AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga: ತೀರ್ಥಹಳ್ಳಿ ಅರಣ್ಯ ಇಲಾಖೆ ಅಧಿಕಾರಿಗೆ ಹನಿಟ್ರ್ಯಾಪ್; ಮೂವರ ಬಂಧನ

ಅರಣ್ಯ ಇಲಾಖೆಯ ಡಿಆರ್​​ಎಫ್​ಒ‌ ಅಧಿಕಾರಿಗೆ ಕರೆ ಮಾಡಿದ ಮಹಿಳೆಯೋರ್ವಳು ನೀವು ನಮ್ಮ ಸ್ಟುಡಿಯೋದಲ್ಲಿ ಫೋಟೊ ತೆಗೆಸಿಕೊಂಡಿದ್ದು ಫೋಟೋ ತೆಗೆದುಕೊಂಡು ಹೋಗಿ ಎಂದು ಕರೆ ಮಾಡಿರುತ್ತಾಳೆ. ಮುಂದೇನಾಯ್ತು? ಓದಿ.

Shivamogga: ತೀರ್ಥಹಳ್ಳಿ ಅರಣ್ಯ ಇಲಾಖೆ ಅಧಿಕಾರಿಗೆ ಹನಿಟ್ರ್ಯಾಪ್; ಮೂವರ ಬಂಧನ
ಸಾಂದರ್ಭಿಕ ಚಿತ್ರ
Basavaraj Yaraganavi
| Edited By: |

Updated on:Jun 26, 2023 | 6:21 PM

Share

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಆಮಿಷವೊಡ್ಡಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಇದೊಂದು ಹನಿಟ್ರ್ಯಾಪ್ (Honey trap) ಕೃತ್ಯ ಎನ್ನಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅರಣ್ಯ ಇಲಾಖೆಯ ಡಿಆರ್​​ಎಫ್​ಒ‌ (DRFO) ಅಧಿಕಾರಿಗೆ ಕರೆ ಮಾಡಿದ ಮಹಿಳೆಯೋರ್ವಳು ನೀವು ನಮ್ಮ ಸ್ಟುಡಿಯೋದಲ್ಲಿ ಫೋಟೊ ತೆಗೆಸಿಕೊಂಡಿದ್ದು ಫೋಟೋ ತೆಗೆದುಕೊಂಡು ಹೋಗಿ ಎಂದು ಕರೆ ಮಾಡಿರುತ್ತಾಳೆ.

ಈ ಫೋನ್ ಕರೆಯು ಅಧಿಕಾರಿ ಮತ್ತು ಮಹಿಳೆಯ ಜತೆ ಸಲುಗೆಗೆ ಕಾರಣವಾಗಿದೆ. ಹತ್ತಿರಕ್ಕೆ ಕರೆಸಿದೆ. ಒಂದು ದಿನ ಅಧಿಕಾರಿ ಮನೆಯಲ್ಲಿದ್ದಾಗ ಈ ಮಹಿಳೆಯ ಗ್ಯಾಂಗ್ ಮನೆಗೆ ಬಂದು ಕದ ತಟ್ಟಿದ್ದಾರೆ. ಆಗ ಅಧಿಕಾರಿಯ ನಗ್ನ ಫೋಟೊ ತೆಗೆದು ಅಧಿಕಾರಿಗೆ ಹಣದ ಬೇಡಿಕೆ ಇಟ್ಟಿದೆ.

ಹಂತ ಹಂತವಾಗಿ ಅಧಿಕಾರಿಗಳು ಹಣ ನೀಡಿದ್ದಾರೆ. ಗ್ಯಾಂಗ್​​ನ ಹಣದ ವಸೂಲಿ ಅಧಿಕಾರಿಯನ್ನು ಜಿಗುಪ್ಸೆಗೆ ಒಳಪಡಿಸಿದೆ. ನಂತರ ತೀರ್ಥಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವಿಚಾರದಲ್ಲಿ ಧನುಷ್, ಅನ್ಸರ್, ಕಾರ್ತಿಕ್, ಪುಂಡ, ಸಿದ್ದಿಕಿ ಮೋಹಿತೆ ಗೌಡ ಹಾಗೂ ಅನನ್ಯ ಯಾನೆ ಸೌರಭ ಎಂಬುವರ ವಿರುದ್ಧ ದೂರು ದಾಖಲಾಗಿದೆ.

ಇದನ್ನೂ ಓದಿ: Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಸ್ಟ್​ 11ರಿಂದ ವಿಮಾನ ಸಂಚಾರ; ಸಂಸದ ರಾಘವೇಂದ್ರ ಮಾಹಿತಿ

ಅನನ್ಯ, ಮೋಹಿತೆ ಗೌಡ ಹಾಗೂ ಸಿದ್ದಿಕ್ ಎಂಬುವರನ್ನು ಬಂಧಿಸಲಾಗಿದೆ. ಏಳುಜನರಲ್ಲಿ ಮೂವರು ಬಂಧಿತರಾಗಿದ್ದು ಉಳಿದ ನಾಲ್ವರು ತಲೆಮರೆಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:16 pm, Mon, 26 June 23

Follow Us
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು