AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: 22 ವರ್ಷದ ಸೇಡು; ಸಾಲ ಮಾಡಿ ಟ್ರಕ್ ಖರೀದಿಸಿ ತಂದೆಯ ಹಂತಕರನ್ನು ಕೊಂದ ಮಗ

ಅಪ್ಪನ ಸಾವಿಗೆ ಕಾರಣರಾದವರನ್ನು ಕೊಲ್ಲಬೇಕೆಂದು 22 ವರ್ಷಗಳು ಕಾದಿದ್ದ ಮಗ ಅದಕ್ಕಾಗಿ ಸಾಲ ಮಾಡಿ ಟ್ರಕ್ ಖರೀದಿಸಿದ್ದ. ಅದೇ ಟ್ರಕ್​ನಿಂದ ಅಪ್ಪನ ಹಂತಕರನ್ನು ಕೊಂದಿರುವ ಘಟನೆ ಅಹಮದಾಬಾದ್‌ನಲ್ಲಿ ನಡೆದಿದೆ. ಈ ಕತೆ ಕೇಳಿದರೆ ನಿಮಗೆ ಆಶ್ಚರ್ಯವಾಗದೇ ಇರಲು ಸಾಧ್ಯವೇ ಇಲ್ಲ.

Shocking News: 22 ವರ್ಷದ ಸೇಡು; ಸಾಲ ಮಾಡಿ ಟ್ರಕ್ ಖರೀದಿಸಿ ತಂದೆಯ ಹಂತಕರನ್ನು ಕೊಂದ ಮಗ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on:Oct 05, 2024 | 10:16 PM

Share

ಅಹಮದಾಬಾದ್: ಆಘಾತಕಾರಿ ಘಟನೆಯೊಂದರಲ್ಲಿ ಅಹಮದಾಬಾದ್‌ನ ಬೋಡಕ್‌ದೇವ್‌ನಲ್ಲಿ 30 ವರ್ಷದ ವ್ಯಕ್ತಿಯೊಬ್ಬ ತನ್ನ ತಂದೆಯ ಕೊಲೆಗಾರರನ್ನು ಕೊಲ್ಲಲು 22 ವರ್ಷಗಳ ಕಾಲ ಕಾದಿದ್ದ. ಇದೀಗ ತನ್ನ ತಂದೆಯ ಕೊಲೆಗಾರನ ಮೇಲೆ ಟ್ರಕ್ ಹರಿಸಿ ಕೊಂದಿದ್ದಾನೆ. ಆರೋಪಿಯನ್ನು ಗೋಪಾಲ್ ಸಿಂಗ್ ಭಾಟಿ ಎಂದು ಗುರುತಿಸಲಾಗಿದ್ದು, ಆತನ ತಂದೆಯನ್ನು ಇದೇ ರೀತಿ 22 ವರ್ಷದ ಹಿಂದೆ ಕೊಲೆ ಮಾಡಲಾಗಿತ್ತು. ಆಗ ಆತನಿಗೆ ಕೇವಲ ಎಂಟು ವರ್ಷವಾಗಿತ್ತು.

22 ವರ್ಷದ ಹಿಂದಿನ ಸೇಡನ್ನು ಈಗ ತೀರಿಸಿಕೊಂಡಿರುವ ಗೋಪಾಲ್ ತನ್ನ ತಂದೆಯನ್ನು ಕೊಲೆ ಮಾಡಿದವರನ್ನು ಅದೇ ರೀತಿಯಲ್ಲಿ ಕೊಲೆ ಮಾಡಿದ್ದಾನೆ. ಕೊಲೆಯಾದ 50 ವರ್ಷದ ನಖತ್ ಸಿಂಗ್ ಭಾಟಿ ಮೂಲತಃ ಜೈಸಲ್ಮೇರ್‌ನವರು. ಅವರು ತಾಲ್ತೇಜ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮಂಗಳವಾರ ಮಧ್ಯಾಹ್ನ ನಖತ್ ತನ್ನ ಬೈಸಿಕಲ್‌ನಲ್ಲಿ ಹೋಗುತ್ತಿದ್ದಾಗ ಗೋಪಾಲ್ ಚಲಾಯಿಸುತ್ತಿದ್ದ ಟ್ರಕ್‌ ಅವರ ಮೇಲೆ ಹರಿದಿದೆ. ಇದು ಮೇಲ್ನೋಟಕ್ಕೆ ಅಪಘಾತದಂತೆ ಕಂಡುಬಂದಿತ್ತು.

ಇದನ್ನೂ ಓದಿ: ಬಯಲಾಯ್ತು ಬೆಂಗಳೂರು ಮಹಾಲಕ್ಷ್ಮೀ ಕೊಲೆ ರಹಸ್ಯ: ಪ್ರಿಯಕರ ಮುಕ್ತಿರಂಜನ್ ​​ಆಕೆಯ ದೇಹವನ್ನು 57 ಪೀಸ್​ ಮಾಡಿದ್ದೇಕೆ?

ಆದರೆ, ಹೆಚ್ಚಿನ ತನಿಖೆಯಿಂದ ಇದು ಪೂರ್ವಯೋಜಿತ ಸೇಡಿನ ಕೃತ್ಯ ಎಂದು ತಿಳಿದುಬಂದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಭಾಟಿ ಹಗಲು ಹೊತ್ತಿನಲ್ಲಿ ತನ್ನ ತಂದೆಯ ಕೊಲೆಗಾರನನ್ನು ಹಿಂದಿನಿಂದ ಟ್ರಕ್​ನಲ್ಲಿ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿರುವುದನ್ನು ತೋರಿಸುತ್ತದೆ.

ಪೋಲೀಸರ ಪ್ರಕಾರ, 2002ರಲ್ಲಿ ಜೈಸಲ್ಮೇರ್‌ನಲ್ಲಿ ಗೋಪಾಲ್ ಅವರ ತಂದೆ ಹರಿ ಸಿಂಗ್ ಭಾಟಿ ಅವರನ್ನು ಟ್ರಕ್‌ ಹತ್ತಿಸಿ ಸಾಯಿಸಲಾಯಿತು. ಈ ಕೃತ್ಯಕ್ಕಾಗಿ ನಖತ್ ಮತ್ತು ಅವರ ನಾಲ್ವರು ಸಹೋದರರನ್ನು ಅಪರಾಧಿ ಎಂದು ಘೋಷಿಸಲಾಯಿತು. ಈ ಕೊಲೆಯ ಅಪರಾಧಕ್ಕಾಗಿ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಅದಾದ ಮೇಲೆ ಅವರು ಬಿಡುಗಡೆಯಾಗಿದ್ದರು.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ 4 ನೇ ತರಗತಿ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ; ಟಿಎಂಸಿ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಅವರ ವಿರುದ್ಧ ಸೇಡು ತೀರಿಸಿಕೊಳ್ಳಲು ಗೋಪಾಲ್ ಕಾಯುತ್ತಿದ್ದ. ಈ ಘಟನೆ ನಡೆಯುವ ಒಂದು ವಾರದ ಮೊದಲು ಗೋಪಾಲ್ ಅವರು 8 ಲಕ್ಷ ರೂಪಾಯಿಗೆ ಪಿಕಪ್ ಟ್ರಕ್ ಖರೀದಿಸಿದ್ದರು. ಮುಂಗಡ ಪಾವತಿಯಾಗಿ 1.25 ಲಕ್ಷ ರೂ. ಪಾವತಿಸಿ ಉಳಿದ ಮೊತ್ತಕ್ಕೆ ಬ್ಯಾಂಕ್ ಸಾಲ ಪಡೆದಿದ್ದರು. ಗೋಪಾಲ್ ಅವರ ಮೊಬೈಲ್ ದಾಖಲೆಗಳ ಸಾಕ್ಷ್ಯಾಧಾರಗಳ ಪ್ರಕಾರ, ಕಳೆದ ವಾರದಲ್ಲಿ ಅವರು ನಖತ್ ನಿವಾಸಕ್ಕೆ ಹಲವಾರು ಬಾರಿ ಭೇಟಿ ನೀಡಿದ್ದರು. ಗೋಪಾಲ್ ದಾಳಿಗೆ ಯೋಜಿಸಿದ್ದರು ಎಂದು ತಿಳಿದುಬಂದಿದೆ.

ಮಂಗಳವಾರ, ನಖತ್ ಮೇಲೆ ಟ್ರಕ್ ಓಡಿಸಿ ಕೊಂದ ನಂತರ, ಗೋಪಾಲ್ ಪರಾರಿಯಾಗಲು ಪ್ರಯತ್ನಿಸಿದನು. ಆದರೆ ಅಪರಾಧದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಪೊಲೀಸರು ಆತನನ್ನು ಬಂಧಿಸಿದರು. ಆರಂಭದಲ್ಲಿ ನಿರ್ಲಕ್ಷ್ಯದ ಚಾಲನೆಯಿಂದ ಸಾವಿಗೆ ಕಾರಣವಾದ ಆರೋಪ ಹೊರಿಸಲಾಗಿತ್ತು. ಆದರೆ ಇದೀಗ ಆತ ಕೊಲೆ ಆರೋಪ ಎದುರಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:38 pm, Sat, 5 October 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ