AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga: ತೀರ್ಥಹಳ್ಳಿ ಅರಣ್ಯ ಇಲಾಖೆ ಅಧಿಕಾರಿಗೆ ಹನಿಟ್ರ್ಯಾಪ್; ಮೂವರ ಬಂಧನ

ಅರಣ್ಯ ಇಲಾಖೆಯ ಡಿಆರ್​​ಎಫ್​ಒ‌ ಅಧಿಕಾರಿಗೆ ಕರೆ ಮಾಡಿದ ಮಹಿಳೆಯೋರ್ವಳು ನೀವು ನಮ್ಮ ಸ್ಟುಡಿಯೋದಲ್ಲಿ ಫೋಟೊ ತೆಗೆಸಿಕೊಂಡಿದ್ದು ಫೋಟೋ ತೆಗೆದುಕೊಂಡು ಹೋಗಿ ಎಂದು ಕರೆ ಮಾಡಿರುತ್ತಾಳೆ. ಮುಂದೇನಾಯ್ತು? ಓದಿ.

Shivamogga: ತೀರ್ಥಹಳ್ಳಿ ಅರಣ್ಯ ಇಲಾಖೆ ಅಧಿಕಾರಿಗೆ ಹನಿಟ್ರ್ಯಾಪ್; ಮೂವರ ಬಂಧನ
ಸಾಂದರ್ಭಿಕ ಚಿತ್ರ
Basavaraj Yaraganavi
| Updated By: Ganapathi Sharma|

Updated on:Jun 26, 2023 | 6:21 PM

Share

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಆಮಿಷವೊಡ್ಡಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಇದೊಂದು ಹನಿಟ್ರ್ಯಾಪ್ (Honey trap) ಕೃತ್ಯ ಎನ್ನಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅರಣ್ಯ ಇಲಾಖೆಯ ಡಿಆರ್​​ಎಫ್​ಒ‌ (DRFO) ಅಧಿಕಾರಿಗೆ ಕರೆ ಮಾಡಿದ ಮಹಿಳೆಯೋರ್ವಳು ನೀವು ನಮ್ಮ ಸ್ಟುಡಿಯೋದಲ್ಲಿ ಫೋಟೊ ತೆಗೆಸಿಕೊಂಡಿದ್ದು ಫೋಟೋ ತೆಗೆದುಕೊಂಡು ಹೋಗಿ ಎಂದು ಕರೆ ಮಾಡಿರುತ್ತಾಳೆ.

ಈ ಫೋನ್ ಕರೆಯು ಅಧಿಕಾರಿ ಮತ್ತು ಮಹಿಳೆಯ ಜತೆ ಸಲುಗೆಗೆ ಕಾರಣವಾಗಿದೆ. ಹತ್ತಿರಕ್ಕೆ ಕರೆಸಿದೆ. ಒಂದು ದಿನ ಅಧಿಕಾರಿ ಮನೆಯಲ್ಲಿದ್ದಾಗ ಈ ಮಹಿಳೆಯ ಗ್ಯಾಂಗ್ ಮನೆಗೆ ಬಂದು ಕದ ತಟ್ಟಿದ್ದಾರೆ. ಆಗ ಅಧಿಕಾರಿಯ ನಗ್ನ ಫೋಟೊ ತೆಗೆದು ಅಧಿಕಾರಿಗೆ ಹಣದ ಬೇಡಿಕೆ ಇಟ್ಟಿದೆ.

ಹಂತ ಹಂತವಾಗಿ ಅಧಿಕಾರಿಗಳು ಹಣ ನೀಡಿದ್ದಾರೆ. ಗ್ಯಾಂಗ್​​ನ ಹಣದ ವಸೂಲಿ ಅಧಿಕಾರಿಯನ್ನು ಜಿಗುಪ್ಸೆಗೆ ಒಳಪಡಿಸಿದೆ. ನಂತರ ತೀರ್ಥಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವಿಚಾರದಲ್ಲಿ ಧನುಷ್, ಅನ್ಸರ್, ಕಾರ್ತಿಕ್, ಪುಂಡ, ಸಿದ್ದಿಕಿ ಮೋಹಿತೆ ಗೌಡ ಹಾಗೂ ಅನನ್ಯ ಯಾನೆ ಸೌರಭ ಎಂಬುವರ ವಿರುದ್ಧ ದೂರು ದಾಖಲಾಗಿದೆ.

ಇದನ್ನೂ ಓದಿ: Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಸ್ಟ್​ 11ರಿಂದ ವಿಮಾನ ಸಂಚಾರ; ಸಂಸದ ರಾಘವೇಂದ್ರ ಮಾಹಿತಿ

ಅನನ್ಯ, ಮೋಹಿತೆ ಗೌಡ ಹಾಗೂ ಸಿದ್ದಿಕ್ ಎಂಬುವರನ್ನು ಬಂಧಿಸಲಾಗಿದೆ. ಏಳುಜನರಲ್ಲಿ ಮೂವರು ಬಂಧಿತರಾಗಿದ್ದು ಉಳಿದ ನಾಲ್ವರು ತಲೆಮರೆಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:16 pm, Mon, 26 June 23

ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?