ಬೀದರ್ ತಹಸೀಲ್ದಾರ್ ಕಚೇರಿಯಲ್ಲೇ ಶಿರಸ್ತೇದಾರ್​​ಗೆ ಚಾಕು ಇರಿತ

ಅಪರಾಧ ಕೃತ್ಯಗಳಿಲ್ಲದೇ ತಣ್ಣಗಾಗಿದ್ದ ಬೀದರ್​ನ ತಹಸೀಲ್ದಾರ್ ಕಚೇರಿಯ ಶಿರಸ್ತೇದಾರನಿಗೆ ಹಾಡುಹಗಲೇ ಚಾಕು ಇರಿದ ಘಟನೆ ನಡೆದಿದೆ. ಕೂಡಲೇ ಗಾಯಾಳು ಅನೀಲ್ ಕುಮಾರ್‌ ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಬೀದರ್‌ನ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೀದರ್ ತಹಸೀಲ್ದಾರ್ ಕಚೇರಿಯಲ್ಲೇ ಶಿರಸ್ತೇದಾರ್​​ಗೆ ಚಾಕು ಇರಿತ
ಶಿರಸ್ತೇದಾರ ಅನಿಲ್‌ಕುಮಾರ್ ವ್ಯಾಸ್
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 11, 2024 | 4:29 PM

ಬೀದರ್, ಜು.11: ಹಾಡುಹಗಲೇ ಬೀದರ್(Bidar) ತಹಸೀಲ್ದಾರ್ ಕಚೇರಿಯ ಶಿರಸ್ತೇದಾರನಿಗೆ ಚಾಕು ಇರಿದ ಘಟನೆ ಇಂದು(ಗುರುವಾರ) ಮಧ್ಯಾಹ್ನ ನಡೆದಿದೆ. ಆಹಾರ ಶಾಖೆಯ ಶಿರಸ್ತೇದಾರ(Shirastedar) ಆಗಿರುವ ಅನಿಲ್‌ಕುಮಾರ್ ವ್ಯಾಸ್, ಚಾಕು ಇರಿತಕ್ಕೋಳಗಾದವರು. ಕರ್ತವ್ಯದಲ್ಲಿದ್ದ ವೇಳೆಯೇ ಅನೀಲ್ ಕುಮಾರಗೆ ಚಾಕು ಇರಿದು ವ್ಯಕ್ತಿ ಪರಾರಿಯಾಗಿದ್ದಾನೆ. ಕೂಡಲೇ ಗಾಯಾಳು ಅನೀಲ್ ಕುಮಾರ್‌ ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಎಡಗೈ ಭುಜಕ್ಕೆ ಗಂಭೀರ ಗಾಯವಾದ ಹಿನ್ನೆಲೆ ಬ್ರಿಮ್ಸ್‌ನ ತೀವ್ರ ನಿಗಾ ಘಟಕದಲ್ಲಿ ಶಸ್ತ್ರ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಬೀದರ್‌ನ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಚಾಕು ಇರಿದ ಪರಾರಿಯಾದ ವ್ಯಕ್ತಿ ಅಮನ್ ಜುಬೇರ್ ಎಂದು ಗುರುತಿಸಲಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ಶುರುಮಾಡಿದ್ದಾರೆ.

ಇದನ್ನೂ ಓದಿ:ಮಂಗಳೂರು: ಬಿಜೆಪಿ ವಿಜಯೋತ್ಸವ ಮುಗಿಸಿ ಮನೆಗೆ ಹೋಗುತ್ತಿದ್ದ ಇಬ್ಬರಿಗೆ ಚಾಕು ಇರಿತ, ಮೂವರು ವಶಕ್ಕೆ

ಜಾನುವಾರುಗಳ ಮೈತೊಳೆಯಲು ಹೋದ ಯುವಕ ನೀರುಪಾಲು

ಹಾವೇರಿ: ಹಂದಿಗನೂರು ಗ್ರಾಮದಲ್ಲಿ ವರದಾ ನದಿಗೆ ಜಾನುವಾರುಗಳ ಮೈತೊಳೆಯಲು ಹೋದ ಯುವಕ ನೀರುಪಾಲಾದ ದಾರುಣ ಘಟನೆ ನಡೆದಿದೆ. ಗಾಳೇಪ್ಪ ಮೇಲಿನಮನಿ ನೀರುಪಾಲಾದ ಯುವಕ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಆಗಮಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕಿಡಿಗೇಡಿಗಳಿಂದ ಗುಡಿಸಲು ಮನೆಗೆ ಬೆಂಕಿ

ಕೋಲಾರ: ಮುಳಬಾಗಲು ತಾಲೂಕಿನ ಕುಸುವಗಾನಹಳ್ಳಿಯಲ್ಲಿ ಕಿಡಿಗೇಡಿಗಳು ಗುಡಿಸಲು ಮನೆಗೆ ಬೆಂಕಿ ಹಾಕಿದ ಘಟನೆ ನಡೆದಿದೆ.  ಗ್ರಾಮದ ಶಿವಮ್ಮ ಎಂಬುವರಿಗೆ ಸೇರಿದ ಗುಡಿಸಲು ಮನೆ ಇದಾಗಿದ್ದು, ಹಳೇ ದ್ವೇಷದ ಹಿನ್ನೆಲೆ ಮನೆಗೆ ಬೆಂಕಿ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ಶಿವಮ್ಮ ಪುತ್ರ ಮಂಜುನಾಥ್ ಹಾಗೂ ಗ್ರಾಮದ ಬಾಲರಾಜ್ ನಡುವೆ ಹಣದ ವಿಚಾರವಾಗಿ ಗಲಾಟೆ ನಡೆದಿತ್ತು. ಇದೇ ವಿಚಾರವಾಗಿ ಬಾಲರಾಜು ಬೆಂಕಿ ಇಟ್ಟಿರುವ ಶಂಕೆ ಇದೆ. ಮನೆಯಲ್ಲಿ ವಾಸವಿದ್ದ ಮೂವರು ಪ್ರಾಣಾಪಾಯದಿಂದ ಪಾ್ರಾಗಿದ್ದು, ಸ್ಥಳಕ್ಕೆ ನಂಗಲಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:57 pm, Thu, 11 July 24

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್