AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಹೆಂಡತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದವರನ್ನು ಕೊಲ್ಲಲು ಗಂಡ ಮಾಡಿದ ಪ್ಲಾನ್ ಅಂತಿಂಥದ್ದಲ್ಲ!

Crime News: ಹೆಂಡತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪಿಗಳನ್ನು ಕೊಲ್ಲಲು ಆಕೆಯ ಗಂಡ ಇಂಟರ್​ನೆಟ್​ ನೋಡಿ ಬಾಂಬ್ ತಯಾರಿಸುವುದನ್ನು ಕಲಿತಿದ್ದ.

Shocking News: ಹೆಂಡತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದವರನ್ನು ಕೊಲ್ಲಲು ಗಂಡ ಮಾಡಿದ ಪ್ಲಾನ್ ಅಂತಿಂಥದ್ದಲ್ಲ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 19, 2022 | 3:16 PM

Share

ನವದೆಹಲಿ: ಮಧ್ಯಪ್ರದೇಶದ ರತ್ಲಾಮ್‌ನಲ್ಲಿ ತನ್ನ ಪತ್ನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರಕ್ಕೆ (Gang Rape) ಪ್ರತೀಕಾರ ತೀರಿಸಿಕೊಳ್ಳಲು ನಿರ್ಧರಿಸಿದ ಗಂಡ ಅದಕ್ಕಾಗಿ ಯಾವ ರೀತಿಯ ಪ್ಲಾನ್ ಮಾಡಿದ ಎಂಬುದು ಗೊತ್ತಾದರೆ ನೀವು ಶಾಕ್ ಆಗುವುದು ಗ್ಯಾರಂಟಿ. ತನ್ನ ಹೆಂಡತಿ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಯನ್ನು ಆತ ಬಾಂಬ್ ಸಿಡಿಸಿ ಕೊಂದಿದ್ದಾನೆ. ಇದೀಗ ಆ ಕೊಲೆ ಮಾಡಿದ 32 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭನ್ವರ್ ಲಾಲ್ ಮತ್ತು ದಿನೇಶ್ ಎಂಬ ಇಬ್ಬರು ವ್ಯಕ್ತಿಗಳನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಂಡತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪಿಗಳನ್ನು ಕೊಲ್ಲಲು ಆಕೆಯ ಗಂಡ ಇಂಟರ್​ನೆಟ್​ ನೋಡಿ ಬಾಂಬ್ ತಯಾರಿಸುವುದನ್ನು ಕಲಿತಿದ್ದ. ಆನ್​ಲೈನ್ ಮೂಲಕ ಬಾಂಬ್ ತಯಾರಿಸುವುದನ್ನು ಕಲಿತು, ಆ ಬಾಂಬ್​ನಿಂದ ಓರ್ವ ಅತ್ಯಾಚಾರಿಯನ್ನು ಕೊಂದಿದ್ದಾನೆ. ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಗ್ರಾಮಸ್ಥರಾದ ಭನ್ವರ್ ಲಾಲ್ ಮತ್ತು ದಿನೇಶ್ ಅವರನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ರತ್ಲಾಮ್ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ತಿವಾರಿ ಮಾತನಾಡಿ, ಜನವರಿ 4ರಂದು ಹಳ್ಳಿಯ ಲಾಲ್ ಸಿಂಗ್ ಎಂಬಾತ ತಮ್ಮ ಕೃಷಿ ಭೂಮಿಯಲ್ಲಿನ ಕೊಳವೆ ಬಾವಿಯ ಬಳಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದ್ದ. ಜಿಲೆಟಿನ್ ರಾಡ್ ಮತ್ತು ಡಿಟೋನೇಟರ್​ನಿಂದಾಗಿ ಸ್ಫೋಟ ಸಂಭವಿಸಿದೆ ಎಂದು ವಿಧಿವಿಜ್ಞಾನ ತಜ್ಞರು ಮಾಹಿತಿ ನೀಡಿದ್ದರು. ಆದರೆ ತನಿಖೆಯಲ್ಲಿ, ಮಾಜಿ ಸರಪಂಚ್ ಭನ್ವರ್ ಲಾಲ್ ಅವರ ಕೊಳವೆ ಬಾವಿಯಲ್ಲಿ ಆಗಸ್ಟ್‌ನಲ್ಲಿ ಇದೇ ರೀತಿಯ ಸ್ಫೋಟ ಸಂಭವಿಸಿದೆ ಎಂದು ಗೊತ್ತಾಗಿತ್ತು. ಆ ಘಟನೆಯಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿತ್ತು.

“ಈ ಘಟನೆಯ ನಂತರ ಗ್ರಾಮದಿಂದ ಕಾಣೆಯಾದ ಕುಟುಂಬವನ್ನು ಪೊಲೀಸರು ಕಂಡುಕೊಂಡರು. ಪೊಲೀಸರು ಜನವರಿ 7ರಂದು ಮಂದ್‌ಸೌರ್‌ನಿಂದ ವ್ಯಕ್ತಿ ಮತ್ತು ಅವರ ಕುಟುಂಬ ಸದಸ್ಯರನ್ನು ವಶಕ್ಕೆ ತೆಗೆದುಕೊಂಡರು. ವಿಚಾರಣೆಯ ಸಮಯದಲ್ಲಿ, ವ್ಯಕ್ತಿ ತನ್ನ ಅಪರಾಧವನ್ನು ಒಪ್ಪಿಕೊಂಡ ಆತ ಅವನು ತನ್ನ ಹೆಂಡತಿಯ ಮೇಲೆ ಸಾಮೂಹಿಕ ಅತ್ಯಾಚಾರದ ಪ್ರತೀಕಾರವನ್ನು ತೆಗೆದುಕೊಳ್ಳುತ್ತಿರುವುದಾಗಿ ತಿಳಿಸಿದನು.

ಪೊಲೀಸರಿಗೆ ದಾಖಲಿಸಿದ ಹೇಳಿಕೆಯಲ್ಲಿ ಆರೋಪಿಗಳು ಈ ವರ್ಷದ ಜುಲೈನಲ್ಲಿ ಲಾಲ್ ಸಿಂಗ್, ಭವರ್‌ಲಾಲ್ ಮತ್ತು ದಿನೇಶ್ ಅವರ ಮನೆಗೆ ನುಗ್ಗಿ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ್ದ. ಆಕೆಯ ಗಂಡ ಅವರನ್ನು ತಡೆಯಲು ಪ್ರಯತ್ನಿಸಿದನು. ಆದರೆ ಅವರು ಅವನನ್ನು ಥಳಿಸಿ, ಆತನ ಹೆಂಡತಿಯ ಮೇಲೆ ಅತ್ಯಾಚಾರ ನಡೆಸಿದರು. ಆರೋಪಿಗಳು ಬೆದರಿಕೆ ಹಾಕಿದ್ದರಿಂದ ಆ ವ್ಯಕ್ತಿ ಪೊಲೀಸರಿಗೆ ವಿಷಯವನ್ನು ತಿಳಿಸಲಿಲ್ಲ. ಆದರೆ, ತನ್ನ ಹೆಂಡತಿ ಮೇಲೆ ಅತ್ಯಾಚಾರವೆಸಗಿದವರ ಮೇಲೆ ಸೇಡು ತೀರಿಸಿಕೊಳ್ಳಲು ನಿರ್ಧರಿಸಿದನು.

ಆರೋಪಿಗಳು ಬಾಂಬ್ ಅನ್ನು ಹೇಗೆ ತಯಾರಿಸಿ, ಜೋಡಿಸುವುದು ಎಂಬುದನ್ನು ಇಂಟರ್​ನೆಟ್​ನಿಂದ ಕಲಿತರು. ಅವರು ಮೊದಲು ಭನ್ವರ್‌ಲಾಲ್ ಅವರ ಕೊಳವೆ ಬಾವಿಗೆ ಬಾಂಬ್ ಅಳವಡಿಸಿದರು. ಆದರೆ, ಸ್ಫೋಟದಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿ ಬದುಕುಳಿದರು. ಬಳಿಕ ಲಾಲ್ ಸಿಂಗ್ ಮೇಲೆ ಹೆಚ್ಚು ಜಿಲೆಟಿನ್ ರಾಡ್ ನಿಂದ ಹಲ್ಲೆ ನಡೆಸಿದ್ದಾನೆ’ ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ.

ಇದನ್ನೂ ಓದಿ: Shocking News: ಪ್ರಾಣಿ ಬಲಿ ವೇಳೆ ಕುರಿಯ ಬದಲು ಮನುಷ್ಯನ ತಲೆ ಕತ್ತರಿಸಿದ ಕುಡುಕ!

Shocking News: ಅಜ್ಜಿ ಪಕ್ಕ ಮಲಗಿದ್ದ ಮಗುವನ್ನು ಎತ್ತಿಕೊಂಡು ನೀರಿನ ಟ್ಯಾಂಕ್​ನಲ್ಲಿ ಹಾಕಿದ ಕೋತಿಗಳು!

Published On - 3:15 pm, Wed, 19 January 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು