AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮ: ವಾಹನಗಳ ಜಖಂ ಗೊಳಿಸಿದ ಆರೋಪದಡಿ ಮೃತ ಹರ್ಷ ಸಹೋದರಿ ಸೇರಿದಂತೆ 15 ಮಂದಿ ವಿರುದ್ಧ ಎಫ್​ಐಆರ್

ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ಸಂದರ್ಭದಲ್ಲಿ ವಾಹನಗಳನ್ನು ಜಖಂ ಗೊಳಿಸಿದ ಆರೋಪದಡಿ ಕೊಲೆಯಾದ ಹರ್ಷ ಸಹೋದರಿ ಅಶ್ವಿನಿ ಸೇರಿದಂತೆ 15 ಮಂದಿ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮ: ವಾಹನಗಳ ಜಖಂ ಗೊಳಿಸಿದ ಆರೋಪದಡಿ ಮೃತ ಹರ್ಷ ಸಹೋದರಿ ಸೇರಿದಂತೆ 15 ಮಂದಿ ವಿರುದ್ಧ ಎಫ್​ಐಆರ್
ಕೊಲೆಯಾದ ಹರ್ಷ ಸಹೋದರಿ ಅಶ್ವಿನಿ ವಿರುದ್ಧ ಎಫ್​ಐಆರ್ ದಾಖಲು
TV9 Web
| Edited By: Rakesh Nayak Manchi|

Updated on:Oct 24, 2022 | 10:31 AM

Share

ಶಿವಮೊಗ್ಗ: ವೀರ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ದಿನದಂದು ವಾಹನಗಳನ್ನು ಜಖಂ ಗೊಳಿಸಿದ ಆರೋಪದ ಮೇಲೆ ಕೊಲೆಯಾದ ಹರ್ಷ ಸಹೋದರಿ ಅಶ್ವಿನಿ ಸೇರಿದಂತೆ ಒಟ್ಟು 15 ಮಂದಿ ವಿರುದ್ಧ ಜಿಲ್ಲೆಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಆಜಾದನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ತನ್ನ ಕಾರನ್ನು ಜಖಂ ಗೊಳಿಸಲಾಗಿದೆ ಎಂದು ಆರೋಪಿಸಿ ಸೈಯದ್ ಪರ್ವೇಜ್​ ಎಂಬುವರು ನೀಡಿದ ದೂರಿನ ಮೇರೆಗೆ ದೊಡ್ಡಪೇಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಕ್ಟೋಬರ್ 22 ರಂದು ಸಂಜೆ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ಪ್ರಯುಕ್ತ ಬೈಕ್ ಜಾಥ ಆಯೋಜಿಸಲಾಗಿತ್ತು. ಅದರಂತೆ ನಗರದ ಅಮೀರ್ ಅಹ್ಮದ್ ವೃತ್ತದಿಂದ ಬೈಕ್ ಜಾಥಾ ನಡೆದಿದ್ದು, ಕಲ್ಲಪ್ಪನ ಕೇರಿಯಿಂದ ಬೈಕ್​ಗಳಲ್ಲಿ ಗುಂಪಾಗಿ ಕಾರ್ಯಕರ್ತರು ತೆರಳಿದ್ದಾರೆ. ಈ ಜಾಥಾದಲ್ಲಿ ಹರ್ಷ ಸಹೋದರಿ ಅಶ್ವಿನಿ ಕೂಡ ಭಾಗಿಯಾಗಿದ್ದಳು

ಜಾಥಾ ಸಾಗುತ್ತಿದ್ದಾಗ ಆಜಾದ್ ನಗರದ ಮನೆಯ ಮುಂದೆ ನಿಲ್ಲಿಸಿದ್ದ ಇನೊವಾ ಕಾರಿನ ಎಡಭಾಗದ ಹೆಡ್ ಲೈಟ್, ಸೈಡ್ ಡೋರ್, ಬ್ಯಾಕ್ ಸೈಡ್ ಮಡ್ ಗಾರ್ಡ್ ಅನ್ನು ಜಖಂಗೊಳಿಸಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಕಾರು ಮಾಲೀಕ ಸೈಯದ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:31 am, Mon, 24 October 22

Follow Us
Web contact
Web contact

TV9 Kannada

Read More