Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿ ಬೊಗಳುವ ವಿಚಾರಕ್ಕೆ ಗಲಾಟೆ: ಪಕ್ಕದ ಮನೆಯವರ ಮೇಲೆ ಆ್ಯಸಿಡ್​ ಎರಚಿದ ದಂಪತಿ

ಚಿಕ್ಕಮಗಳೂರು ಜಿಲ್ಲೆ ಎನ್.ಆರ್​.ಪುರ ತಾಲೂಕಿನ ಹಾಳ್​ ಕರಗುಂದ ಗ್ರಾಮದಲ್ಲಿ ನಾಯಿ ಬೊಗಳುವ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಪಕ್ಕದ ಮನೆ ವ್ಯಕ್ತಿ ಮೇಲೆ ದಂಪತಿ ಆ್ಯಸಿಡ್​ ಎರಚಿರುವಂತಹ ಘಟನೆ ನಡೆದಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ನಾಯಿ ಬೊಗಳುವ ವಿಚಾರಕ್ಕೆ ಗಲಾಟೆ: ಪಕ್ಕದ ಮನೆಯವರ ಮೇಲೆ ಆ್ಯಸಿಡ್​ ಎರಚಿದ ದಂಪತಿ
ಆ್ಯಸಿಡ್​ ದಾಳಿಗೊಳಗಾದ ಸುಂದರ್​ ರಾಜ್
Follow us
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ

Updated on: Dec 04, 2023 | 4:31 PM

ಶಿವಮೊಗ್ಗ, ಡಿಸೆಂಬರ್​​ 04: ನಾಯಿ (dog) ಬೊಗಳುವ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಪಕ್ಕದ ಮನೆ ವ್ಯಕ್ತಿ ಮೇಲೆ ದಂಪತಿ ಆ್ಯಸಿಡ್​ ಎರಚಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್​.ಪುರ ತಾಲೂಕಿನ ಹಾಳ್​ ಕರಗುಂದ ಗ್ರಾಮದಲ್ಲಿ ನಡೆದಿದೆ. ಜೇಮ್ಸ್​, ಮರಿಯಮ್ಮರಿಂದ ಸುಂದರ್ ರಾಜ್ ಮೇಲೆ ಆ್ಯಸಿಡ್​​ ದಾಳಿ ಮಾಡಿದ್ದು, ಸುಂದರ್​ರಾಜ್ ಕಣ್ಣು, ಮುಖಕ್ಕೆ ಗಾಯಗಳಾಗಿವೆ. ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಆಸ್ಪತ್ರೆಗೆ ದಾಖಲಿಸಲು ವೈದ್ಯರು ಸಲಹೆ ನೀಡಿದ್ದಾರೆ.

ಸಾಕು ನಾಯಿ ಬೊಗಳಿದ್ದಕ್ಕೆ ಗಾಯಾಳು ಸುಂದರ್​ ರಾಜ್ ಬೈಯ್ದಿದ್ದ. ನಾಯಿ ಹೆಸರಿನಲ್ಲಿ ಜೇಮ್ಸ್​, ಮರಿಯಮ್ಮಗೆ ಬೈಯ್ಯುತ್ತಿದ್ದ ಎಂದು ಆರೋಪ ಮಾಡಲಾಗಿದೆ. ಸಿಟ್ಟಿಗೆದ್ದು ಸುಂದರಾಜ್​ ಮೇಲೆ ದಂಪತಿ ಆ್ಯಸಿಡ್​ ದಾಳಿ ಮಾಡಿದ್ದಾರೆ. ಸದ್ಯ ದಂಪತಿ ವಿರುದ್ಧ ಎನ್​.ಆರ್​.ಪುರ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಜೇಮ್ಸ್​, ಮರಿಯಮ್ಮ ದಂಪತಿ ನಾಪತ್ತೆ ಆಗಿದ್ದಾರೆ.

ದೊಡ್ಡಬಳ್ಳಾಪುರ ನಗರದಲ್ಲಿ ಬೀದಿ‌ನಾಯಿಗಳ ಅಟ್ಟಹಾಸ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಕಳೆದ ರಾತ್ರಿ ಬೀದಿನಾಯಿಗಳು ಅಟ್ಟಹಾಸ ಮೆರೆದಿದ್ದವು. ನಗರದಲ್ಲಿ ಸರಿ ಸುಮಾರು 14 ಮಂದಿಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದವು. ನಗರದ ಡಿ ಕ್ರಾಸ್, ಟಿಬಿ ಕ್ರಾಸ್, ತಾಲೂಕು ಕಚೇರಿ ರಸ್ತೆ, ಸೇರಿದಂತೆ ಹಲವು ಏರಿಯಾಗಳಲ್ಲಿ ಮಕ್ಕಳು ಸೇರಿದಂತೆ ದೊಡ್ಡವರ ಮೇಲೆ ಬೀದಿ ನಾಯಿಗಳು ಅಟ್ಟಹಾಸವನ್ನ ಮೆರೆದಿತ್ತು.

ಇದನ್ನೂ ಓದಿ: ಬಿಜೆಪಿ ಎಂಎಲ್​ಸಿ ಸಿಪಿ ಯೋಗೇಶ್ವರ್ ಭಾವ ಮಹದೇವಯ್ಯ ಸುಪಾರಿ ಹತ್ಯೆ ಶಂಕೆ: ತನಿಖೆ ಚುರುಕು

ಬೀದಿ ನಾಯಿಗಳ ದಾಳಿಗೆ ಒಳಗಾದವರು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನ ಪಡೆದಿದ್ದು, ಕೆಲವರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ತೆರಳಿದ್ದರು.

ಹಿಂಡು ಹಿಂಡಾಗಿ ಬರುತ್ತಿರುವ ಬೀದಿ ನಾಯಿಗಳು ರಸ್ತೆಯಲ್ಲಿ ಓಡಾಡುವ ಮಕ್ಕಳ ಮೇಲೆ ಟಾರ್ಗೆಟ್ ಮಾಡುತ್ತಿದ್ದವು. ಅದರಲ್ಲೂ ನಗರದಲ್ಲಿ ಮಾಂಸದಂಗಡಿಗಳಿಂದ ಬೇರ್ಪಡುವ ಮಾಂಸದ ತುಂಡುಗಳನ್ನ ಬೀದಿ ನಾಯಿಗಳಿಗೆ ಹಾಕಲಾಗಿತ್ತು. ಮಾಂಸದ ತುಂಡುಗಳನ್ನ ತಿಂದು ರುಚಿ ಪಳಗಿರೋ ಬೀದಿ ನಾಯಿಗಳು ಗ್ಯಾಂಗ್ಗಳಂತೆ ಮಂದಿಯಾಗಿ ಬಂದು ಒಬ್ಬೊಂಟಿಯಾಗಿ ಓಡಾಡುವ ಜನರ ಮೇಲೆ ಎರಗುತ್ತಿದ್ದವು.

ಇದನ್ನೂ ಓದಿ: ಮಹಿಳಾ ಸಿಬ್ಬಂದಿ ಗೋಲ್ಮಾಲ್: ಅಡಿಕೆ ಮಂಡಿ ಮಾಲೀಕನಿಗೆ ಕೋಟಿ ಕೋಟಿ ಟೋಪಿ.. ಕಿಲಾಡಿ ಲೇಡಿಗಳ ಕೋಟಿ ಲೂಟಿ ಕಥೆ

ಹೀಗಾಗಿಯೇ ರಾತ್ರಿಯಿಂದ 14 ಮಂದಿ ಮೇಲೆ ಬೀದಿ ನಾಯಿಗಳು ತಮ್ಮ ಅಟ್ಟಹಾಸವನ್ನ ಮೆರೆದಿದ್ದವು. ಇದ್ರಿಂದಾಗಿ ರಸ್ತೆಗಳಲ್ಲಿ ಓಡಾಡಲು ಬೀದಿ ನಾಯಿ ಯಾವಗ ದಾಳಿ ಮಾಡುತ್ತೋ ಅನ್ನೋ ಆತಂಕದಲ್ಲಿ ನಗರದ ಜನ ಇದ್ದಾರೆ. ಹಲವಾರು ದಿನಗಳಿಂದ ಈ ಬಗ್ಗೆ ನಗರಸಭೆ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ನಾಗರೀಕರು ಮನವಿ ಮಾಡಿದ್ದರು ಯಾವುದೇ ಪ್ರಯೋಜನವಾಗಿಲ್ಲ ಅಂತಾ ನಗರಸಭೆ ವಿರುದ್ದ ಜನ ಅಸಮಾಧಾನ ವ್ಯಕ್ತಪಡಿಸಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ