AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಕೈದಿಗಳಿಗೆ ಗಾಂಜಾ, ಮೊಬೈಲ್ ನೀಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ

ಕೈದಿಗಳಿಗೆ ಗಾಂಜಾ, ಮೊಬೈಲ್ ನೀಡಲು ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಶಿವಮೊಗ್ಗದ ಸೋಗಾನೆಯಲ್ಲಿರುವ ಸೆಂಟ್ರಲ್ ಜೈಲ್ ಬಳಿ ಬಂಧಿಸಲಾಗಿದೆ. 29 ಗಾಂಜಾ ಪ್ಯಾಕೆಟ್, 1 ಮೊಬೈಲ್, 2 ಚಾರ್ಜರ್​ ವಶಕ್ಕೆ ಪಡೆಯಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಜೈಲು ಸಿಬ್ಬಂದಿ ದೂರು ದಾಖಲಿಸಿದ್ದಾರೆ.

ಶಿವಮೊಗ್ಗ: ಕೈದಿಗಳಿಗೆ ಗಾಂಜಾ, ಮೊಬೈಲ್ ನೀಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ
ಪ್ರಾತಿನಿಧಿಕ ಚಿತ್ರ
Follow us
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ

Updated on: Dec 29, 2023 | 9:18 PM

ಶಿವಮೊಗ್ಗ, ಡಿಸೆಂಬರ್​ 29: ಕೈದಿಗಳಿಗೆ ಗಾಂಜಾ (Ganja), ಮೊಬೈಲ್ ನೀಡಲು ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಶಿವಮೊಗ್ಗದ ಸೋಗಾನೆಯಲ್ಲಿರುವ ಸೆಂಟ್ರಲ್ ಜೈಲ್ ಬಳಿ ಬಂಧಿಸಲಾಗಿದೆ. 29 ಗಾಂಜಾ ಪ್ಯಾಕೆಟ್, 1 ಮೊಬೈಲ್, 2 ಚಾರ್ಜರ್​ ವಶಕ್ಕೆ ಪಡೆಯಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಜೈಲು ಸಿಬ್ಬಂದಿ ದೂರು ದಾಖಲಿಸಿದ್ದಾರೆ. ಗಾಂಜಾ, ಮೊಬೈಲ್ ಪ್ಯಾಕ್ ಮಾಡಿ ಹೊರಗಿನಿಂದ ಎಸೆಯಲು ಯತ್ನಿಸಿದ್ದರು.

ಸಿಸಿಕ್ಯಾಮರಾದಲ್ಲಿ ಆರೋಪಿಗಳ ಚಲನವಲನಗಳನ್ನು ಜೈಲು ಸಿಬ್ಬಂದಿ ಗಮನಿಸಿದ್ದರು. ಕೂಡಲೇ ಇಬ್ಬರು ಆರೋಪಿಗಳ ಬೆನ್ನತ್ತಿದ್ದ ಸೆಂಟ್ರಲ್ ಜೈಲಿನ ಸಿಬ್ಬಂದಿ, 2 ಕಿಲೋಮೀಟರ್ ಬೆನ್ನಟ್ಟಿ ಆರೋಪಿಗಳನ್ನು ಹಿಡಿದಿದ್ದಾರೆ.

ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಲೈನ್​ಮ್ಯಾನ್ ದುರ್ಮರಣ

ಬೆಳಗಾವಿ: ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಲೈನ್​ಮ್ಯಾನ್ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಕಿತ್ತೂರು ಪಟ್ಟಣದ ಕೆಇಬಿ ಆವರಣದಲ್ಲಿ ನಡೆದಿದೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೈನ್​ಮ್ಯಾನ್ ಮೃತ ಆರೋಪ ಮಾಡಲಾಗಿದೆ. ಹುಲಿಕಟ್ಟಿ ಗ್ರಾಮದ ಪ್ರೇಮಾನಂದ ಎಮ್ಮಿ(25) ಮೃತಪಟ್ಟವರು.

ಇದನ್ನೂ ಓದಿ; ಮಂಗಳೂರು: ಈಜಲು ತೆರಳಿದ್ದ ಇಬ್ಬರು ಯುವಕರು ಸಮುದ್ರಪಾಲು: ಓರ್ವನ ರಕ್ಷಣೆ

ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸದೆ ಕಂಬ ಹತ್ತಿಸಿದ್ದರೆಂದು ಹೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರೇಮಾನಂದ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಸ್ಪತ್ರೆ ಬಳಿ ಲೈನ್​ಮ್ಯಾನ್ ಪ್ರೇಮಾನಂದ ಕುಟುಂಬಸ್ಥರ ಜಮಾವಣೆಗೊಂಡಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೆಎಸ್​ಆರ್​ಟಿಸಿ ಬಸ್ ಹಾಗೂ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ: ಗಂಭೀರ ಗಾಯ

ಮಂಡ್ಯ: ಕೆಎಸ್​ಆರ್​ಟಿಸಿ ಬಸ್ ಹಾಗೂ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಟೆಂಪೋ ಡ್ರೈವರ್​ಗೆ ಗಂಭೀರ ಗಾಯವಾಗಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಗ್ರಾಮದ ಎಲೆಕೆರೆ‌ ಹ್ಯಾಂಡ್ ಫೋಸ್ಟ್ ಬಳಿ ಘಟನೆ ನಡೆದಿದೆ. ಸ್ಥಳಕ್ಕೆ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಕಾರು

ಮೈಸೂರು: ತಾಲೂಕಿನ ಹೆಚ್​​​.ಡಿ.ಕೋಟೆ ರಸ್ತೆ ಬಳಿ KSRTC ಬಸ್​​ಗೆ ಡಿಕ್ಕಿಯಾಗುವುದನ್ನ ತಪ್ಪಿಸಲು ಹೋಗಿ  ಕಾರು ಮರಕ್ಕೆ ಡಿಕ್ಕಿ ಹೊಡೆದಿರುವಂತಹ ಘಟನೆ ನಡೆದಿದೆ. ಕಾರಿನಲ್ಲಿದ್ದ ಬೆಂಗಳೂರಿನ ನಿವಾಸಿಗಳು ಬಚಾವ್​​​ ಆಗಿದ್ದು, ಜಯಪುರ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.