AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತಿಯನ್ನೇ ಹತ್ಯೆಗೈದ ಪತ್ನಿ

ಆತನಿಗೆ ಹೆಂಡತಿ ಅಂದ್ರೆ ಪಂಚಪ್ರಾಣ. ಆದ್ರೆ, ಆಕೆ ಪರಪುರುಷನೊಂದಿಗೆ ವ್ಯಾಮೋಹಕ್ಕೆ ಸಿಲುಕಿದ್ದಳು. ಆಕೆಗೆ ಪತಿ ಮನೆಯಲ್ಲಿ ಪ್ರೀತಿಗೆ ಯಾವುದೇ ಕೊರತೆ ಇರಲಿಲ್ಲ. ಮದುವೆಯಾಗಿ ಮಕ್ಕಳಿದ್ರೂ ಅಡ್ಡ ದಾರಿ ಹಿಡಿದಿದ್ಲು. ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಗೆ ಚಟ್ಟ ಕಟ್ಟಿ ಹೃದಯಾಘಾತದ ಕಥೆ ಕಟ್ಟಿದ್ದಾಳೆ. ಪರ ಪುರುಷನ ಸಂಗಕ್ಕೆ ಗಂಡನ ಹೆಣ ಬೀಳಿಸಿದ ಪತ್ನಿ ಇದೀಗ ಕಂಬಿ ಎಣಿಸುತ್ತಿದ್ದಾಳೆ.

ಯಾದಗಿರಿ:  ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತಿಯನ್ನೇ ಹತ್ಯೆಗೈದ ಪತ್ನಿ
Wife Kills Husband
ಅಮೀನ್​ ಸಾಬ್​
| Edited By: |

Updated on: Jan 30, 2025 | 6:07 PM

Share

ಯಾದಗಿರಿ, (ಜನವರಿ 30): ಪರ ಪುರುಷನ ವ್ಯಾಮೋಹಕ್ಕೆ ಸಿಲುಕಿದ್ದ ಪತ್ನಿಯೇ ಪತಿಯನ್ನೇ ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿಯಲ್ಲಿದೆ ನಡೆದಿದೆ. ಹುಣಸಗಿ ಪಟ್ಟಣದ ನಿವಾಸಿ 34 ವರ್ಷದ ಮಾನಪ್ಪ ಬಂಕಲದೊಡ್ಡಿ ಎಂಬಾತ ಕಳೆದ 11 ವರ್ಷಗಳ ಹಿಂದೆ ಲಕ್ಷ್ಮೀ ಎಂಬಾಕೆಯನ್ನ ಮದುವೆಯಾಗಿದ್ದ. ಇಬ್ಬರು ಅನ್ಯೋನ್ಯವಾಗಿಯೇ ಇದ್ದರು. ಆದ್ರೆ, ಈ ಮಧ್ಯೆ ಲಕ್ಷ್ಮೀ ಪರಪುರುಷರ ವ್ಯಾಮೋಹಕ್ಕೆ ಸಿಲುಕಿ ಪತಿಯನ್ನೇ ಕೊಲೆ ಮಾಡಿದ್ದಾಳೆ. ನಂತರ ಹಾರ್ಟ್​​​ ಅಟ್ಯಾಕ್​​​​ನಿಂದ ಗಂಡ ಸಾವನ್ನಪ್ಪಿದ್ದಾನೆಂದು ಕಥೆ ಕಟ್ಟಿದ್ದಾಳೆ.

ಯಾದಗಿರಿ ಜಿಲ್ಲೆ ಹುಣಸಗಿ ಪಟ್ಟಣದ ಈ ಮಾನಪ್ಪ ಬಂಕಲದೊಡ್ಡಿ, 11 ವರ್ಷಗಳಿಂದೆ ಈ ಲಕ್ಷ್ಮೀಯನ್ನ ಮದುವೆ ಆಗಿದ್ದ. ಆದರೆ ಇತ್ತೀಚೆ ಲಕ್ಷ್ಮೀ ದಾರಿ ತಪ್ಪಿದ್ದಳು. ಕೆಲವರ ಜತೆ ಅಕ್ರಮ ಸಂಬಂಧ ಇಟ್ಕೊಂಡಿದ್ದಳು. ಈ ವಿಷಯ ಗಂಡನಿಗೆ ಗೊತ್ತಾಗಿ ಜಗಳ ಆಗಿತ್ತು. ಮೊನ್ನೆ ರಾತ್ರಿ ದಂಪತಿ ನಡುವೆ ಮತ್ತೆ ಗಲಾಟೆ ಆಗಿದೆ. ಅದೇ ರಾತ್ರಿ ಪ್ರಿಯಕರನನ್ನ ಮನೆಗೆ ಕರೆಸಿಕೊಂಡಿರುವ ಲಕ್ಷ್ಮೀ, ದಿಂಬಿನಿಂದ ಪತಿಯ ಉಸಿರು ಗಟ್ಟಿಸಿಕೊಂದಿದ್ದಾಳೆ. ಬಳಿಕ ಹೃದಯಾಘಾತದ ನಾಟಕವಾಡಿದ್ದಾಳೆ.

ಇದನ್ನೂ ಓದಿ: ಮೈಸೂರು: ಪರ ಪುರಷನೊಂದಿಗೆ ಓಡಿಹೋಗಿದ್ದ ಹೆಂಡ್ತಿಯ ಶಿರಚ್ಛೇದ ಮಾಡಿದ ಪತಿ

ಕೊಲೆ ಬಳಿಕ ತನಗೇನು ಗೊತ್ತೇ ಇಲ್ಲ ಎನ್ನುವಂತೆ ಮೃತ ಗಂಡನ ಮುಂದೆ ಕುಳಿತು ಕಣ್ಣೀರ ಕೋಡಿ ಹರಿಸಿದ್ದಾಳೆ. ಹೃದಯಾಘಾತದಿಂದ ಸತ್ತ ಎಂದು ಸಂಬಂಧಿಕರನ್ನ ನಂಬಿಸೋಕೆ ಯತ್ನಿಸಿದ್ದಾಳೆ. ಆದ್ರೆ, ಶವದ ಮೇಲಿದ್ದ ರಕ್ತಗಾಯ, ಹೆಪ್ಪುಗಟ್ಟಿದ್ದ ರಕ್ತ ಮರೆಮಾಚುವುದಕ್ಕೆ ಸಾಧ್ಯವಾಗಿಲ್ಲ. ಮೃತ ಮುಖದ ಮೇಲಿನ ರಕ್ತ ನೋಡಿಯೇ ಊರಿನ ಜನರಿಗೆ ಈಕೆ ಮೇಲೆ ಅನುಮಾನ ಹುಟ್ಟಿದೆ. ಇದು ಹೃದಯಘಾತ ಅಲ್ವೇ ಅಲ್ಲ. ಇದೊಂದು ಕೊಲೆ ಎಂದು ಹೆಣದ ಮುಂದೆ ಕೂಗಾಡಿದ್ದಾರೆ. ನಂತರ ಲಕ್ಷ್ಮೀ ಊರಿನ ಜನರ ಜತೆಗೆ ಜಗಳಕ್ಕಿಳಿದಿದ್ದಾಳೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಸಿಪಿಐ, ಆನಂದ ವಾಗ್ಮೋಡೆ, ಡಿವೈಎಸ್ಪಿ ಜಾವೀದ್ ಇನಾಮದಾರ್ ಭೇಟಿ ನೀಡಿ ಘಟನೆಯ ಮಾಹಿತಿ ಪಡೆದಿದ್ದಾರೆ. ಬಳಿಕ ಪತ್ನಿ ಲಕ್ಷ್ಮೀಯನ್ನು ಬಂಧಿಸಿದ್ದು, ಇನ್ನು ಆಕೆಗೆ ಸಹಕರಿಸಿದ ಪ್ರೀಯಕರನಿಗಾಗಿ ಬಲೆ ಬೀಸಿದ್ದಾರೆ.

ಒಟ್ಟಿನಲ್ಲಿ ಜೀವಕ್ಕೆ ಜೀವ ಅಂತ ಪ್ರೀತಿಸ್ತಿದ್ದ ಗಂಡನಿಗೆ ಪಾಪಿ ಪತ್ನಿ ಚಟ್ಟ ಕಟ್ಟಿದ್ದಾಳೆ. ಸುಮನಾತಿ ಹೆಂಡತಿಯ ಹೇಯ ಕೃತ್ಯಕ್ಕೆ ಇಡೀ ಊರಿಗೆ ಊರೇ ಬೆಚ್ಚಿಬಿದ್ದಿರೋದಂತೂ ಸುಳ್ಳಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ameen Sab
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ