಕು ಇರಿದ ಘಟನೆ ಹಾವೇರಿ (Haveri) ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಲಕ್ಷ್ಮೀ(20) ಚಾಕು ಇರಿತಕ್ಕೋಳಗಾದ ಯುವತಿ. ಇನ್ನು ಪ್ರಿಯಕರ ಮಹೇಶ್ ಮೈಸೂರು ಹಾಗೂ ಲಕ್ಷ್ಮೀ 2 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ನಡುವೆ ಬೇರೆ ಯುವಕನ ಜೊತೆ ಆಕೆ ಸಂಪರ್ಕದಲ್ಲಿದ್ದಾಳೆಂಬ ಅನುಮಾನದಿಂದ ಚಾಕು ಇರಿದಿದ್ದಾನೆ.

ಇದರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಲಕ್ಷ್ಮೀ ಕೈಗೆ ಹಾಗೂ ಎದೆ ಮಧ್ಯಭಾಗಕ್ಕೆ ಸಣ್ಣಪುಟ್ಟ ಗಾಯವಾಗಿದೆ. ಈ ವೇಳೆ ​ ಕೈಗೂ ಮಹೇಶ್​ಗೂ ಗಾಯವಾಗಿದೆ. ಕೂಡಲೇ ಲಕ್ಷ್ಮೀಯನ್ನು ಶಿಗ್ಗಾಂವಿ ತಾಲೂಕು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಇದೀಗ ಡಿಶ್ಚಾರ್ಜ್ ಮಾಡಲಾಗಿದೆ. ಲಕ್ಷ್ಮೀಗೆ ಚಾಕು ಇರಿದ ಮಹೇಶ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಪ್ರೀತಿಗಾಗಿ ಬಾಗೇಪಲ್ಲಿ ಯುವತಿಯ ಬೆನ್ನು ಬಿದ್ದಿದ್ದ, ನಿರಾಕರಿಸಿದಾಗ ಚಾಕುವಿನಿಂದ ಕುತ್ತಿಗೆಗೆ ಇರಿದ, ರಕ್ಷಣೆಗೆ ಮುಂದಾದವರ ಮೇಲೆಯೂ ಹುಚ್ಚಾಟ ಮೆರೆದ

ಸರ್ಕಾರಿ ಜೀಪ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಗದಗ: ನಗರದ ಹೊರವಲಯ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಬೈಕ್​ಗೆ ಸರ್ಕಾರಿ ಜೀಪ್ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ  ಸಾವನ್ನಪ್ಪಿದ ಘಟನೆ ನಡೆದಿದೆ. ಕಣಗಿನಾಳದಿಂದ ಕಳಸಾಪುರಕ್ಕೆ ತೆರಳ್ತಿದ್ದ ಶಿವಪ್ಪ ಮಾದರ(55) ಮೃತ ರ್ದುದೈವಿ. ಧಾರವಾಡ ಕೆಸಿಸಿ ಬ್ಯಾಂಕ್‌ಗೆ ಸೇರಿದ ಜೀಪ್ ಇದಾಗಿದ್ದು, ಜೀಪ್‌ ಡಿಕ್ಕಿ ರಭಸಕ್ಕೆ ಸವಾರ ನೂರು ಅಡಿ ದೂರಬಿದ್ದಿದ್ದಾನೆ. ಅಪಘಾತ ಬಳಿಕ ಚಾಲಕ ಸ್ಥಳದಲ್ಲೇ ಜೀಪ್ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಈ ಘಟನೆ ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:30 pm, Fri, 26 January 24

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್