ಬೀದರ್ ತಹಸೀಲ್ದಾರ್ ಕಚೇರಿಯಲ್ಲೇ ಶಿರಸ್ತೇದಾರ್​​ಗೆ ಚಾಕು ಇರಿತ

ಅಪರಾಧ ಕೃತ್ಯಗಳಿಲ್ಲದೇ ತಣ್ಣಗಾಗಿದ್ದ ಬೀದರ್​ನ ತಹಸೀಲ್ದಾರ್ ಕಚೇರಿಯ ಶಿರಸ್ತೇದಾರನಿಗೆ ಹಾಡುಹಗಲೇ ಚಾಕು ಇರಿದ ಘಟನೆ ನಡೆದಿದೆ. ಕೂಡಲೇ ಗಾಯಾಳು ಅನೀಲ್ ಕುಮಾರ್‌ ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಬೀದರ್‌ನ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೀದರ್ ತಹಸೀಲ್ದಾರ್ ಕಚೇರಿಯಲ್ಲೇ ಶಿರಸ್ತೇದಾರ್​​ಗೆ ಚಾಕು ಇರಿತ
ಶಿರಸ್ತೇದಾರ ಅನಿಲ್‌ಕುಮಾರ್ ವ್ಯಾಸ್
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 11, 2024 | 4:29 PM

ಬೀದರ್, ಜು.11: ಹಾಡುಹಗಲೇ ಬೀದರ್(Bidar) ತಹಸೀಲ್ದಾರ್ ಕಚೇರಿಯ ಶಿರಸ್ತೇದಾರನಿಗೆ ಚಾಕು ಇರಿದ ಘಟನೆ ಇಂದು(ಗುರುವಾರ) ಮಧ್ಯಾಹ್ನ ನಡೆದಿದೆ. ಆಹಾರ ಶಾಖೆಯ ಶಿರಸ್ತೇದಾರ(Shirastedar) ಆಗಿರುವ ಅನಿಲ್‌ಕುಮಾರ್ ವ್ಯಾಸ್, ಚಾಕು ಇರಿತಕ್ಕೋಳಗಾದವರು. ಕರ್ತವ್ಯದಲ್ಲಿದ್ದ ವೇಳೆಯೇ ಅನೀಲ್ ಕುಮಾರಗೆ ಚಾಕು ಇರಿದು ವ್ಯಕ್ತಿ ಪರಾರಿಯಾಗಿದ್ದಾನೆ. ಕೂಡಲೇ ಗಾಯಾಳು ಅನೀಲ್ ಕುಮಾರ್‌ ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಎಡಗೈ ಭುಜಕ್ಕೆ ಗಂಭೀರ ಗಾಯವಾದ ಹಿನ್ನೆಲೆ ಬ್ರಿಮ್ಸ್‌ನ ತೀವ್ರ ನಿಗಾ ಘಟಕದಲ್ಲಿ ಶಸ್ತ್ರ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಬೀದರ್‌ನ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಚಾಕು ಇರಿದ ಪರಾರಿಯಾದ ವ್ಯಕ್ತಿ ಅಮನ್ ಜುಬೇರ್ ಎಂದು ಗುರುತಿಸಲಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ಶುರುಮಾಡಿದ್ದಾರೆ.

ಇದನ್ನೂ ಓದಿ:ಮಂಗಳೂರು: ಬಿಜೆಪಿ ವಿಜಯೋತ್ಸವ ಮುಗಿಸಿ ಮನೆಗೆ ಹೋಗುತ್ತಿದ್ದ ಇಬ್ಬರಿಗೆ ಚಾಕು ಇರಿತ, ಮೂವರು ವಶಕ್ಕೆ

ಜಾನುವಾರುಗಳ ಮೈತೊಳೆಯಲು ಹೋದ ಯುವಕ ನೀರುಪಾಲು

ಹಾವೇರಿ: ಹಂದಿಗನೂರು ಗ್ರಾಮದಲ್ಲಿ ವರದಾ ನದಿಗೆ ಜಾನುವಾರುಗಳ ಮೈತೊಳೆಯಲು ಹೋದ ಯುವಕ ನೀರುಪಾಲಾದ ದಾರುಣ ಘಟನೆ ನಡೆದಿದೆ. ಗಾಳೇಪ್ಪ ಮೇಲಿನಮನಿ ನೀರುಪಾಲಾದ ಯುವಕ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಆಗಮಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕಿಡಿಗೇಡಿಗಳಿಂದ ಗುಡಿಸಲು ಮನೆಗೆ ಬೆಂಕಿ

ಕೋಲಾರ: ಮುಳಬಾಗಲು ತಾಲೂಕಿನ ಕುಸುವಗಾನಹಳ್ಳಿಯಲ್ಲಿ ಕಿಡಿಗೇಡಿಗಳು ಗುಡಿಸಲು ಮನೆಗೆ ಬೆಂಕಿ ಹಾಕಿದ ಘಟನೆ ನಡೆದಿದೆ.  ಗ್ರಾಮದ ಶಿವಮ್ಮ ಎಂಬುವರಿಗೆ ಸೇರಿದ ಗುಡಿಸಲು ಮನೆ ಇದಾಗಿದ್ದು, ಹಳೇ ದ್ವೇಷದ ಹಿನ್ನೆಲೆ ಮನೆಗೆ ಬೆಂಕಿ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ಶಿವಮ್ಮ ಪುತ್ರ ಮಂಜುನಾಥ್ ಹಾಗೂ ಗ್ರಾಮದ ಬಾಲರಾಜ್ ನಡುವೆ ಹಣದ ವಿಚಾರವಾಗಿ ಗಲಾಟೆ ನಡೆದಿತ್ತು. ಇದೇ ವಿಚಾರವಾಗಿ ಬಾಲರಾಜು ಬೆಂಕಿ ಇಟ್ಟಿರುವ ಶಂಕೆ ಇದೆ. ಮನೆಯಲ್ಲಿ ವಾಸವಿದ್ದ ಮೂವರು ಪ್ರಾಣಾಪಾಯದಿಂದ ಪಾ್ರಾಗಿದ್ದು, ಸ್ಥಳಕ್ಕೆ ನಂಗಲಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:57 pm, Thu, 11 July 24

Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
Follow Us