AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga: ತೀರ್ಥಹಳ್ಳಿ ಅರಣ್ಯ ಇಲಾಖೆ ಅಧಿಕಾರಿಗೆ ಹನಿಟ್ರ್ಯಾಪ್; ಮೂವರ ಬಂಧನ

ಅರಣ್ಯ ಇಲಾಖೆಯ ಡಿಆರ್​​ಎಫ್​ಒ‌ ಅಧಿಕಾರಿಗೆ ಕರೆ ಮಾಡಿದ ಮಹಿಳೆಯೋರ್ವಳು ನೀವು ನಮ್ಮ ಸ್ಟುಡಿಯೋದಲ್ಲಿ ಫೋಟೊ ತೆಗೆಸಿಕೊಂಡಿದ್ದು ಫೋಟೋ ತೆಗೆದುಕೊಂಡು ಹೋಗಿ ಎಂದು ಕರೆ ಮಾಡಿರುತ್ತಾಳೆ. ಮುಂದೇನಾಯ್ತು? ಓದಿ.

Shivamogga: ತೀರ್ಥಹಳ್ಳಿ ಅರಣ್ಯ ಇಲಾಖೆ ಅಧಿಕಾರಿಗೆ ಹನಿಟ್ರ್ಯಾಪ್; ಮೂವರ ಬಂಧನ
ಸಾಂದರ್ಭಿಕ ಚಿತ್ರ
Basavaraj Yaraganavi
| Edited By: |

Updated on:Jun 26, 2023 | 6:21 PM

Share

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಆಮಿಷವೊಡ್ಡಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಇದೊಂದು ಹನಿಟ್ರ್ಯಾಪ್ (Honey trap) ಕೃತ್ಯ ಎನ್ನಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅರಣ್ಯ ಇಲಾಖೆಯ ಡಿಆರ್​​ಎಫ್​ಒ‌ (DRFO) ಅಧಿಕಾರಿಗೆ ಕರೆ ಮಾಡಿದ ಮಹಿಳೆಯೋರ್ವಳು ನೀವು ನಮ್ಮ ಸ್ಟುಡಿಯೋದಲ್ಲಿ ಫೋಟೊ ತೆಗೆಸಿಕೊಂಡಿದ್ದು ಫೋಟೋ ತೆಗೆದುಕೊಂಡು ಹೋಗಿ ಎಂದು ಕರೆ ಮಾಡಿರುತ್ತಾಳೆ.

ಈ ಫೋನ್ ಕರೆಯು ಅಧಿಕಾರಿ ಮತ್ತು ಮಹಿಳೆಯ ಜತೆ ಸಲುಗೆಗೆ ಕಾರಣವಾಗಿದೆ. ಹತ್ತಿರಕ್ಕೆ ಕರೆಸಿದೆ. ಒಂದು ದಿನ ಅಧಿಕಾರಿ ಮನೆಯಲ್ಲಿದ್ದಾಗ ಈ ಮಹಿಳೆಯ ಗ್ಯಾಂಗ್ ಮನೆಗೆ ಬಂದು ಕದ ತಟ್ಟಿದ್ದಾರೆ. ಆಗ ಅಧಿಕಾರಿಯ ನಗ್ನ ಫೋಟೊ ತೆಗೆದು ಅಧಿಕಾರಿಗೆ ಹಣದ ಬೇಡಿಕೆ ಇಟ್ಟಿದೆ.

ಹಂತ ಹಂತವಾಗಿ ಅಧಿಕಾರಿಗಳು ಹಣ ನೀಡಿದ್ದಾರೆ. ಗ್ಯಾಂಗ್​​ನ ಹಣದ ವಸೂಲಿ ಅಧಿಕಾರಿಯನ್ನು ಜಿಗುಪ್ಸೆಗೆ ಒಳಪಡಿಸಿದೆ. ನಂತರ ತೀರ್ಥಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವಿಚಾರದಲ್ಲಿ ಧನುಷ್, ಅನ್ಸರ್, ಕಾರ್ತಿಕ್, ಪುಂಡ, ಸಿದ್ದಿಕಿ ಮೋಹಿತೆ ಗೌಡ ಹಾಗೂ ಅನನ್ಯ ಯಾನೆ ಸೌರಭ ಎಂಬುವರ ವಿರುದ್ಧ ದೂರು ದಾಖಲಾಗಿದೆ.

ಇದನ್ನೂ ಓದಿ: Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಸ್ಟ್​ 11ರಿಂದ ವಿಮಾನ ಸಂಚಾರ; ಸಂಸದ ರಾಘವೇಂದ್ರ ಮಾಹಿತಿ

ಅನನ್ಯ, ಮೋಹಿತೆ ಗೌಡ ಹಾಗೂ ಸಿದ್ದಿಕ್ ಎಂಬುವರನ್ನು ಬಂಧಿಸಲಾಗಿದೆ. ಏಳುಜನರಲ್ಲಿ ಮೂವರು ಬಂಧಿತರಾಗಿದ್ದು ಉಳಿದ ನಾಲ್ವರು ತಲೆಮರೆಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:16 pm, Mon, 26 June 23

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ