ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮ: ವಾಹನಗಳ ಜಖಂ ಗೊಳಿಸಿದ ಆರೋಪದಡಿ ಮೃತ ಹರ್ಷ ಸಹೋದರಿ ಸೇರಿದಂತೆ 15 ಮಂದಿ ವಿರುದ್ಧ ಎಫ್​ಐಆರ್

ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ಸಂದರ್ಭದಲ್ಲಿ ವಾಹನಗಳನ್ನು ಜಖಂ ಗೊಳಿಸಿದ ಆರೋಪದಡಿ ಕೊಲೆಯಾದ ಹರ್ಷ ಸಹೋದರಿ ಅಶ್ವಿನಿ ಸೇರಿದಂತೆ 15 ಮಂದಿ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮ: ವಾಹನಗಳ ಜಖಂ ಗೊಳಿಸಿದ ಆರೋಪದಡಿ ಮೃತ ಹರ್ಷ ಸಹೋದರಿ ಸೇರಿದಂತೆ 15 ಮಂದಿ ವಿರುದ್ಧ ಎಫ್​ಐಆರ್
ಕೊಲೆಯಾದ ಹರ್ಷ ಸಹೋದರಿ ಅಶ್ವಿನಿ ವಿರುದ್ಧ ಎಫ್​ಐಆರ್ ದಾಖಲು
Follow us
| Updated By: Rakesh Nayak Manchi

Updated on:Oct 24, 2022 | 10:31 AM

ಶಿವಮೊಗ್ಗ: ವೀರ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ದಿನದಂದು ವಾಹನಗಳನ್ನು ಜಖಂ ಗೊಳಿಸಿದ ಆರೋಪದ ಮೇಲೆ ಕೊಲೆಯಾದ ಹರ್ಷ ಸಹೋದರಿ ಅಶ್ವಿನಿ ಸೇರಿದಂತೆ ಒಟ್ಟು 15 ಮಂದಿ ವಿರುದ್ಧ ಜಿಲ್ಲೆಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಆಜಾದನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ತನ್ನ ಕಾರನ್ನು ಜಖಂ ಗೊಳಿಸಲಾಗಿದೆ ಎಂದು ಆರೋಪಿಸಿ ಸೈಯದ್ ಪರ್ವೇಜ್​ ಎಂಬುವರು ನೀಡಿದ ದೂರಿನ ಮೇರೆಗೆ ದೊಡ್ಡಪೇಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಕ್ಟೋಬರ್ 22 ರಂದು ಸಂಜೆ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ಪ್ರಯುಕ್ತ ಬೈಕ್ ಜಾಥ ಆಯೋಜಿಸಲಾಗಿತ್ತು. ಅದರಂತೆ ನಗರದ ಅಮೀರ್ ಅಹ್ಮದ್ ವೃತ್ತದಿಂದ ಬೈಕ್ ಜಾಥಾ ನಡೆದಿದ್ದು, ಕಲ್ಲಪ್ಪನ ಕೇರಿಯಿಂದ ಬೈಕ್​ಗಳಲ್ಲಿ ಗುಂಪಾಗಿ ಕಾರ್ಯಕರ್ತರು ತೆರಳಿದ್ದಾರೆ. ಈ ಜಾಥಾದಲ್ಲಿ ಹರ್ಷ ಸಹೋದರಿ ಅಶ್ವಿನಿ ಕೂಡ ಭಾಗಿಯಾಗಿದ್ದಳು

ಜಾಥಾ ಸಾಗುತ್ತಿದ್ದಾಗ ಆಜಾದ್ ನಗರದ ಮನೆಯ ಮುಂದೆ ನಿಲ್ಲಿಸಿದ್ದ ಇನೊವಾ ಕಾರಿನ ಎಡಭಾಗದ ಹೆಡ್ ಲೈಟ್, ಸೈಡ್ ಡೋರ್, ಬ್ಯಾಕ್ ಸೈಡ್ ಮಡ್ ಗಾರ್ಡ್ ಅನ್ನು ಜಖಂಗೊಳಿಸಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಕಾರು ಮಾಲೀಕ ಸೈಯದ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:31 am, Mon, 24 October 22

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ