AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಕಳ್ಳತನ ಮಾಡಿದ ಮಗಳನ್ನು ಹೊಡೆದು, ಸುಟ್ಟು ಹಾಕಿ ಕೊಂದ ತಾಯಿ!

Crime News: ಮಗಳನ್ನು ಹೊಡೆದದ್ದೂ ಅಲ್ಲದೆ ತನ್ನ ಮಗಳ ತೊಡೆ ಮತ್ತು ತುಟಿಗಳ ಮೇಲೆ ಬಿಸಿ ಚಮಚದಿಂದ ಬರೆ ಹಾಕಿದ್ದಳು. ಅಲ್ಲದೆ, ಮೆಣಸಿನ ಪುಡಿಯನ್ನು ಮೂಗಿನ ಬಳಿ ಹಿಡಿದು ಉಸಿರಾಡಲು ಹೇಳಿದ್ದಳು. ಇದರಿಂದ ಗಾಯಗೊಂಡಿದ್ದ ಆ ಬಾಲಕಿ ಸಾವನ್ನಪ್ಪಿದ್ದಾಳೆ.

Shocking News: ಕಳ್ಳತನ ಮಾಡಿದ ಮಗಳನ್ನು ಹೊಡೆದು, ಸುಟ್ಟು ಹಾಕಿ ಕೊಂದ ತಾಯಿ!
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 10, 2022 | 6:04 PM

ತಿರುಚ್ಚಿ: ವೆಪ್ಪಂತಟ್ಟೈ ಪಂಚಾಯತ್ ಯೂನಿಯನ್ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿಯಲ್ಲಿ ಓದುತ್ತಿದ್ದ 9 ವರ್ಷದ ಬಾಲಕಿಯೊಬ್ಬಳು ಹಣ ಕದ್ದ ಆರೋಪದ ಮೇಲೆ ಆಕೆಯ ತಾಯಿಯೇ ತನ್ನ ಮಗಳನ್ನು ಕೊಲೆ ಮಾಡಿದ್ದಾಳೆ. ವೆಪ್ಪಂತಟ್ಟೈ ಗ್ರಾಮ ಆಡಳಿತಾಧಿಕಾರಿ (ವಿಎಒ) ನೀಡಿದ ದೂರಿನ ಆಧಾರದ ಮೇಲೆ ಪೆರಂಬಲೂರು ಮಹಿಳಾ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಆ ಬಾಲಕಿಯ ಮೈಯನ್ನು ಬಿಸಿ ಚಮಚದಿಂದ ಸುಟ್ಟು, ಗಾಯಗೊಳಿಸಿದ್ದಾಳೆ. ನಂತರ ಆಕೆ ಸಾವನ್ನಪ್ಪಿದ್ದಾಳೆ.

ಪಿರ್ಯಾದಿದಾರರ ಪ್ರಕಾರ, ವೆಪ್ಪಂತಟ್ಟೈನ ತಿದೀರ್ ಕುಪ್ಪಂನಲ್ಲಿ ವಾಸವಿದ್ದ ಮಣಿಮೇಕಲೈ ಮತ್ತು ರಾಜ ಎಂಬುವವರ ಮಗಳು 70 ರೂ. ಕಳ್ಳತನ ಮಾಡಿದ್ದಳು. ಇದಕ್ಕಾಗಿ ತಾಯಿ ಮಗುವಿಗೆ ಥಳಿಸಿದ್ದರು. ಮಗಳನ್ನು ಹೊಡೆದದ್ದೂ ಅಲ್ಲದೆ ತನ್ನ ಮಗಳ ತೊಡೆ ಮತ್ತು ತುಟಿಗಳ ಮೇಲೆ ಬಿಸಿ ಚಮಚದಿಂದ ಬರೆ ಹಾಕಿದ್ದಳು. ಅಲ್ಲದೆ, ಮೆಣಸಿನ ಪುಡಿಯನ್ನು ಮೂಗಿನ ಬಳಿ ಹಿಡಿದು ಉಸಿರಾಡಲು ಹೇಳಿದ್ದಳು ಎಂದು ದೂರುದಾರರು ಆರೋಪಿಸಿದ್ದಾರೆ.

ಈ ಘಟನೆ ಜನವರಿ 5ರಂದು ನಡೆದಿದೆ. ಇದರಿಂದ ಗಾಯಗೊಂಡ ಮಗು ಆಘಾತಕ್ಕೊಳಗಾಗಿದ್ದು, 2 ದಿನಗಳ ಕಾಲ ಊಟ ಮಾಡಲು ಸಾಧ್ಯವಾಗಿರಲಿಲ್ಲ. ಮಗುವಿಗೆ ಬಹಳ ಗಾಯಗಳಾಗಿದ್ದರಿಂದ ಹತ್ತಿರದ ಔಷಧಾಲಯದಿಂದ ಔಷಧಿಗಳನ್ನು ಖರೀದಿಸಲಾಯಿತು. ನಂತರ ಆ ಮಗುವನ್ನು ಕೃಷ್ಣಪುರಂನಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಂದ ಆ ಬಾಲಕಿಯನ್ನು ತಿರುಚ್ಚಿ ಮಹಾತ್ಮ ಗಾಂಧಿ ಸ್ಮಾರಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ, ಚಿಕಿತ್ಸೆಗೆ ಸ್ಪಂದಿಸದ ಮಗು ಭಾನುವಾರ ಮುಂಜಾನೆ ಮೃತಪಟ್ಟಿದೆ. ಮಗುವಿನ ಸಾವಿನ ನಂತರವೇ ಘಟನೆ ಬೆಳಕಿಗೆ ಬಂದಿದೆ ಎಂದು ದೂರುದಾರ ಸತೀಶ್ ಪೊಲೀಸರಿಗೆ ತಿಳಿಸಿದ್ದಾರೆ. ತಿರುಚ್ಚಿ ಸರ್ಕಾರಿ ಆಸ್ಪತ್ರೆಯಲ್ಲಿರುವ ವೈದ್ಯರು ಶವ ಪರೀಕ್ಷೆಯ ನಂತರ ವರದಿಯನ್ನು ನೀಡಲಿದ್ದು, ಮುಂದಿನ ತನಿಖೆಯನ್ನು ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Crime News: ಪ್ರಿಯಕರನೊಂದಿಗೆ ಸೇರಿ ಅತ್ತೆ-ಮಾವನನ್ನೇ ಕೊಂದು, ಸುಟ್ಟು ಹಾಕಿದ ಸೊಸೆ

Murder: ಮರುಮದುವೆಯಾಗಲು ಮುಂದಾದ 80 ವರ್ಷದ ತಂದೆಯನ್ನು ಕೊಚ್ಚಿ ಕೊಂದ ಮಗ!

ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ