AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga: ತೀರ್ಥಹಳ್ಳಿ ಅರಣ್ಯ ಇಲಾಖೆ ಅಧಿಕಾರಿಗೆ ಹನಿಟ್ರ್ಯಾಪ್; ಮೂವರ ಬಂಧನ

ಅರಣ್ಯ ಇಲಾಖೆಯ ಡಿಆರ್​​ಎಫ್​ಒ‌ ಅಧಿಕಾರಿಗೆ ಕರೆ ಮಾಡಿದ ಮಹಿಳೆಯೋರ್ವಳು ನೀವು ನಮ್ಮ ಸ್ಟುಡಿಯೋದಲ್ಲಿ ಫೋಟೊ ತೆಗೆಸಿಕೊಂಡಿದ್ದು ಫೋಟೋ ತೆಗೆದುಕೊಂಡು ಹೋಗಿ ಎಂದು ಕರೆ ಮಾಡಿರುತ್ತಾಳೆ. ಮುಂದೇನಾಯ್ತು? ಓದಿ.

Shivamogga: ತೀರ್ಥಹಳ್ಳಿ ಅರಣ್ಯ ಇಲಾಖೆ ಅಧಿಕಾರಿಗೆ ಹನಿಟ್ರ್ಯಾಪ್; ಮೂವರ ಬಂಧನ
ಸಾಂದರ್ಭಿಕ ಚಿತ್ರ
Basavaraj Yaraganavi
| Edited By: |

Updated on:Jun 26, 2023 | 6:21 PM

Share

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಆಮಿಷವೊಡ್ಡಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಇದೊಂದು ಹನಿಟ್ರ್ಯಾಪ್ (Honey trap) ಕೃತ್ಯ ಎನ್ನಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅರಣ್ಯ ಇಲಾಖೆಯ ಡಿಆರ್​​ಎಫ್​ಒ‌ (DRFO) ಅಧಿಕಾರಿಗೆ ಕರೆ ಮಾಡಿದ ಮಹಿಳೆಯೋರ್ವಳು ನೀವು ನಮ್ಮ ಸ್ಟುಡಿಯೋದಲ್ಲಿ ಫೋಟೊ ತೆಗೆಸಿಕೊಂಡಿದ್ದು ಫೋಟೋ ತೆಗೆದುಕೊಂಡು ಹೋಗಿ ಎಂದು ಕರೆ ಮಾಡಿರುತ್ತಾಳೆ.

ಈ ಫೋನ್ ಕರೆಯು ಅಧಿಕಾರಿ ಮತ್ತು ಮಹಿಳೆಯ ಜತೆ ಸಲುಗೆಗೆ ಕಾರಣವಾಗಿದೆ. ಹತ್ತಿರಕ್ಕೆ ಕರೆಸಿದೆ. ಒಂದು ದಿನ ಅಧಿಕಾರಿ ಮನೆಯಲ್ಲಿದ್ದಾಗ ಈ ಮಹಿಳೆಯ ಗ್ಯಾಂಗ್ ಮನೆಗೆ ಬಂದು ಕದ ತಟ್ಟಿದ್ದಾರೆ. ಆಗ ಅಧಿಕಾರಿಯ ನಗ್ನ ಫೋಟೊ ತೆಗೆದು ಅಧಿಕಾರಿಗೆ ಹಣದ ಬೇಡಿಕೆ ಇಟ್ಟಿದೆ.

ಹಂತ ಹಂತವಾಗಿ ಅಧಿಕಾರಿಗಳು ಹಣ ನೀಡಿದ್ದಾರೆ. ಗ್ಯಾಂಗ್​​ನ ಹಣದ ವಸೂಲಿ ಅಧಿಕಾರಿಯನ್ನು ಜಿಗುಪ್ಸೆಗೆ ಒಳಪಡಿಸಿದೆ. ನಂತರ ತೀರ್ಥಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವಿಚಾರದಲ್ಲಿ ಧನುಷ್, ಅನ್ಸರ್, ಕಾರ್ತಿಕ್, ಪುಂಡ, ಸಿದ್ದಿಕಿ ಮೋಹಿತೆ ಗೌಡ ಹಾಗೂ ಅನನ್ಯ ಯಾನೆ ಸೌರಭ ಎಂಬುವರ ವಿರುದ್ಧ ದೂರು ದಾಖಲಾಗಿದೆ.

ಇದನ್ನೂ ಓದಿ: Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಸ್ಟ್​ 11ರಿಂದ ವಿಮಾನ ಸಂಚಾರ; ಸಂಸದ ರಾಘವೇಂದ್ರ ಮಾಹಿತಿ

ಅನನ್ಯ, ಮೋಹಿತೆ ಗೌಡ ಹಾಗೂ ಸಿದ್ದಿಕ್ ಎಂಬುವರನ್ನು ಬಂಧಿಸಲಾಗಿದೆ. ಏಳುಜನರಲ್ಲಿ ಮೂವರು ಬಂಧಿತರಾಗಿದ್ದು ಉಳಿದ ನಾಲ್ವರು ತಲೆಮರೆಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:16 pm, Mon, 26 June 23

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ