Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಚಾರ್ಜ್ ವಿಚಾರದಲ್ಲಿ ಜಗಳ; ದೊಣ್ಣೆ ಏಟಿಗೆ ವ್ಯಕ್ತಿ ಸಾವು

ಮೊಬೈಲ್ ಚಾರ್ಜ್ ಮಾಡಿಕೊಳ್ಳಲು ಮನೆಗೆ ಬಂದ ವ್ಯಕ್ತಿಯು ಕಿರಿಕ್ ಮಾಡಿಕೊಂಡು ಮನೆಯ ಒಡೆಯನನ್ನೇ ಕೊಲೆ ಮಾಡಿದ ಘಟನೆಯೊಂದು ಶಿವಮೊಗ್ಗದಲ್ಲಿ ನಡೆದಿದೆ.

ಮೊಬೈಲ್ ಚಾರ್ಜ್ ವಿಚಾರದಲ್ಲಿ ಜಗಳ; ದೊಣ್ಣೆ ಏಟಿಗೆ ವ್ಯಕ್ತಿ ಸಾವು
ಮೊಬೈಲ್ ಚಾರ್ಜ್ ವಿಚಾರದಲ್ಲಿ ಗಲಾಟೆ; ದೊಣ್ಣೆ ಏಟಿಗೆ ವ್ಯಕ್ತಿ ಸಾವು
Follow us
TV9 Web
| Updated By: Rakesh Nayak Manchi

Updated on: Nov 12, 2022 | 1:12 PM

ಶಿವಮೊಗ್ಗ: ಮನೆಗೆ ಬಂದ ವ್ಯಕ್ತಿಯೊಬ್ಬ ಮೊಬೈಲ್ ಚಾರ್ಜ್ ಮಾಡಿಕೊಳ್ಳುವ ವಿಚಾರವಾಗಿ ಮನೆಯ ಯಜಮಾನನೊಂದಿಗೆ ಕಿರಿಕ್ ಮಾಡಿಕೊಂಡಿದ್ದಲ್ಲದೆ ಆತನ ಜೀವವನ್ನೇ ತೆಗೆದುಬಿಟ್ಟ ಘಟನೆಯೊಂದು ಸಾಗರ ತಾಲೂಕಿನ ಮುರಳ್ಳಿ ಮರಾಠಿ ಗ್ರಾಮದಲ್ಲಿ ನಡೆದಿದೆ. ನವೆಂಬರ್ 7ರಂದು ನಡೆದ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತಿಮ್ಮಪ್ಪ (52) ಕೊಲೆಯಾದ ವ್ಯಕ್ತಿಯಾಗಿದ್ದು, ಕೃತ್ಯದ ನಂತರ ಪರಾರಿಯಾಗಿದ್ದ ಆರೋಪಿ ಸಿದ್ದಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ಸಿದ್ದಪ್ಪ ತನ್ನ ಮೋಬೈಲ್ ಚಾರ್ಜ್ ಮಾಡಿಕೊಳ್ಳಲು ತಿಮ್ಮಪ್ಪನ ಮನೆಗೆ ಬಂದಿದ್ದನು. ಮೊಬೈಲ್ ಜಾರ್ಜ್ ಮಾಡಿಕೊಳ್ಳುವ ವಿಚಾರದಲ್ಲಿ ಇಬ್ಬರ ನಡುವೆ ಹಳ್ಳಿಯ ಕಿರಿಕ್ ಶುರುವಾಗಿತ್ತು. ರಾತ್ರಿ ಸಮಯ ಆಗಿದ್ದರಿಂದ ಎಣ್ಣೆ ಹೊಡೆದಿದ್ದ ಸಿದ್ದಪ್ಪ ತಿಮ್ಮಪ್ಪಗೆ ಅವಾಜ್ ಹಾಕುತ್ತಾನೆ. ಈ ವಿಚಾರದಲ್ಲಿ ಸಿದ್ದಪ್ಪನು ತಿಮ್ಮಪ್ಪ ಮತ್ತು ಆತನ ಹೆಂಡತಿ ಲಕ್ಷ್ಮೀಯೊಂದಿಗೆ ಗಲಾಟೆ ಮಾಡುತ್ತಾನೆ. ಕುಡಿದ ಅಮಲಿನಲ್ಲಿದ್ದ ಸಿದ್ದಪ್ಪನು ಅಲ್ಲೆ ಇದ್ದ ದೊಣ್ಣೆಯನ್ನು ತೆಗೆದುಕೊಂಡು ಮನೆಗೆ ಅಳವಡಿಸಿದ ಡಿಶ್ ಬುಟ್ಟಿಗೆ ದೊಣ್ಣೆಯಿಂದ ಹೊಡೆಯುತ್ತಾನೆ. ಇದನ್ನು ನೋಡಿ ತಮ್ಮ ಮನೆ ವಸ್ತು ಯಾಕೆ ಹಾಳು ಮಾಡುತ್ತೀಯಾ ಎಂದು ಸಿದ್ದಪ್ಪನಿಗೆ ಪ್ರಶ್ನೆ ಮಾಡುತ್ತಾನೆ. ಇದಕ್ಕೆ ಕೋಪಗೊಂಡ ಸಿದ್ದಪ್ಪನು ಕೈಯಲ್ಲಿದ್ದ ದೊಣ್ಣೆಯಿಂದ ತಿಮ್ಮಪ್ಪನ ಎಡಗಣ್ಣಿನ ಹುಬ್ಬಿಗೆ ಹಲ್ಲೆ ಮಾಡುತ್ತಾನೆ.

ಹಲ್ಲೆಯಿಂದಾಗಿ ತಲೆಗೆ ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಣ್ಣು ಮತ್ತು ತಲೆ ಭಾಗಕ್ಕೆ ಹೆಚ್ಚು ಪೆಟ್ಟು ಬಿದ್ದ ಹಿನ್ನಲೆ ತಿಮ್ಮಪ್ಪನು ಚಿಕಿತ್ಸೆಗೆ ಫಲಕಾರಿಯಾಗದೆ ನ.9 ರಂದು ಉಡುಪಿ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ಧಾನೆ. ಮೃತನ ಹೆಂಡತಿ ನೀಡಿದ ದೂರಿನ ಮೇರೆಗೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲು ಆಗಿತ್ತು.

ಪ್ರಕರಣ ದಾಖಲಿಸಿಕೊಂಡಿದ್ದ ಕಾರ್ಗಲ್ ಪೊಲೀಸರು ಆರೋಪಿಯ ಬಂಧನಕ್ಕೆ ತನಿಖೆ ಆರಂಭಿಸಿದ್ದರು. ಕೃತ್ಯದ ನಂತರ ತಲೆಮರೆಸಿಕೊಂಡಿದ್ದ ಸಿದ್ದಪ್ಪನನ್ನು ಸಾಗರ ಗ್ರಾಮಾಂತರ ಸಿಪಿಐ ಕೃಷ್ಣಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿ ಬಂಧಿಸಲಾಗಿದೆ. ವಿಚಾರಣೆ ವೇಳೆ ಗಲಾಟೆ ಮತ್ತು ಹಲ್ಲೆ ಮಾಡಿರುವುದಾಗಿ ಆರೋಪಿಯು ತಪ್ಪು ಒಪ್ಪಿಕೊಂಡಿದ್ದಾನೆ. ತಿಮ್ಮಪ್ಪನು ಮೊಬೈಲ್ ಜಾರ್ಜ್ ಮಾಡಿಕೊಳ್ಳುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದನು. ಈ ಹಿನ್ನಲೆಯಲ್ಲಿ ಸಿಟ್ಟು ಬಂದು ತಿಮ್ಮಪ್ಪನ ಮೇಲೆ ಹಲ್ಲೆ ಮಾಡಿದ್ದೆ ಎಂದು ಸಿದ್ದಪ್ಪ ಪೊಲೀಸರ ತನಿಖೆ ವೇಳೆ ಹೇಳಿದ್ದಾನೆ.

ವಿಚಾರಣೆ ಬಳಿಕ ಕಾರ್ಗಲ್ ಪೋಲಿಸರು ಆರೋಪಿಯನ್ನು ಸಾಗರ ಕೋರ್ಟ್ ಹಾಜರುಪಡಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಹೀಗೆ ಒಂದೇ ಗ್ರಾಮದಲ್ಲಿದ್ದವರ ನಡುವೆ ಯಾವುದೇ ದ್ವೇಷ, ವೈಷಮ್ಯ ಇಲ್ಲದಿದ್ದರೂ ಕೇಲವ ಸಣ್ಣ ವಿಚಾರಕ್ಕೆ ಗಲಾಟೆ ಮಾಡಿ ವ್ಯಕ್ತಿಯ ಜೀವವನ್ನೇ ಸಿದ್ದಪ್ಪನು ತೆಗೆದುಬಿಟ್ಟಿದ್ದಾನೆ.

ದ್ವೀಪ ಗ್ರಾಮ ಆಗಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ತಿಮ್ಮಪ್ಪನಿಗೆ ಪಕ್ಕದ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸುವ ಪರಿಸ್ಥಿತಿ ಎದುರಾಗಿತ್ತು. ಸಾಗರ ಮತ್ತು ಶಿವಮೊಗ್ಗ ಸರಕಾರಿ ಆಸ್ಪತ್ರೆಗೆ ಬರಲು ರಸ್ತೆ ಮಾರ್ಗವಿಲ್ಲ. ರಾತ್ರಿ ಸಮಯದಲ್ಲಿ ಲಾಂಚ್​ಗಳ ಸೇವೆ ಇರುವುದಿಲ್ಲ. ಈ ಹಿನ್ನಲೆಯಲ್ಲಿ ರಸ್ತೆ ಮಾರ್ಗದ ವ್ಯವಸ್ಥೆ ಇರುವ ಉಡುಪಿ ಜಿಲ್ಲಾಸ್ಪತ್ರೆಗೆ ತಿಮ್ಮಪ್ಪನನ್ನು ದಾಖಲಿಸಲಾಗಿತ್ತು. ಆದರೆ ತುರ್ತು ಮತ್ತು ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದ ಹಿನ್ನಲೆ ಚಿಕಿತ್ಸೆ ಪಲಕಾರಿಯಾಗದೇ ತಿಮ್ಮಪ್ಪನು ಮೃತಪಟ್ಟಿದ್ದಾನೆ.

ವರದಿ: ಬಸವರಾಜ್ ಯರಗಣವಿ, ಟಿವಿ 9 ಶಿವಮೊಗ್ಗ

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ